Just In
- 58 min ago ಭಾರತದಲ್ಲಿ ಎಪ್ರಿಲಿಯಾ ಶ್ರೇಣಿಯ ನವೀಕರಣ... ಸೂಪರ್ ಬೈಕ್ ಸಂಸ್ಕೃತಿಗೆ ಅಡಿಪಾಯ
- 1 hr ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಇನ್ನೋವಾ ಹೈಕ್ರಾಸ್ನ ಹೊಸ ರೂಪಾಂತರದ ವಿಶೇಷತೆಗಳೇನು?
- 2 hrs ago Bengaluru: ಇಂದಿನಿಂದ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ವಾಹನಗಳ ಸಂಚಾರ ಬಂದ್.. ಪರ್ಯಾಯ ಮಾರ್ಗಗಳಾವುವು?
- 4 hrs ago ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
Don't Miss!
- News Namma Yatri: ಕ್ಯಾಬ್ ಸೇವೆ ಆರಂಭಿಸಿದ ನಮ್ಮ ಯಾತ್ರಿ; 25,000 ಚಾಲಕರ ನೇಮಕ
- Technology HMD ಪಲ್ಸ್ ನ ಕಲರ್ ಹಾಗೂ ಫೀಚರ್ಸ್ ಲೀಕ್! ಶೀಘ್ರದಲ್ಲೇ ಲಾಂಚ್...
- Lifestyle ರಾಮನವಮಿ ವಿಶೇಷ: ಬಾಲರಾಮನಿಗೆ ಸೂರ್ಯರಶ್ಮಿ ಅಭಿಷೇಕದ ಅದ್ಭುತ ದೃಶ್ಯಾವಳಿ..!
- Finance ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಕ್ಯಾಬ್ ಸೇವೆ ಪ್ರಾರಂಭ, ಶೂನ್ಯ ಕಮಿಷನ್ ಭರವಸೆ
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- Movies ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ
ಚೀನಾದಿಂದ ಹರಡಲಾರಂಭಿಸಿದ ಕರೋನಾ ವೈರಸ್ ಇಂದು ಜಗತ್ತಿನಾದ್ಯಂತ ಆತಂಕವನ್ನು ಸೃಷ್ಟಿಸುತ್ತಿದೆ. ಈಗಾಗಲೇ ನಮ್ಮ ರಾಜ್ಯಕ್ಕೂ ಕಾಲಿಟ್ಟಿರುವ ಕರೋನಾ ವೈರಸ್ ಆತಂಕವನ್ನು ಹುಟ್ಟಿಸಿದೆ.
ರಾಜ್ಯ ಸರ್ಕಾರವು ಕೂಡ ಕರೋನಾ ವೈರಸ್ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ ಕರೋನ ವೈರಸ್ ವಿರುದ್ಧದ ರಾಜ್ಯ ಸರ್ಕಾರ ಹೋರಾಟಕ್ಕೆ ಓಲಾ ಸಹಾಯ ಹಸ್ತ ಚಾಚಿದೆ. ರಾಜ್ಯದಲ್ಲಿ ವೈದರು ಸಂಚರಿಸಲು ಮತ್ತು ತುರ್ತು ಆರೋಗ್ಯ ಸೇವೆಗಳಿಗೆ ಓಲಾದ 500 ಕಾರುಗಳನ್ನು ನೀಡಲಿದೆ. ಈ ವಿಚಾರವನ್ನು ಉಪಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥ್ ನಾರಾಯಣ್ ಅವರು ಟ್ವೀಟ್ ಮಾಡುವ ಮೂಲಕ ಖಚಿತ ಪಡಿಸಿದ್ದಾರೆ.
ಓಲಾ ಕ್ಯಾಬ್ ವೈದರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ವೈದಕೀಯ ಉಪಕರಣಗಳನ್ನು ಸಾಗಿಸಲು ಬಳಸಲಾಗುತ್ತದೆ. ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಲ್ಲಿ ಈ ಓಲಾ ಕಾರುಗಳು ಸೇವೆಗೆ ಲಭ್ಯವಿರಲಿದೆ.
ದೇಶಾದ್ಯಂತ ಲಾಕ್ಡೌನ್ ಆಗಿರುವುದರಿಂದ ಓಲಾ ಕ್ಯಾಬ್ಗಳು ತಮ್ಮ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಕರೋನಾ ಎಂಬ ಮಹಾಮಾರಿ ಸೋಂಕಿನ ವಿರುದ್ದ ಹೋರಾಟಕ್ಕೆ ರಾಜ್ಯ ಸರ್ಕಾರದ ಜೊತೆ ಕೈ ಜೋಡಿಸಿದೆ.
ಈ ವಿಷಯದ ಬಗ್ಗೆ ಉಪಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥ್ ನಾರಾಯಣ್ ಅವರು ಟ್ವೀಟ್ ಮಾಡುವ ಮೂಲಕ ಓಲಾ ಸಂಸ್ಥೆ ಮತ್ತು ಕಂಪನಿಯ ಸಿಇಒ ಭವಿಷ್ ಅಗರ್ವಾಲ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಕರೋನಾ ವಿರುದ್ದದ ಹೋರಾಟಕ್ಕೆ ಓಲಾದ 500 ಕಾರುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಅಲ್ಲದೇ ಓಲಾ ಚಾಲಕರಿಗೆ ನೆರವಾಗುವ ಉದ್ದೇಶದಿಂದ ಓಲಾ ಕಂಪನಿಯು ಓಲಾ ಫೌಂಡೇಶನ್ ಅಡಿಯಲ್ಲಿ ಸಹಾಯ ಹಸ್ತ ಚಾಚಲು ಮುಂದಾಗಿದೆ. ಇದರನ್ವಯ ಓಲಾ ಫೌಂಡೇಶನ್ ಡ್ರೈವ್ ದಿ ಡ್ರೈವರ್ ಫಂಡ್ ಕಾರ್ಯಕ್ರಮವನ್ನು ಆರಂಭಿಸಿದೆ.
MOST READ: ಬಿಎಸ್-6 ಎಂಜಿನ್ನಲ್ಲಿ ಬಿಡುಗಡೆಯಾಯ್ತು 2020ರ ಹ್ಯುಂಡೈ ವೆರ್ನಾ ಫೇಸ್ಲಿಫ್ಟ್ ಕಾರು
ಈ ಅಭಿಯಾನದಡಿಯಲ್ಲಿ ಓಲಾ ಗ್ರೂಪ್ ಹಾಗೂ ಅದರಲ್ಲಿ ಹೂಡಿಕೆ ಮಾಡಿರುವವರು ಓಲಾದ ಆಟೋ ರಿಕ್ಷಾ, ಕ್ಯಾಬ್ ಚಾಲಕರಿಗೆ ಸಹಾಯ ಮಾಡಲಿದ್ದಾರೆ. ಓಲಾ ಗ್ರೂಪ್ ಈ ನಿಧಿಗೆ ರೂ.20 ಕೋಟಿಗಳನ್ನು ನೀಡಲಿದೆ. ಓಲಾ ಕಂಪನಿಯ ಸಿಇಒ ಹಾಗೂ ಸಹ ಸಂಸ್ಥಾಪಕರಾದ ಭನಿಶ್ ಅಗರ್ವಾಲ್ ರವರು ಇದರ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
MOST READ: ಡೀಸೆಲ್ ಕಾರುಗಳ ಬದಲಿಗೆ ಪೆಟ್ರೋಲ್ ಕಾರುಗಳತ್ತ ಗ್ರಾಹಕರ ಒಲವು
ಈ ನಿಧಿಯನ್ನು ತಕ್ಷಣಕ್ಕೆ ನೆರವು ನೀಡಲು ಬಳಸಲಾಗುವುದು. ಕಂಪನಿಯ ಚಾಲಕರು ಹಾಗೂ ಅವರ ಕುಟುಂಬಗಳಿಗೆ ಉಚಿತ ವೈದ್ಯಕೀಯ ಸೌಲಭ್ಯ ಸಹ ನೀಡಲಾಗುತ್ತದೆ.
MOST READ: ಬಿಎಸ್-6 ಎಂಜಿನ್ನಲ್ಲಿ ಬಿಡುಗಡೆಯಾಯ್ತು ಮಹೀಂದ್ರಾ ಬೊಲೆರೊ
ಒಟ್ಟಿನಲ್ಲಿ ಕರೋನಾ ಎಂಬ ಮಹಾಮರಿಯ ವಿರುದ್ದ ಹೋರಾಡಲು ಹಲವಾರು ಖಾಸಗಿ ಸಂಸ್ಥೆಗಳು ಸರ್ಕಾರದ ಜೊತೆ ಕೈ ಜೋಡಿಸಿದೆ. ಬೆಂಗಳೂರು ಮೂಲದ ಓಲಾ ಸಂಸ್ಥೆಯು ರಾಜ್ಯ ಸರ್ಕಾರದ ಜೊತೆ ಕೈ ಜೋಡಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.