Just In
- 8 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 9 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 10 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 10 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಸಡಿಲಿಕೆ- ಕ್ಯಾಬ್ ಸೇವೆಗಳ ಪುನಾರಂಭಕ್ಕೆ ಸಿದ್ದವಾದ ಓಲಾ, ಉಬರ್
ಬರೋಬ್ಬರಿ ಒಂದೂವರಿ ತಿಂಗಳ ನಂತರ ಕೇಂದ್ರ ಸರ್ಕಾರವು ಲಾಕ್ಡೌನ್ ಅನ್ನು ಪರಿಸ್ಥಿತಿಗೆ ಅನುಗುಣವಾಗಿ ಸಡಲಿಕೆ ಮಾಡಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಪುನಾರಂಭಕ್ಕೆ ಕೆಲವು ಷರತ್ತುಬದ್ದ ಅವಕಾಶ ನೀಡಿದೆ.
ಕರೋನಾ ವೈರಸ್ ವ್ಯಾಪಿಸಿರುವ ಆಧಾರದ ಮೇಲೆ ಹಸಿರು, ಕಿತ್ತಳೆ ಮತ್ತು ಕೆಂಪು ವಲಯಗಳನ್ನಾಗಿ ವಿಂಗಡಿ ಕೆಲವು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿರುವ ಕೇಂದ್ರ ಸರ್ಕಾರವು ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಪುನಾರಂಭಕ್ಕೆ ಅವಕಾಶ ನೀಡಿದೆ. ಹೀಗಾಗಿ ಕೆಲವು ಸುರಕ್ಷಾ ಕ್ರಮಗಳೊಂದಿಗೆ ವಾಣಿಜ್ಯ ಚಟುವಟಿಕೆಗಳನ್ನು ಪುನಾರಂಭಿಸಿರುವ ಪ್ರಮುಖ ಆಟೋ ಕಂಪನಿಗಳು ಮತ್ತು ಕ್ಯಾಬ್ ಸೇವಾ ಕಂಪನಿಗಳು ಗ್ರಾಹಕರಿಗೆ ಗರಿಷ್ಠ ಸುರಕ್ಷತೆ ನೀಡುವ ಭರವಸೆ ನೀಡಿವೆ.
ಕ್ಯಾಬ್ ಸೇವೆಗಳನ್ನು ನೀಡುವಲ್ಲಿ ಮುಂಚೂಣಿಯಲ್ಲಿರುವ ಓಲಾ ಮತ್ತು ಉಬರ್ ಕಂಪನಿಗಳು ಸಹ ಕಳೆದ ಒಂದೂವರೆ ತಿಂಗಳ ನಂತರ ವಾಣಜ್ಯ ಚಟುವಟಿಕೆಗೆ ಪುನಾರಂಭಿಸುತ್ತಿದ್ದು, ಮೊದಲ ಹಂತವಾಗಿ ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಮಾತ್ರವೇ ಸೇವೆಗೆ ಮರುಚಾಲನೆ ನೀಡಲು ಸಿದ್ದತೆ ನಡೆಸಿವೆ.
ಕಳೆದ ಒಂದೂವರೆ ತಿಂಗಳಿನಿಂದಲೇ ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳಿಲ್ಲದಿರುವುದರಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿಯು ಶೋಚನೀಯ ಸ್ಥಿತಿಗೆ ತಲುಪಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಕೆಲವು ವಿನಾಯ್ತಿಗಳನ್ನು ನೀಡಲಾಗಿದೆ.
ಇನ್ನು ಮಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಓಲಾ ಮತ್ತು ಉಬರ್ ಕಂಪನಿಗಳು ತಮ್ಮದೆ ಆದ ಸೇವೆಯನ್ನು ನೀಡುತ್ತಿದ್ದು, ಕರೋನಾ ವಾರಿರ್ಯಸ್ಗಳಿಗೆ ದೇಶದ ವಿವಿಧಡೆ ಸುಮಾರು ರೂ.1 ಕೋಟಿ ಮೌಲ್ಯದಷ್ಟು ಉಚಿತ ಸೇವೆಗಳನ್ನು ನೀಡಿವೆ.
ಇದರ ಜೊತೆಗೆ ಸುರಕ್ಷತೆಯನ್ನು ಕಾಪಾಡಲು ಎಲ್ಲಾ ಚಾಲಕರಿಗೆ ಸುರಕ್ಷತಾ ಕಾರ್ಯವಿಧಾನಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ಪ್ರತಿ ಟ್ರಿಪ್ಗಳ ನಡುವೆ ಕಾರುಗಳನ್ನು ಸ್ವಚ್ವಗೊಳಿಸಲು ಚಾಲಕರಿಗೆ ಸ್ಯಾನಿಟೈಜರ್ಗಳು ಹಾಗೂ ಸೋಂಕುನಿವಾರಕಗಳನ್ನು ಒದಗಿಸಲಾಗುತ್ತದೆ.
ಲಾಕ್ಡೌನ್ ಸಮಯದಲ್ಲಿ ಉಬರ್ ತನ್ನ ಚಾಲಕರು ಹಾಗೂ ಕ್ಯಾಬ್ ಪಾಲುದಾರರಿಗೆ ನೆರವಾಗುವ ಉದ್ದೇಶದಿಂದ ಡ್ರೈವರ್ ಕೇರ್ ಫಂಡ್ ಅನ್ನು ರಚಿಸಿದೆ. ಈ ಫಂಡ್ ಮೂಲಕ ಕಂಪನಿಯು ದೇಶದಲ್ಲಿರುವ 55,000 ಉಬರ್ ಚಾಲಕರಿಗೆ ರೂ.20 ಕೋಟಿಯನ್ನು ಹಂಚಿಕೆ ಮಾಡಲಿದೆ.
ಉಬರ್ ಈ ಫಂಡ್ ಅನ್ನು ರೂ.50 ಕೋಟಿಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಉಬರ್ನ ಸೆಂಟ್ರಲ್ ಆಪರೇಷನ್ ಮುಖ್ಯಸ್ಥರಾದ ಪವನ್ ವೈಶ್ರವರು ಮಾತನಾಡಿ ಈ ವಾರದ ಕೊನೆಗೆ ರೂ.20 ಕೋಟಿ ಸಂಗ್ರಹಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಹಣವನ್ನು ಸಂಗ್ರಹಿಸಲಾಗುವುದು ಎಂದು ಹೇಳಿದರು.
ದೇಶಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ನಲ್ಲಿ ಆರೋಗ್ಯ, ಬ್ಯಾಂಕಿಂಗ್ ಹಾಗೂ ಮೀಡಿಯಾಗಳಂತಹ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಓಲಾ ಹಾಗೂ ಉಬರ್ ಕಂಪನಿಗಳು ಸೇವೆಯನ್ನು ರದ್ದುಪಡಿಸಿರುವುದರಿಂದ ಈ ಕಂಪನಿಗಳ ಚಾಲಕರ ಆದಾಯವೂ ಸ್ಥಗಿತಗೊಂಡಿದೆ.