Just In
- 1 hr ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- 2 hrs ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 2 hrs ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 2 hrs ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ
ಕರೋನಾ ವೈರಸ್ ಹರಡದಂತೆ ತಡೆಯಲು ಕೇಂದ್ರ ಸರ್ಕಾರವು ದೇಶಿಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳನ್ನು ಮೇ 31ರವರೆಗೆ ಸ್ಥಗಿತಗೊಳಿಸಿದೆ. ನಾಲ್ಕನೇ ಹಂತದ ಲಾಕ್ಡೌನ್ ಅನ್ನು ಮೇ 18ರಿಂದ ಮೇ 31ರವರೆಗೆ ಘೋಷಿಸಲಾಗಿದೆ. ಅಗತ್ಯ ಸೇವೆಯ ಹಾಗೂ ತುರ್ತು ಸೇವೆಯ ವಿಮಾನಗಳು ಮೊದಲಿನಂತೆ ಕಾರ್ಯನಿರ್ವಹಿಸಲಿವೆ.
ವಿಮಾನ ಸೇವೆಗಳನ್ನು ಪುನರಾರಂಭಿಸಲು ಕೇಂದ್ರ ಸರ್ಕಾರವು ಅಂತಿಮ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳು ಬಹಿರಂಗಪಡಿಸಿವೆ. ಪ್ರಯಾಣಿಕರು ವಿಮಾನಗಳಿಂದ ಕೆಳಗಿಳಿದ ನಂತರ ಅವರನ್ನು ಕ್ವಾರಂಟೈನ್ ಮಾಡುವ ಬಗ್ಗೆ ಗೊಂದಲವುಂಟಾಗಿರುವುದರಿಂದ ಕಾರ್ಯಾಚರಣೆ ಪುನರಾರಂಭವು ವಿಳಂಬವಾಗಿದೆ. ಮಾರ್ಚ್ 25ರ ರಾಷ್ಟ್ರವ್ಯಾಪಿ ಲಾಕ್ಡೌನ್ ನಂತರ ಎಲ್ಲಾ ದೇಶಿಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ.
ವಿಮಾನಯಾನ ಸೇವೆಗಳನ್ನು ಮೇ 17ರಿಂದ ಪುನರಾರಂಭಿಸುವ ನಿರೀಕ್ಷೆಯಿತ್ತು, ಆದರೆ ಹೆಚ್ಚುತ್ತಿರುವ ಕರೋನಾ ಸೋಂಕಿನ ಪ್ರಕರಣಗಳ ಕಾರಣಕ್ಕೆ ಮೇ 31ರವರೆಗೆ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ವಿಮಾನಯಾನ ಇಲಾಖೆಯು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಬಿಡುಗಡೆಗೊಳಿಸಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಇದರನ್ವಯ ಪ್ರಯಾಣಿಕರಿಗೆ ಹಾಗೂ ವಿಮಾನ ನಿಲ್ದಾಣದ ನೌಕರರಿಗೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ವಿಮಾನ ನಿಲ್ದಾಣ ಪ್ರಾಧಿಕಾರವು ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಲು ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಡಿವೈಸ್ ಹಾಗೂ ಅಲ್ಟ್ರಾ ವಯೊಲೆಟ್ ಸ್ಕ್ಯಾನರ್ಗಳನ್ನು ಅಳವಡಿಸಿದೆ. ಜೊತೆಗೆ ವಿಮಾನ ನಿಲ್ದಾಣವನ್ನು ಸ್ವಚ್ವಗೊಳಿಸುವ ವ್ಯವಸ್ಥೆಯನ್ನು ಮಾಡಿದೆ.
ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ನಡೆಸುತ್ತಿರುವ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮೊದಲ ಐದು ದಿನಗಳಲ್ಲಿ 6,037 ಭಾರತೀಯರನ್ನು ಮರಳಿ ಕರೆತರಲಾಗಿದೆ. 12 ದೇಶಗಳಲ್ಲಿ ಸಿಲುಕಿದ್ದ 15,000 ಭಾರತೀಯರನ್ನು ಕರೆತರಲು ಮೇ 7ರಿಂದ ಮೇ 14ರವರೆಗೆ ಒಟ್ಟು 64 ವಿಮಾನಗಳ ಹಾರಾಟವನ್ನು ನಡೆಸಲಾಗಿತ್ತು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ವಂದೇ ಭಾರತ್ ಮಿಷನ್ನ ಎರಡನೇ ಹಂತವನ್ನು ಮೇ 16ರಿಂದ 22ರವರೆಗೆ ನಡೆಸಲಾಗುವುದು. ಈ ಹಂತದಲ್ಲಿ ಉಕ್ರೇನ್, ಕಿರ್ಗಿಸ್ತಾನ್, ಅರ್ಮೇನಿಯಾ, ಬೆಲಾರಸ್, ಜಾರ್ಜಿಯಾ, ಕಜಕಿಸ್ತಾನ್, ನೈಜೀರಿಯಾದ 31 ದೇಶಗಳಲ್ಲಿರುವ ಭಾರತೀಯರನ್ನು ಕರೆತರಲಾಗುವುದು. ಎರಡನೇ ಹಂತದಲ್ಲಿ 31 ದೇಶಗಳಿಗೆ 149 ವಿಮಾನಗಳು ಪ್ರಯಾಣಿಸಲಿವೆ.
ಗೃಹ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಪ್ರಯಾಣಿಕರು ಅರ್ಹತೆ ಇದ್ದರೆ ಮಾತ್ರ ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಬಹುದು. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆರೋಗ್ಯವನ್ನು ಪರಿಶೀಲಿಸಲಾಗುವುದು ಎಂದೂ ಹೇಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿರಲಿದ್ದು, ಯಾವುದೇ ಆರೋಗ್ಯ ಸಮಸ್ಯೆ ಇಲ್ಲದಿದ್ದರೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.