Just In
- 15 min ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 1 hr ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 1 hr ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 1 hr ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Movies ಥಿಯೇಟರ್ ಆಯ್ತು.. ಓಟಿಟಿ ಆಯ್ತು.. ಕನ್ನಡ ಕಿರುತೆರೆಯಲ್ಲಿ 'ಸಲಾರ್'; ಪ್ರಭಾಸ್ ಬಳಿಸಿದ ಬೈಕ್ ಗೆಲ್ಲೋ ಚಾನ್ಸ್!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ನಷ್ಟು ಹತ್ತಿರವಾಯ್ತು ಹೆಲಿಕಾಪ್ಟರ್ ಪ್ರಯಾಣ
ಪವನ್ ಹನ್ಸ್ ಲಿಮಿಟೆಡ್, ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಉತ್ತರಾಖಂಡದಲ್ಲಿ ಕೈಗೆಟುಕುವ ಬೆಲೆಯಲ್ಲಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಿದೆ. ಈ ಹೆಲಿಕಾಪ್ಟರ್ ಸೇವೆಯು ಡೆಹ್ರಾಡೂನ್, ನ್ಯೂ ಟೆಹ್ರಿ, ಶ್ರೀನಗರ ಹಾಗೂ ಗೌಚರ್ ನಡುವೆ ಸಂಪರ್ಕ ಕಲ್ಪಿಸುತ್ತದೆ.
ಈ ಹೆಲಿಕಾಪ್ಟರ್ ವಾರದಲ್ಲಿ 3 ದಿನ ಸೇವೆಯನ್ನು ನೀಡಲಿದೆ. ಈ ಹೆಲಿಕಾಪ್ಟರ್ ಪ್ರಯಾಣದ ಬುಕ್ಕಿಂಗ್ ಶುಲ್ಕ ರೂ.2,900ಗಳಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹಾಗೂ ಕೇಂದ್ರ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿರವರು ಈ ಅಂತರರಾಜ್ಯ ಹೆಲಿಕಾಪ್ಟರ್ ಸೇವೆಗೆ ಚಾಲನೆ ನೀಡಿ ಈ ಸೇವೆಯು ರಾಜ್ಯಗಳ ನಡುವಿನ ಪರಸ್ಪರ ಸಂಬಂಧವನ್ನು ಹೆಚ್ಚಿಸುವುದರ ಜೊತೆಗೆ ರಾಜ್ಯಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಇನ್ನು ಈ ಹೊಸ ಸೇವೆಯ ಬಗ್ಗೆ ಹೇಳುವುದಾದರೆ, ಪವನ್ ಹನ್ಸ್ ವಾರಕ್ಕೊಮ್ಮೆ ಮೂರು ಬಾರಿ ಈ ಹೆಲಿಕಾಪ್ಟರ್ ಸೇವೆಗಳನ್ನು ನೀಡಲಿದ್ದು, ಪ್ರಯಾಣಿಕರಿಗೆ ಶುಲ್ಕ ವಿಧಿಸುವುದನ್ನು ಖಚಿತಪಡಿಸುತ್ತದೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಈ ಭಾಗದಲ್ಲಿ ಹೆಲಿಕಾಪ್ಟರ್ ಸೇವೆಗಳ ಆರಂಭದೊಂದಿಗೆ ರಾಜ್ಯಗಳ ನಡುವಿನ ವಾಯು ಸಂಪರ್ಕವು ಸುಧಾರಿಸುವುದರ ಜೊತೆಗೆ ರಾಜ್ಯಗಳ ನಡುವಿನ ಪ್ರಯಾಣದ ಅವಧಿಯೂ ಸಹ ಕಡಿಮೆಯಾಗಲಿದೆ. ಈ ಹೆಲಿಕಾಪ್ಟರ್ ಸೇವೆಯು ಗುಡ್ಡಗಾಡು ಪ್ರದೇಶಗಳಲ್ಲಿನ ಸಂಪರ್ಕವನ್ನು ಸುಧಾರಿಸಲಿದೆ.
ಈ ಮೊದಲು ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ಸಂಚರಿಸುವುದಕ್ಕೆ 2ರಿಂದ 3 ಗಂಟೆಗಳು ಬೇಕಾಗಿದ್ದವು. ಈಗ ಈ ಪ್ರದೇಶಗಳಿಗೆ ಕೇವಲ 30 ನಿಮಿಷಗಳಲ್ಲಿ ತಲುಪಬಹುದು. ಚಾರ್ ಧಾಮ್ಗೆ ಪ್ರಯಾಣಿಸುವ ಭಕ್ತರಿಗೂ ಸಹ ಈ ಹೆಲಿಕಾಪ್ಟರ್ ಸೇವೆಯನ್ನು ನೀಡಲಾಗುವುದು.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಡೆಹ್ರಾಡೂನ್ನಿಂದ ರಾಮ್ನಗರ, ಪಂತ್ನಗರ, ನೈನಿತಾಲ್, ಅಲ್ಮೋರಾ, ಪಿಥೋರಗಢ ಹಾಗೂ ಡೆಹ್ರಾಡೂನ್ನಿಂದ ಮಸ್ಸೂರಿಗೆ ಸಂಪರ್ಕ ಕಲ್ಪಿಸುವ ಇನ್ನೂ ಎರಡು ಹೆಲಿಕಾಪ್ಟರ್ ಸೇವೆಗಳು ಶೀಘ್ರದಲ್ಲೇ ಆರಂಭವಾಗಲಿವೆ. ಉಡಾನ್ -2 ಯೋಜನೆಯಡಿ ಹೊಸ ವಾಯು ಮಾರ್ಗಗಳಲ್ಲಿ ಸೇವೆಗಳನ್ನು ನೀಡಲು ನಾಗರಿಕ ವಿಮಾನಯಾನ ಇಲಾಖೆಯು ಪವನ್ ಹನ್ಸ್ ಲಿಮಿಟೆಡ್ಗೆ ಅನುಮತಿ ನೀಡಿದೆ.
ನಾಗರಿಕ ವಿಮಾನಯಾನ ಇಲಾಖೆಯ ಪ್ರಕಾರ, ಉಡಾನ್ ಯೋಜನೆಯಡಿ ಇದುವರೆಗೂ 50 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಸದ್ಯಕ್ಕೆ 19 ರಾಜ್ಯಗಳಲ್ಲಿ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಡಾನ್ ಯೋಜನೆಗೆ ಚಾಲನೆ ನೀಡಲಾಗಿದೆ.
ಗಮನಿಸಿ: ಈ ಫೋಟೋಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.