Just In
- 1 hr ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 1 hr ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 1 hr ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 2 hrs ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏರ್ ಇಂಡಿಯಾ ಉಳಿವಿಗೆ ಖಾಸಗೀಕರಣವೇ ಮದ್ದು ಎಂದ ಸಚಿವ
ಕರೋನಾ ವೈರಸ್ ಸೋಂಕು ಇಡೀ ಪ್ರಪಂಚವನ್ನು ತತ್ತರಿಸುವಂತೆ ಮಾಡಿದೆ. ಈ ವೈರಸ್ ಸೋಂಕಿನಿಂದಾಗಿ ದೇಶಾದ್ಯಂತ ಸುಮಾರು ಎರಡು ತಿಂಗಳ ಕಾಲ ಲಾಕ್ಡೌನ್ ವಿಧಿಸಲಾಗಿತ್ತು. ಇದರಿಂದಾಗಿ ಇಡೀ ದೇಶದ ಆರ್ಥಿಕ ವ್ಯವಸ್ಥೆಯು ಕುಸಿದಿದೆ.
ಲಾಕ್ ಡೌನ್ ಅವಧಿಯಲ್ಲಿ ದೇಶಾದ್ಯಂತ ಎಲ್ಲಾ ರೀತಿಯ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಸರ್ಕಾರಿ ವಿಮಾನಯಾನ ಕಂಪನಿಯಾದ ಏರ್ ಇಂಡಿಯಾದ ಪರಿಸ್ಥಿತಿ ಸಹ ಹದಗೆಟ್ಟಿದೆ. ಲಾಕ್ ಡೌನ್ ನಲ್ಲಿ ವಿನಾಯಿತಿ ನೀಡಿದ ನಂತರ ದೇಶಿಯ ವಿಮಾನಯಾನವನ್ನು ಪುನರಾರಂಭಿಸಲಾಗಿದೆ. ಆದರೂ ಸಹ ಏರ್ ಇಂಡಿಯಾ ನಿರಂತರ ನಷ್ಟವನ್ನು ಅನುಭವಿಸುತ್ತಿದೆ.
ಈ ಬಗ್ಗೆ ಮಾತನಾಡಿರುವ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿರವರು ಏರ್ ಇಂಡಿಯಾವನ್ನು ನಷ್ಟದಿಂದ ಚೇತರಿಸಿಕೊಳ್ಳುವಂತೆ ಮಾಡಲು ಉಳಿದಿರುವ ಏಕೈಕ ಮಾರ್ಗವೆಂದರೆ ಅದನ್ನು ಖಾಸಗೀಕರಣಗೊಳಿಸುವುದು. ಸರ್ಕಾರದ ಧನಸಹಾಯದಿಂದ ಮಾತ್ರ ಏರ್ ಇಂಡಿಯಾ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಕರೋನಾ ವೈರಸ್ ಸೋಂಕಿನಿಂದಾಗಿ ಲಾಕ್ ಡೌನ್ ಹೇರಿದ ನಂತರ, ಕೇಂದ್ರ ಸರ್ಕಾರವು ಏರ್ ಇಂಡಿಯಾಕ್ಕೆ ದೊಡ್ಡ ಪ್ರಮಾಣದ ಆರ್ಥಿಕ ನೆರವನ್ನು ನೀಡುವ ಸ್ಥಿತಿಯಲ್ಲಿಲ್ಲ. ಏರ್ ಇಂಡಿಯಾವನ್ನು ಹೇಗೆ ನಡೆಸಬೇಕೆಂದು ತಿಳಿದಿರುವವರಿಗೆ ಅದನ್ನು ಹಸ್ತಾಂತರಿಸಬೇಕೆಂದು ಸಚಿವರು ಹೇಳಿದರು.
ಏರ್ ಇಂಡಿಯಾ ಇತ್ತೀಚಿಗೆ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯನ್ವಯ ನೌಕರರು ಆರು ತಿಂಗಳಿನಿಂದ ಐದು ವರ್ಷಗಳವರೆಗೆ ವೇತನವಿಲ್ಲದ ರಜೆ ತೆಗೆದುಕೊಳ್ಳಬಹುದು. ಇದರ ಜೊತೆಗೆ ಏರ್ ಇಂಡಿಯಾ ಮ್ಯಾನೇಜ್ ಮೆಂಟ್, ಬಯಸಿದವರಿಗೆ ರಜೆ ಮೇಲೆ ಕಳುಹಿಸುವ ಆಯ್ಕೆಯನ್ನು ಸಹ ನೀಡಿದೆ.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ಈ ಮಾಹಿತಿಯನ್ನು ಏರ್ ಇಂಡಿಯಾ ನೀಡಿದ ನೋಟಿಸ್ನಲ್ಲಿ ತಿಳಿಸಲಾಗಿದೆ. ನಿರ್ದೇಶಕರ ಮಂಡಳಿಯ 102ನೇ ಸಭೆಯಲ್ಲಿ ವೇತನವಿಲ್ಲದೆ ರಜೆ ತೆಗೆದುಕೊಳ್ಳುವ ಹಾಗೂ ನೌಕರರನ್ನು ರಜೆ ಮೇಲೆ ಕಳುಹಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ.
ಈ ಷರತ್ತನ್ನು ದಕ್ಷತೆ, ಪರ್ಫಾಮೆನ್ಸ್, ಸಿಬ್ಬಂದಿಯ ಆರೋಗ್ಯ, ನೌಕರನು ಈ ಹಿಂದೆ ಕರ್ತವ್ಯಕ್ಕೆ ಹಾಜರಾಗಿರುವುದು, ಅನಾರೋಗ್ಯ ಮುಂತಾದ ಅಂಶಗಳ ಆಧಾರದ ಮೇಲೆ ಅನ್ವಯಿಸಲಾಗುವುದು.