Just In
- 18 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಲಸೆ ಕಾರ್ಮಿಕರಿಗಾಗಿ ಉಚಿತ ಬಸ್ ಸೇವೆ ಆರಂಭಿಸಿದ ಪಂಜಾಬ್
ವಲಸೆ ಕಾರ್ಮಿಕರನ್ನು ತವರು ರಾಜ್ಯಕ್ಕೆ ಕರೆತರಲು ದೇಶಾದ್ಯಂತ ಹಲವಾರು ಬಸ್ಸು ಹಾಗೂ ರೈಲುಗಳನ್ನು ಓಡಿಸಲಾಗುತ್ತಿದೆ. ಈಗ ಪಂಜಾಬ್ ಸರ್ಕಾರವು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕರೆದೊಯ್ಯಲು ಉಚಿತ ಬಸ್ ಸೇವೆಯನ್ನು ಆರಂಭಿಸಿದೆ. ಈ ಬಸ್ ಸೇವೆಯನ್ನು ಸೋಮವಾರದಿಂದ ಆರಂಭಿಸಲಾಗಿದೆ.
ಮೊದಲ ಬಸ್ನಲ್ಲಿ ಜಲಂಧರ್ನಿಂದ 30 ವಲಸೆ ಕಾರ್ಮಿಕರನ್ನು ಕರೆದೊಯ್ಯಲಾಗಿದೆ. ಈ ಎಲ್ಲಾ ಬಸ್ಗಳ ವೆಚ್ಚವನ್ನು ಪಂಜಾಬ್ ಸರ್ಕಾರವು ಭರಿಸಲಿದೆ. 55 ರೈಲುಗಳ ಸಂಚಾರವನ್ನು ಸೇವೆಯನ್ನು ಆರಂಭಿಸಿದ ನಂತರ ಈ ಸೇವೆಯನ್ನು ಆರಂಭಿಸಲಾಗಿದೆ. ಇದರಿಂದಾಗಿ ಉತ್ತರ ಪ್ರದೇಶದಲ್ಲಿರುವ ಅನೇಕ ಊರುಗಳಿಗೆ ಜನರನ್ನು ಸಾಗಿಸಲಾಗುವುದು.
ಜನರು ಸಿಟಿ ಬಸ್ ನಿಲ್ದಾಣವನ್ನು ತಲುಪಿದ ತಕ್ಷಣ, ಆರೋಗ್ಯ ಇಲಾಖೆಯ ವಿಶೇಷ ತಂಡವು ಅವರನ್ನು ಪರೀಕ್ಷೆಗೆ ಒಳಪಡಿಸಿತು. ನಂತರ 30 ಜನರನ್ನು ಮಾತ್ರ ಬಸ್ನಲ್ಲಿ ಕೂರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಯಿತು. ಇದರ ಜೊತೆಗೆ ಪ್ರಯಾಣಿಕರಿಗೆ ನೀರು, ಆಹಾರ ಒದಗಿಸಲಾಯಿತು.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಎಲ್ಲಾ ಬಸ್ ವ್ಯವಸ್ಥೆಗಳನ್ನು ಸಂಬಂಧಪಟ್ಟ ಜಿಲ್ಲಾಡಳಿತಗಳು ಮಾಡಿದ್ದು, ಮುಂದಿನ ದಿನಗಳಲ್ಲಿ ಉಚಿತ ಕಾರ್ಮಿಕ ಬಸ್ ಆರಂಭಿಸಲಾಗುವುದು. ಈ ಬಸ್ಸುಗಳು ಪೂರ್ತಿಯಾಗಿ ಉಚಿತವಾಗಿರಲಿದ್ದು, ವಲಸೆ ಕಾರ್ಮಿಕರು ಒಂದು ಪೈಸೆಯನ್ನೂ ನೀಡಬೇಕಾಗಿಲ್ಲ.
ಪಂಜಾಬ್ ಸರ್ಕಾರ ನೀಡುತ್ತಿರುವ ಈ ಉಚಿತ ಬಸ್ಸುಗಳು ಗೌತಮ್ ಬುದ್ಧ ನಗರ, ಮೀರತ್, ಗಾಜಿಯಾಬಾದ್, ಬುಲ್ಯಾಂಡ್ ನಗರ, ಅಲಿಗಢ, ಮುಜಫರ್ ನಗರ, ಬಾಗಪತ್, ಸಹರಾನ್ಪುರ, ಮಥುರಾಗಳಿಗೆ ಹೋಗಲಿದ್ದು, ಕಾರ್ಮಿಕರನ್ನು ಸಂಬಂಧಪಟ್ಟ ಊರುಗಳಿಗೆ ತಲುಪಿಸಲಿವೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಇದರ ಜೊತೆಗೆ ಪಂಜಾಬ್ನಿಂದ ಮೂರು ಕಾರ್ಮಿಕ ರೈಲುಗಳನ್ನು ಪೂರ್ಣಿಯಾ, ಅರೇರಿಯಾ, ಬಿಹಾರ ಹಾಗೂ ಉತ್ತರ ಪ್ರದೇಶದ ಜೈನಪುರಕ್ಕೆ ಓಡಿಸಲಾಗಿದೆ. ವಲಸೆ ಕಾರ್ಮಿಕರನ್ನು ಜಲಂಧರ್ನಿಂದ ಅವರ ಊರುಗಳಿಗೆ ಕಳುಹಿಸಲು ರೂ.3.93 ಕೋಟಿ ಖರ್ಚು ಮಾಡಲಾಗಿದೆ.
ಉತ್ತರಪ್ರದೇಶ ಸರ್ಕಾರವು ಸಹ 1000 ಬಸ್ಗಳ ಸಂಚಾರವನ್ನು ಆರಂಭಿಸಿದೆ. ದೇಶಾದ್ಯಂತ ಕಾರ್ಮಿಕ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಸದ್ಯಕ್ಕೆ ಪ್ರತಿದಿನ 300ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತಿವೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.