Just In
- 6 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 7 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 7 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 7 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಪಠ್ಯದ ಭಾಗವಾಗಲಿವೆ ಸಂಚಾರಿ ಸುರಕ್ಷತಾ ನಿಯಮಗಳು
ರಾಜಸ್ಥಾನ ಸರ್ಕಾರವು 2019ರ ಮೋಟಾರು ವಾಹನ ಕಾಯ್ದೆಯನ್ನು ರಾಜಸ್ಥಾನದಲ್ಲಿ ಜಾರಿಗೊಳಿಸಿದೆ. ಮೋಟಾರು ವಾಹನ ಕಾಯ್ದೆ 2019ರ ಅನ್ವಯ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ದಂಡದ ಮೊತ್ತವನ್ನು ಹೆಚ್ಚಿಸಿರುವುದನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವರು ಸ್ವಾಗತಿಸಿದ್ದಾರೆ.
ವಾಹನ ಸವಾರರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದಂಡದ ಮೊತ್ತವನ್ನು ಹೆಚ್ಚಿಸುವುದು ಅಗತ್ಯ ಎಂದು ಅವರು ಹೇಳಿದ್ದಾರೆ.ಭಿಲ್ವಾರಾ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘವು ಆಯೋಜಿಸಿದ್ದ ಹೆಲ್ಮೆಟ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವರು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಲು ಉತ್ಪಾದಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ರಾಜಸ್ಥಾನ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗಿನ ಸಂವಾದದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಸ್ತೆ ಸುರಕ್ಷತೆಯನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು. ಇದರಿಂದ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಲಿದೆ ಎಂದು ಹೇಳಿದರು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಹಾಲು ಉತ್ಪಾದಕರಿಗೆ 15 ಸಾವಿರ ಹೆಲ್ಮೆಟ್ಗಳನ್ನು ವಿತರಿಸಲು ಹಾಲು ಉತ್ಪಾದಕರ ಸಹಕಾರ ಸಂಘವು ಮುಂದಾಗಿದೆ. ಜಿಲ್ಲಾ ಮಟ್ಟದಲ್ಲಿ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಜಿಲ್ಲಾ ಕೇಂದ್ರಗಳಲ್ಲಿ ಚಾಲನಾ ತರಬೇತಿ ಸಂಸ್ಥೆಗಳನ್ನು ತೆರೆಯುವಂತೆಯೂ ಸಹ ಅವರು ಹೇಳಿದರು. ಉತ್ತಮ ಗುಣಮಟ್ಟದ ಹೆಲ್ಮೆಟ್ ಗಳು ಅಪಘಾತ ಸಂಭವಿಸಿದಲ್ಲಿ ಅಪಾಯದ ಪ್ರಮಾಣವನ್ನು 50%ನಷ್ಟು ಕಡಿಮೆಗೊಳಿಸುತ್ತವೆ ಎಂದು ಅವರು ಹೇಳಿದರು.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ರಾಜ್ಯದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದ್ದು, ಅವುಗಳ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ರಸ್ತೆ ಅಪಘಾತಗಳನ್ನು 50%ನಷ್ಟು ಕಡಿಮೆಗೊಳಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ ಎಂದು ರಾಜಸ್ಥಾನದ ಸಾರಿಗೆ ಸಚಿವ ಪ್ರತಾಪ್ ಸಿಂಗ್ ಖಚಾರಿವಾಸ್ ಹೇಳಿದ್ದಾರೆ. ರಾಶ್ ಡ್ರೈವಿಂಗ್ ಮತ್ತು ಅಪಘಾತಗಳಿಂದ ಜನರನ್ನು ರಕ್ಷಿಸಲು ರಾಜ್ಯದಲ್ಲಿ 2019ರ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.