Just In
- 34 min ago ದುಬಾರಿ ಬೆಲೆಯ ಮರ್ಸಿಡಿಸ್ ಸೆಡಾನ್ ಖರೀದಿಸಿದ ಕುಶಾ ಕಪಿಲಾ: ಯಾರು ಶಿವ ಈಕೆ.. ಈ ಕಾರಿನ ವಿಶೇಷತೆಗಳೇನು?
- 59 min ago Tata: 10 ಕೋಟಿ ಕಿ.ಮೀ ಮೈಲಿಗಲ್ಲು ದಾಟಿದ ಟಾಟಾ ಪವರ್ನ EV ಚಾರ್ಜಿಂಗ್ ನೆಟ್ವರ್ಕ್
- 1 hr ago ಫ್ಯಾಮಿಲಿಯೊಂದಿಗೆ ಅರಾಮದಾಯಕ ಪ್ರಯಾಣಕ್ಕಾಗಿ ಇನ್ನೋವಾ ಹೈಕ್ರಾಸ್ ಹೊಸ ರೂಪಾಂತರ ಬಿಡುಗಡೆ
- 2 hrs ago ಸೆಮಿಕಂಡಕ್ಟರ್ ಪೂರೈಸಲು ಟಾಟಾದೊಂದಿಗೆ ಟೆಸ್ಲಾ ಒಪ್ಪಂದ.. ಕೆಲವೇ ದಿನದಲ್ಲಿ ಮೊದಲ ಶೋರೂಂ ಆರಂಭ?
Don't Miss!
- Finance 70 ಗಂಟೆ ನಿದ್ರೆ ಮಾಡಬೇಕು: ಇನ್ಫೋಸಿಸ್ ನಾರಾಯಣ ಮೂರ್ತಿಗೆ ಟಾಂಗ್ ಕೊಟ್ಟ ಕನ್ನಡಿಗ ಸ್ಪಾರ್ಟಪ್ ಸಂಸ್ಥಾಪಕ
- News Dwarakish: ದ್ವಾರಕೀಶ್ ಮೊದಲ ಹೆಸರು ಏನು? ನಟನೆಗೆ ಮೊದಲು ಇವರು ವೃತ್ತಿ ಏನು?
- Technology ಅಂತೂ ಬಿಡುಗಡೆ ಆಯ್ತು ಮೊಟೊ G64 5G ಫೋನ್!..ಅಚ್ಚರಿ ಬೆಲೆ, ಆಕರ್ಷಕ ಫೀಚರ್ಸ್!
- Lifestyle ದ್ವಾರಕೀಶ್ ಲವ್ ಸ್ಟೋರಿ ಏನು ಗೊತ್ತಾ.? ಎರಡನೇ ಮದ್ವೆಗೆ ಮೊದಲ ಪತ್ನಿ ಗ್ರೀನ್ ಸಿಗ್ನಲ್..!
- Sports RCB: ಆರ್ಸಿಬಿ ಮಾಲೀಕತ್ವ ಬದಲಾವಣೆಯ ಅಗತ್ಯವಿದೆ; ಟೆನ್ನಿಸ್ ತಾರೆ ಮಹೇಶ್ ಭೂಪತಿ
- Movies ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಪಠ್ಯದ ಭಾಗವಾಗಲಿವೆ ಸಂಚಾರಿ ಸುರಕ್ಷತಾ ನಿಯಮಗಳು
ರಾಜಸ್ಥಾನ ಸರ್ಕಾರವು 2019ರ ಮೋಟಾರು ವಾಹನ ಕಾಯ್ದೆಯನ್ನು ರಾಜಸ್ಥಾನದಲ್ಲಿ ಜಾರಿಗೊಳಿಸಿದೆ. ಮೋಟಾರು ವಾಹನ ಕಾಯ್ದೆ 2019ರ ಅನ್ವಯ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ದಂಡದ ಮೊತ್ತವನ್ನು ಹೆಚ್ಚಿಸಿರುವುದನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವರು ಸ್ವಾಗತಿಸಿದ್ದಾರೆ.
ವಾಹನ ಸವಾರರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದಂಡದ ಮೊತ್ತವನ್ನು ಹೆಚ್ಚಿಸುವುದು ಅಗತ್ಯ ಎಂದು ಅವರು ಹೇಳಿದ್ದಾರೆ.ಭಿಲ್ವಾರಾ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘವು ಆಯೋಜಿಸಿದ್ದ ಹೆಲ್ಮೆಟ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವರು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಲು ಉತ್ಪಾದಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ರಾಜಸ್ಥಾನ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗಿನ ಸಂವಾದದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಸ್ತೆ ಸುರಕ್ಷತೆಯನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು. ಇದರಿಂದ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಲಿದೆ ಎಂದು ಹೇಳಿದರು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಹಾಲು ಉತ್ಪಾದಕರಿಗೆ 15 ಸಾವಿರ ಹೆಲ್ಮೆಟ್ಗಳನ್ನು ವಿತರಿಸಲು ಹಾಲು ಉತ್ಪಾದಕರ ಸಹಕಾರ ಸಂಘವು ಮುಂದಾಗಿದೆ. ಜಿಲ್ಲಾ ಮಟ್ಟದಲ್ಲಿ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಜಿಲ್ಲಾ ಕೇಂದ್ರಗಳಲ್ಲಿ ಚಾಲನಾ ತರಬೇತಿ ಸಂಸ್ಥೆಗಳನ್ನು ತೆರೆಯುವಂತೆಯೂ ಸಹ ಅವರು ಹೇಳಿದರು. ಉತ್ತಮ ಗುಣಮಟ್ಟದ ಹೆಲ್ಮೆಟ್ ಗಳು ಅಪಘಾತ ಸಂಭವಿಸಿದಲ್ಲಿ ಅಪಾಯದ ಪ್ರಮಾಣವನ್ನು 50%ನಷ್ಟು ಕಡಿಮೆಗೊಳಿಸುತ್ತವೆ ಎಂದು ಅವರು ಹೇಳಿದರು.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ರಾಜ್ಯದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದ್ದು, ಅವುಗಳ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ರಸ್ತೆ ಅಪಘಾತಗಳನ್ನು 50%ನಷ್ಟು ಕಡಿಮೆಗೊಳಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ ಎಂದು ರಾಜಸ್ಥಾನದ ಸಾರಿಗೆ ಸಚಿವ ಪ್ರತಾಪ್ ಸಿಂಗ್ ಖಚಾರಿವಾಸ್ ಹೇಳಿದ್ದಾರೆ. ರಾಶ್ ಡ್ರೈವಿಂಗ್ ಮತ್ತು ಅಪಘಾತಗಳಿಂದ ಜನರನ್ನು ರಕ್ಷಿಸಲು ರಾಜ್ಯದಲ್ಲಿ 2019ರ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.