Just In
- 10 min ago ಹೊಸ ಸುಜುಕಿ V-Strom 800 DE ಬೈಕ್ ಬಿಡುಗಡೆ: ಬೆಲೆ ರೂ.10.30 ಲಕ್ಷ
- 54 min ago ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- 3 hrs ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 3 hrs ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Movies ಪುಟ್ಟಕ್ಕನ ಮನೆಗೆ ಕುಡಿದು ಬಂದ ಮುರಳಿಗೆ ಶಾಕ್; ಅಮ್ಮ ಅರೆಸ್ಟ್.. ಸಹನಾ ಮೇಲೆ ಗೂಬೆ ಕೂರಿಸಿದ ಪತಿ
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಮಾರ್ಟ್ ಸಿಟಿ ಬಸ್ಸುಗಳಿಗೆ ಚಾಲನೆ ನೀಡಿದ ಮುನ್ಸಿಪಲ್ ಕಾರ್ಪೊರೇಷನ್
ಸಮಗ್ರ ಸಾರಿಗೆ ನಿರ್ವಹಣಾ ವ್ಯವಸ್ಥೆಯನ್ನು (ಐಟಿಎಂಎಸ್) ಅನುಷ್ಠಾನಗೊಳಿಸಿರುವ ಕಾರಣಕ್ಕೆ ವಡೋದರಾ ನಗರದ ಬಸ್ ಗಳಲ್ಲಿ ಓಡಾಡುವವರು ಇನ್ನು ಮುಂದೆ ತಮ್ಮ ಬಸ್ಗಳ ಚಲನೆಯ ಬಗ್ಗೆ ಮಾಹಿತಿ ಪಡೆಯಲು ಸಾಧ್ಯವಾಗಲಿದೆ. ಈ ವ್ಯವಸ್ಥೆಯ ಮೂಲಕ ನಗರ ಬಸ್ ಸೇವೆಯಲ್ಲಿ ಸುಧಾರಣೆಗಳನ್ನು ಕೈಗೊಳ್ಳಲಾಗುವುದು.
ಸ್ಮಾರ್ಟ್ ಸಿಟಿ ಯೋಜನೆಯ ಅಂಗವಾಗಿ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್, 75 ಐಟಿಎಂಎಸ್ ಸಿಟಿ ಬಸ್ಸುಗಳ ಸಂಚಾರಕ್ಕೆ ಬುಧವಾರ ಚಾಲನೆ ನೀಡಿದೆ. ಯೋಜನೆಯ ಎರಡನೇ ಹಂತದಲ್ಲಿ ಇನ್ನುಳಿದ 75 ಬಸ್ಗಳಿಗೆ ಚಾಲನೆ ನೀಡಲಾಗುವುದು.
ಸಿಟಿ ಬಸ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಪ್ಯಾಸೆಂಜರ್ ಇನ್ಫಾರ್ಮೇಷನ್ ಸಿಸ್ಟಂ ಸ್ಕ್ರೀನ್, ಪ್ಯಾನಿಕ್ ಬಟನ್, ಡ್ರೈವರ್ ಡಿಸ್ ಪ್ಲೇ ಯುನಿಟ್ ಹಾಗೂ ಐಟಿಎಂಎಸ್ ಸ್ಮಾರ್ಟ್ ಬಸ್ ವ್ಯವಸ್ಥೆಯಡಿ ಜಿಪಿಎಸ್ ಟ್ರ್ಯಾಕಿಂಗ್ ಗಳನ್ನು ಅಳವಡಿಸಲಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಸ್ಮಾರ್ಟ್ ಬಸ್ ವ್ಯವಸ್ಥೆಯಡಿ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ಬಸ್ಗಳಲ್ಲಿ ಪ್ಯಾನಿಕ್ ಬಟನ್ಗಳನ್ನು ಅಳವಡಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರು ಸಹಾಯ ಕೇಳಲು ಸಾಧ್ಯವಾಗುತ್ತದೆ.
ವಡೋದರಾ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಅಳವಡಿಸಲಾಗಿರುವ ಆ್ಯಪ್ ಮೂಲಕ ಬಸ್ಗಳ ಲೈವ್ ಟ್ರ್ಯಾಕಿಂಗ್ ಮಾಡಬಹುದು. ಇದರ ಜೊತೆಗೆ, ಬಸ್ ನಿಲ್ದಾಣಗಳಲ್ಲಿ ನೆಲೆಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಹಿತಿ ಫಲಕಗಳನ್ನು ಅಳವಡಿಸಲಾಗುತ್ತಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಇವುಗಳ ಮೇಲೆ ಬಸ್ಗಳ ನಂಬರ್, ಬಸ್ಸುಗಳು ಆಗಮಿಸುವ ಸಮಯವನ್ನು ಕಾಣಬಹುದಾಗಿದೆ. ಮೂಲಗಳ ಪ್ರಕಾರ, ಪ್ರತಿಯೊಂದು ಬಸ್ಗಳಿಗೆ ಒಂದು ಮಾರ್ಗವನ್ನು ನಿಗದಿಪಡಿಸಲಾಗಿರುತ್ತದೆ. ಈ ಮಾರ್ಗದಲ್ಲಿ ಬಸ್ ಸಂಚರಿಸುವುದು ಕಡ್ಡಾಯವಾಗಿರುತ್ತದೆ.
ಬಸ್ಸುಗಳು ನಿಗದಿತ ಮಾರ್ಗದ ಬದಲು ಬೇರೆ ಮಾರ್ಗದಲ್ಲಿ ಚಲಿಸಿದರೆ ಅಥವಾ ಬಸ್ ನಿಲ್ದಾಣದಲ್ಲಿ ನಿಲ್ಲದಿದ್ದರೆ, ಜಿಪಿಎಸ್ ಸಹಾಯದಿಂದ ಮಾನಿಟರಿಂಗ್ ಅಧಿಕಾರಿಗಳಿಗೆ ಮಾಹಿತಿ ದೊರೆಯುತ್ತದೆ. ಸ್ಮಾರ್ಟ್ ಬಸ್ ಗಳಲ್ಲಿರುವ ವ್ಯವಸ್ಥೆಗಳು ಬಸ್ ಚಾಲಕರು ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ವೇಗದಲ್ಲಿ ಬಸ್ ಚಾಲನೆ ಮಾಡುವುದನ್ನು ತಡೆಯುತ್ತವೆ.