Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 10 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಎಫೆಕ್ಟ್- ಟಾಟಾ ಕಾರುಗಳ ಉತ್ಪಾದನೆಯಲ್ಲಿ ಭಾರೀ ಇಳಿಕೆ
ಕರೋನಾ ವೈರಸ್ ತೊಲಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ ಸಂಕಷ್ಟದ ನಡುವೆಯೂ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ವೈರಸ್ ಹರಡುವಿಕೆಯನ್ನು ತಡೆಯಲು ಕೈಗಾರಿಕಾ ವಲಯವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಕೇಂದ್ರ ಸರ್ಕಾರವು ಎಪ್ರಿಲ್ 14ರ ತನಕ 21 ದಿನಗಳ ಕಾಲ ಲಾಕ್ ಡೌನ್ ವಿಧಿಸಿದ್ದು, ವಾಣಿಜ್ಯ ಚಟುವಟಿಕೆಗಳು ಸಂಪೂರ್ಣ ಬಂದ್ ಆಗಿದ್ದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಬಿದ್ದಿದೆ. ವೈರಸ್ ತಡೆಯುವ ಉದ್ದೇಶದಿಂದ ಅನಿವಾರ್ಯವಾಗಿ ಲಾಕ್ ಡೌನ್ ವಿಧಿಸಿದ್ದರಿಂದ ಕೈಗಾರಿಕೆ ವಲಯದಲ್ಲಿ ಉತ್ಪಾದನಾ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಆಟೋ ಕಂಪನಿಗಳು ಸಹ ಭಾರೀ ಪ್ರಮಾಣದ ನಷ್ಟ ಅನುಭವಿಸಿವೆ.
ಅದರಲ್ಲೂ ಬ್ಯಾನ್ ಭೀತಿಯಲ್ಲಿದ್ದ ಬಿಎಸ್-4 ವಾಹನ ಮಾರಾಟಕ್ಕೆ ಹಲವು ಕಠಿಣ ಷರತ್ತುಗಳನ್ನು ವಿಧಿಸಲಾಗಿದ್ದು, ಹೊಸ ವಾಹನಗಳ ಉತ್ಪಾದನೆ ಕುಂಠಿತವಾಗಿರುವುದಲ್ಲದೆ ಹಳೆಯ ವಾಹನ ಮಾರಾಟದಲ್ಲೂ ನಷ್ಟ ಭೀತಿ ಎದುರಾಗಿದೆ.
ದೇಶದ ಅತಿದೊಡ್ಡ ವಾಹನ ಉತ್ಪಾದನಾ ಕಂಪನಿಯಾದ ಟಾಟಾ ಮೋಟಾರ್ಸ್ ಸಹ ಮಾರ್ಚ್ ಅವಧಿಯಲ್ಲಿ ಶೇ.84ರಷ್ಟು ವಾಹನಗಳ ಮಾರಾಟದಲ್ಲಿ ಕುಸಿತ ಕಂಡಿದ್ದು, ಕಾರು ಉತ್ಪಾದನೆಯಲ್ಲಿ ಶೇ.75ರಷ್ಟು ಕುಸಿತವಾಗಿದೆ.
ಮಾರ್ಚ್ ಅವಧಿಯಲ್ಲಿ ಟಾಟಾ ಕಂಪನಿಯು ಪ್ಯಾಸೆಂಜರ್ ಕಾರುಗಳ ಮಾರಾಟದಲ್ಲಿ ಶೇ.68ರಷ್ಟು ಕುಸಿತ ಕಂಡಲ್ಲಿ, ವಾಣಿಜ್ಯ ವಾಹನಗಳು ಮತ್ತು ಪ್ಯಾಸೆಂಜರ್ ಕಾರುಗಳ ಒಟ್ಟಾರೆ ಮಾರಾಟದಲ್ಲಿ ಶೇ.84ರಷ್ಟು ಕುಸಿತ ಕಂಡಿದೆ. ಇದರಲ್ಲದೇ ಬಿಎಸ್-4 ವಾಹನ ಸ್ಟಾಕ್ ಪ್ರಮಾಣವು ಆಟೋ ಕಂಪನಿಗಳಿಗೆ ಭಾರೀ ಪ್ರಮಾಣದ ನಷ್ಟ ಉಂಟುಮಾಡಲಿದೆ. ಭಾರತದಲ್ಲಿ ಮಾಲಿನ್ಯವನ್ನು ತಡೆಯುವ ಉದ್ದೇಶದಿಂದ 2018ರ ಅಕ್ಟೋಬರ್ನಲ್ಲಿ ಮಹತ್ವದ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್ 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಬಿಎಸ್-6 ನಿಯಮವನ್ನು ಜಾರಿಗೆ ತರುವಂತೆ ಆದೇಶ ನೀಡಿತ್ತು.
ಸುಪ್ರೀಂ ಆದೇಶದಂತೆ ಇದೀಗ ಬಿಎಸ್-6 ವಾಹನಗಳ ಮಾರಾಟವು ಕಡ್ಡಾಯವಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಇನ್ನು ಕೂಡಾ ಬಿಎಸ್-4 ವಾಹನಗಳವನ್ನು ಮುಂದಿನ ಕೆಲ ದಿನಗಳ ಕಾಲ ಮುಂದುವರಿಸಲಾಗಿದೆ.
ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.
ಜೊತೆಗೆ ಬಿಎಸ್-4 ವಾಹನ ಮಾರಾಟ ಅವಧಿ ವಿಸ್ತರಣೆಯ ವಿನಾಯ್ತಿಯು ದೆಹಲಿ ಮತ್ತು ಎನ್ಸಿಆರ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ತಡೆಯಲು ಹಳೆಯ ವಾಹನಗಳಿಗೆ ಕಡಿವಾಣ ಹಾಕುವುದೇ ಮುಖ್ಯ ಎಂದಿದೆ.
ಇಷ್ಟೊಂದು ನಷ್ಟ ಭೀತಿಯ ನಡುವೆಯೂ ಜಗ್ಗದ ಟಾಟಾ ಸಮೂಹ ಸಂಸ್ಥೆಗಳು ಕರೋನಾ ವಿರುದ್ಧದ ಹೋರಾಟಕ್ಕಾಗಿ ಸರ್ಕಾರದ ಜೊತೆ ಕೈಜೋಡಿಸಿದ್ದು, ಬರೋಬ್ಬರಿ ರೂ.1,500 ಕೋಟಿ ದೇಣಿಗೆ ನೀಡಿ ಸರ್ಕಾರಕ್ಕೆ ಧೈರ್ಯ ತುಂಬಿದೆ.