Just In
- 3 min ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 44 min ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 1 hr ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 2 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದಲ್ಲಿರುವ ಸರ್ಕಾರಕ್ಕೆ ಮತ್ತೊಮ್ಮೆ ಸಹಾಯಹಸ್ತ ಚಾಚಿದ ಟಾಟಾ
ಕರೋನಾ ವೈರಸ್ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಹಾಮಾರಿ ವೈರಸ್ ಪ್ರಮಾಣವನ್ನು ತಡೆಯಲು ಹೆಗಣಾಡುತ್ತಿದೆ.
ಸಂಕಷ್ಟದಲ್ಲಿರುವ ಸರ್ಕಾರಕ್ಕೆ ಈಗಾಗಲೇ ಹಲವಾರು ಸಂಘ-ಸಂಸ್ಥೆಗಳು ಸೇರಿದಂತೆ ಜನಸಾಮಾನ್ಯರು ಕೂಡಾ ತಮ್ಮ ಕೈಗಾದಷ್ಟು ದೇಣಿಗೆ ನೀಡಿ ಸರ್ಕಾರದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಶೋಚನೀಯ ಆರ್ಥಿಕ ಪರಿಸ್ಥಿತಿಯಿಂದಾಗಿ ವೈರಸ್ ತಡೆಗಟ್ಟಲು ಹೆಣಗಾಡುತ್ತಿರುವ ಸರ್ಕಾರಕ್ಕೆ ಭಾರೀ ಪ್ರಮಾಣದ ವೈದ್ಯಕೀಯ ಉಪಕರಣಗಳ ದೇಣಿಗೆ ಕೂಡಾ ಹರಿದುಬಂದಿದ್ದು, ಟಾಟಾ ಸಮೂಹ ಸಂಸ್ಥೆಗಳು ದೇಣಿಗೆ ನೀಡುವ ವಿಚಾರದಲ್ಲಿ ದೇಶದ ಜನತೆಯ ಮೆಚ್ಚುಗೆ ಕಾರಣವಾಗಿದೆ.
ಕರೋನಾ ವಿರುದ್ಧ ಹೋರಾಟದಲ್ಲಿ ನಿರತವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒಂದಿಲ್ಲಾ ಒಂದು ರೀತಿಯ ಸಹಾಯ ಹಸ್ತ ಚಾಚುತ್ತಿರುವ ಟಾಟಾ ಕಂಪನಿಯು ಇದೀಗ ಮತ್ತೊಮ್ಮೆ ಜನತೆಯ ಮೆಚ್ಚುಗೆಗೆ ಕಾರಣವಾಗಿದೆ.
ವೈರಸ್ ವಿರುದ್ಧ ಹೋರಾಟಕ್ಕಾಗಿ ಅತಿ ಹೆಚ್ಚು ದೇಣಿಗೆ ನೀಡಿದ ಖಾಸಗಿ ಕಂಪನಿಗಳ ಪೈಕಿ ಅಗ್ರಸ್ಥಾನದಲ್ಲಿರುವ ಟಾಟಾ ಸಮೂಹ ಸಂಸ್ಥೆಗಳು ಇದೀಗ ಮಾಹಾರಾಷ್ಟ್ರ ಸರ್ಕಾರಕ್ಕೆ ಮತ್ತೊಮ್ಮೆ ಸಹಾಯಹಸ್ತಚಾಚಿದ್ದು, ತುರ್ತು ವೈದ್ಯಕೀಯ ಸೇವೆಗಳಿಗಾಗಿ 20 ಆ್ಯಂಬುಲೆನ್ಸ್, 100 ವೆಂಟಿಲೇಟರ್ ಮತ್ತು ರೂ.10 ಕೋಟಿ ಆರ್ಥಿಕ ಸಹಾಯ ನೀಡಿದೆ.
ಟಾಟಾ ಸನ್ಸ್ ಫೌಂಡೇಶನ್ ಮೂಲಕ ಮಹಾರಾಷ್ಟ್ರ ಸರ್ಕಾರಕಕ್ಕೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉಪಸ್ಥಿತಿಯಲ್ಲಿ ಹೊಸ ವೈದ್ಯಕೀಯ ಉಪಕರಣಗಳನ್ನು ಬೃಹತ್ ಮುಂಬೈ ಮಾಹಾನಗರ ಪಾಲಕೆ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಉಪಕರಣಗಳನ್ನು ಹಸ್ತಾಂತರ ಮಾಡಲಾಗಿದೆ.
ಇದಕ್ಕೂ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೂ ಹಲವು ಮಾದರಿಯ ಸಹಾಯಹಸ್ತ ಚಾಚಿರುವ ಟಾಟಾ ಸಮೂಹ ಸಂಸ್ಥೆಗಳು ಬರೋಬ್ಬರಿ ರೂ.1,500 ಕೋಟಿ ದೇಣಿಗೆ ನೀಡಿತ್ತು. ಇದೀಗ ಸೋಂಕು ಹೆಚ್ಚಿರುವುದರಿಂದ ಮಹಾರಾಷ್ಟ್ರ ಸರ್ಕಾರಕ್ಕೆ ಅಗತ್ಯವಾದ ವೈದ್ಯಕೀಯ ಉಪಕರಣಗಳನ್ನು ಒದಗಿಸಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ಗೆ ಭರ್ಜರಿ ಆಫರ್ ನೀಡಿದ ಟಾಟಾ
ಇನ್ನು ಮಾಹಾಮಾರಿ ಕರೋನಾ ವೈರಸ್ ಹೊಡೆದೊಡಿಸಲು ಆಟೋ ಉತ್ಪಾದನಾ ಕಂಪನಿಗಳಲ್ಲೇ ಗರಿಷ್ಠ ಪ್ರಮಾಣದ ಸಹಾಯಧನ ನೀಡಿರುವ ಟಾಟಾ ಮೋಟಾರ್ಸ್ ಕಂಪನಿಯು ಸರ್ಕಾರಕ್ಕೆ ನೆರವು ನೀಡುವುದರ ಜೊತೆಗೆ ಲಾಕ್ಡೌನ್ ಸಂದರ್ಭದಲ್ಲಿ ದಿನಂಪ್ರತಿ ದೇಶದ ವಿವಿಧಡೆ ಲಕ್ಷಾಂತರ ಜನರ ಹಸಿವು ನೀಗಿಸುವ ಮಹತ್ಕಾರ್ಯ ಮಾಡಿದೆ.
ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸರ್ಕಾರಕ್ಕೆ ವಿವಿಧ ಹಂತಗಳಲ್ಲಿ ಹಣಕಾಸಿನ ಸಹಾಯ ಮಾಡಿರುವ ಟಾಟಾ ಸಮೂಹ ಸಂಸ್ಥೆಗಳು ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಕಾರಣವಾಗಿವೆ.
MOST READ: ಬಾಯ್ಕಟ್ ಚೀನಾ ಅಭಿಯಾನ: ಚೆರಿ ಕಂಪನಿ ಜೊತೆಗಿನ ಹೊಸ ಯೋಜನೆಗೆ ಗುಡ್ಬೈ ಹೇಳಲಿದೆ ಟಾಟಾ
ಮೊದಲ ಮತ್ತು ಎರಡನೇ ಹಂತದ ಲಾಕ್ಡೌನ್ ಸಂದರ್ಭದಲ್ಲಿ ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಕೋಟ್ಯಾಂತರ ಜನರು ಒಂದು ಹೊತ್ತಿನ ಊಟಕ್ಕಾಗಿ ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆ ಕೈಜೋಡಿಸಿದ ಸಾವಿರಾರು ಸಂಘ-ಸಂಸ್ಥೆಗಳು ಭಾರೀ ಪ್ರಮಾಣದ ದೇಣಿಗೆ ಜೊತೆಗೆ ಬಡವರಿಗೆ ಊಟ ವಿತರಣೆ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ.