Just In
- 4 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 5 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 6 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 7 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಯಲ್ಲಿ ಥರ್ಡ್ ಪಾರ್ಟಿ ಇನ್ಶೂರೆನ್ಸ್ ಹೊಂದಿರುವ ವಾಹನ ಸವಾರರ ಪ್ರೀಮಿಯಂ ಪಾವತಿಸುವ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಿರುವುದಾಗಿ ಪ್ರಕಟಿಸಿದೆ.
ಹಣಕಾಸು ಸಚಿವಾಲಯವು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಮಾರ್ಚ್ 25 ಹಾಗೂ ಮೇ 3ರ ನಡುವೆ ಥರ್ಡ್ ಪಾರ್ಟಿ ಇನ್ಶೂರೆನ್ಸ್ ಅವಧಿ ಮುಗಿದಿರುವ ವಾಹನ ಸವಾರರು ಮೇ 15ರೊಳಗೆ ಪಾಲಿಸಿ ಪ್ರೀಮಿಯಂ ಪಾವತಿಸಬಹುದು.
ಕರೋನಾ ವೈರಸ್ ಹರಡದಂತೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ವಿಮೆ ಹಾಗೂ ಅವುಗಳ ನವೀಕರಣದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಈ ಪರಿಸ್ಥಿತಿಯಲ್ಲಿ ವಾಹನ ಸವಾರರ ನೆರವಿಗೆ ಧಾವಿಸಿರುವ ಸರ್ಕಾರವು ಇನ್ಶೂರೆನ್ಸ್ ಪ್ರೀಮಿಯಂ ಪಾವತಿಸುವ ಅವಧಿಯನ್ನು 2020ರ ಮೇ 15ರವರೆಗೆ ವಿಸ್ತರಿಸಿದೆ.
ಕರೋನಾ ವೈರಸ್ನಿಂದಾಗಿ ಭಾರತದಲ್ಲಿ ಮಾರ್ಚ್ 21ರಿಂದ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರವು ಪ್ರತಿಯೊಂದು ಪರಿಸ್ಥಿತಿಯ ಮೇಲೆ ನಿಗಾವಹಿಸಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಕರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರವು, ಸೋಂಕು ಹೆಚ್ಚಾಗುವುದನ್ನು ತಡೆಯಲು ಲಾಕ್ಡೌನ್ಗಿಂತ ಬೇರೆ ದಾರಿಯಿಲ್ಲ ಎಂದು ಹೇಳಿದೆ.
ಕುಸಿದಿರುವ ಆರ್ಥಿಕ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ನಿರ್ಣಯಿಸಿದ ನಂತರ ಹಂತ ಹಂತವಾಗಿ ಲಾಕ್ಡೌನ್ ತೆರವುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಲಾಕ್ಡೌನ್ ಅವಧಿಯಲ್ಲಿನ ಕರೋನಾ ವೈರಸ್ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ಕೇಂದ್ರ ಸರ್ಕಾರವು, ದೇಶವನ್ನು ರೆಡ್, ಆರೆಂಜ್ ಹಾಗೂ ಗ್ರೀನ್ ಜೋನ್ಗಳೆಂದು ವಿಗಂಡಿಸಿ ಅದರ ಆಧಾರದ ಮೇಲೆ ಕರೋನಾ ಪ್ರಕರಣಗಳು ಇಲ್ಲದಿರುವ ಜೋನ್ಗಳಲ್ಲಿ ಸೀಮಿತ ಸೇವೆಗಳನ್ನು ಆರಂಭಿಸಲು ಅನುಮತಿ ನೀಡಲಿದೆ.