Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 11 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಷ್ಟ ಪರಿಹಾರಕ್ಕೆ ಬೇಡಿಕೆಯಿಟ್ಟ ಟೋಲ್ ಆಪರೇಟರ್ಗಳು
ಹೆದ್ದಾರಿ ಪ್ರಾಧಿಕಾರದಿಂದ ಸುಮಾರು ರೂ.650 ಕೋಟಿ ವಸೂಲಿ ಮಾಡಲು ಮಧ್ಯಸ್ಥಿಕೆ ವಹಿಸುವಂತೆ ಹೈವೇ ಟೋಲ್ ಆಪರೇಟರ್ಗಳು ಮನವಿ ಮಾಡಿದ್ದಾರೆ. ಟೋಲ್ ಆಪರೇಟರ್ಗಳ ಪ್ರಕಾರ, ಲಾಕ್ಡೌನ್ ಕಾರಣಕ್ಕೆ 25 ದಿನಗಳವರೆಗೆ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿದ್ದ ಕಾರಣಕ್ಕೆ ರೂ.650 ಕೋಟಿ ನಷ್ಟವಾಗಿದೆ.
ಈ ನಷ್ಟವನ್ನು ಭರಿಸುವಂತೆ ಟೋಲ್ ಆಪರೇಟರ್ಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಖಾಸಗಿ ಇಕ್ವಿಟಿ ಹೊಂದಿರುವವರು ಸೇರಿದಂತೆ 162 ಬಿಲ್ಡ್-ಆಪರೇಟ್ ಟ್ರಾನ್ಸ್ಫರ್ ಟೋಲ್ ಆಪರೇಟರ್ಗಳು ಲಾಕ್ಡೌನ್ ಅವಧಿಯಲ್ಲಿ ತಮಗೆ ಉಂಟಾದ ವೆಚ್ಚ ಹಾಗೂ ನಷ್ಟಗಳಿಗೆ ಹಣಕಾಸಿನ ಪರಿಹಾರವನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದಾರೆ.
ಕೋವಿಡ್ -19 ಹರಡದಂತೆ ತಡೆಯಲು ಕೇಂದ್ರ ಸರ್ಕಾರವು ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಿತ್ತು. ಗೃಹ ಇಲಾಖೆಯ ಸೂಚನೆ ಮೇರೆಗೆ ಮಾರ್ಚ್ 25ರಿಂದ ಏಪ್ರಿಲ್ 19ರವರೆಗೆ ದೇಶಾದ್ಯಂತ ಟೋಲ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಈ ಅವಧಿಯಲ್ಲಿ ದೇಶಾದ್ಯಂತ ಟೋಲ್ ಪ್ಲಾಜಾಗಳು ಕಾರ್ಯನಿರ್ವಹಿಸುತ್ತಿದ್ದವು. ಆದರೆ ವಾಹನಗಳಿಂದ ಟೋಲ್ ಶುಲ್ಕವನ್ನು ಸಂಗ್ರಹಿಸುತ್ತಿರಲಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ಸಂಗ್ರಹವನ್ನು ಮುಚ್ಚುವ ಅವಧಿಯನ್ನು ಉಲ್ಲೇಖಿಸದ ಕಾರಣಕ್ಕೆ ರಿಯಾಯಿತಿದಾರರು ಭ್ರಮನಿರಸನಗೊಂಡಿದ್ದಾರೆ ಎಂದು ಹೇಳಲಾಗಿದೆ.
ಟೋಲ್ ರಸ್ತೆಗಳನ್ನು ನಿರ್ಮಿಸುವವರು ಹಾಗೂ ಆಪರೇಟರ್ಗಳಿಗೆ ನೆರವಾಗಲು ಸಾರಿಗೆ ಇಲಾಖೆಯು ಮೇ ತಿಂಗಳಿನಲ್ಲಿ ಕೆಲವು ಯೋಜನೆಗಳನ್ನು ಘೋಷಿಸಿತು. ಈ ಯೋಜನೆಯನ್ವಯ ರಸ್ತೆ ನಿರ್ಮಾಣದ ಗಡುವನ್ನು ಆರು ತಿಂಗಳವರೆಗೆ ವಿಸ್ತರಿಸಲು ಹಾಗೂ ಗುತ್ತಿಗೆದಾರರಿಗೆ ತ್ವರಿತವಾಗಿ ಹಣ ಪಾವತಿಸುವಂತೆ ಶಿಫಾರಸು ಮಾಡಲಾಯಿತು.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ಆದರೆ ಕೆಲಸ ಸ್ಥಗಿತಗೊಂಡ ಕಾರಣಕ್ಕೆ ಹಾಗೂ ಯೋಜನೆಯು ವಿಳಂಬವಾಗುವ ಕಾರಣಕ್ಕೆ ಉಂಟಾಗುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ಯಾವುದೇ ಪರಿಹಾರ ಪ್ಯಾಕೇಜ್ನ ಭರವಸೆ ನೀಡಲಿಲ್ಲ.
ವರದಿಗಳ ಪ್ರಕಾರ, ಟೋಲ್ ಆಪರೇಟರ್ಗಳು ಮಧ್ಯಸ್ಥಿಕೆ ಮಾಡಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೆ ಸರ್ಕಾರವು ಇದುವರೆಗೂ ಯಾವುದೇ ದೃಢವಾದಕ್ರಮಗಳನ್ನು ಕೈಗೊಂಡಿಲ್ಲ.