Just In
- 37 min ago ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- 53 min ago ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- 54 min ago Ather: ಬೆಂಗಳೂರಿನ ಎಥರ್ನಿಂದ ಫ್ಯಾಮಿಲಿ ಇ-ಸ್ಕೂಟರ್ 'ರಿಜ್ಟಾ' ಬುಕ್ಕಿಂಗ್ ಆರಂಭ, ರೂ.999 ಪಾವತಿಸಿದರೆ ಸಾಕು!
- 1 hr ago Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Movies ಬಿಸಿಲು, ಮಳೆ, ಧೂಳು ಬರಲಿ.. ಯಶ್ ಇದ್ರೆ ಸಾಕು.. ಏನಂತೀರಾ?
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡದಿಯಲ್ಲಿ ಕಾರ್ಮಿಕರ ಮುಷ್ಕರ- ಟೊಯೊಟಾ ಕಾರು ಉತ್ಪಾದನೆಯಲ್ಲಿ ಕುಂಠಿತ
ಕರೋನಾ ವೈರಸ್ ಪರಿಣಾಮ ಕಾರು ಉತ್ಪಾದನೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದ್ದ ಕಾರು ಕಂಪನಿಗಳು ಇದೀಗ ಬೇಡಿಕೆ ಹೆಚ್ಚುತ್ತಿದ್ದಂತೆ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಿದ್ದು, ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಭರಾಟೆಯಲ್ಲಿ ಕಾರ್ಮಿಕರ ನೀತಿಗಳಿಗೆ ವಿರುದ್ಧವಾಗಿ ಉತ್ಪಾದನೆ ಕೈಗೊಳ್ಳುತ್ತಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಲಾಕ್ಡೌನ್ ಅವಧಿಯಲ್ಲಿನ ಕಾರು ಮಾರಾಟ ಇಳಿಕೆಯ ನೆಪವೊಡ್ಡಿ ಕಾರ್ಮಿಕರ ಮೇಲೆ ಒತ್ತಡ ಹೇರುತ್ತಿರುವ ವಾಹನ ಕಂಪನಿಗಳು ಉತ್ಪಾದನಾ ಗುರಿತಲುಪಲು ಮುಂದಾಗಿದ್ದು, ಕೋವಿಡ್ ಸಂದರ್ಭದಲ್ಲೂ ಲಾಭದ ನೀರಿಕ್ಷೆಯೊಂದಿಗೆ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಇದೇ ಕಾರಣಕ್ಕೆ ಟೊಯೊಟಾ ಕೀರ್ಲೋಸ್ಕರ್ ಮೋಟಾರ್ಸ್ ಕಂಪನಿಯು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವಿನ ಮುಸುಕಿನ ಗುದ್ದಾಟಕ್ಕೆ ಕಾರು ಉತ್ಪಾದನೆಯು ಕುಂಠಿತಗೊಂಡಿದೆ.
ಹೌದು, ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿರುವ ಟೊಯೊಟಾ ಆಡಳಿತ ಮಂಡಳಿಯು ಕೋವಿಡ್ ಸುರಕ್ಷಾ ನಿಯಮಗಳ ಉಲ್ಲಂಘನೆ ಆರೋಪದಡಿ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳನ್ನು ಅಮಾನತು ಖಂಡಿಸಿ ಅಹೋರಾತ್ರಿ ಧರಣಿ ನಡೆಸಲಾಗಿದ್ದು, ಕಾರ್ಮಿಕರ ಪ್ರತಿಭಟನೆಯ ಕಾವು ಹೆಚ್ಚಾದ ಹಿನ್ನಲೆಯಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯು ತಾತ್ಕಾಲಿಕ ಲಾಕೌಟ್ ಘೋಷಣೆ ಮಾಡಿದೆ.
ಕಾರ್ಮಿಕರ ಪ್ರತಿಭಟನೆ ಕುರಿತು ಪ್ರಕ್ರಿಯೆಸಿರುವ ಟೊಯೊಟಾ ಆಡಳಿತ ಮಂಡಳಿಯು ನೌಕರರು ಹಾಗೂ ಪಾಲುದಾರರ ಯೋಗಕ್ಷೇಮ ಕಾಯಲು ಕಂಪನಿಯು ಬದ್ದವಾಗಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲವರು ಕೋವಿಡ್ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಅನುಚಿತವಾಗಿ ವರ್ತಿಸುತ್ತಿರುವುದಕ್ಕೆ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದೆ.
ಕಂಪನಿಯ ಕಾನೂನು ಮತ್ತು ಸೇವಾ ನಿಯಮಗಳಂತೆ ಶಿಸ್ತು ಉಲ್ಲಂಘಿಸಿದ ಕಾರ್ಮಿಕರನ್ನು ಅಮಾನತುಗೊಳಿದ್ದು, ಕಾರ್ಮಿಕರ ಯೂನಿಯನ್ ಜೊತೆಗೂಡಿ ಸಮಸ್ಯೆ ಬಗೆಹರಿಸಲು ಮಾತುಕತೆ ನಡೆಸಲಾಗುತ್ತಿದೆ ಎಂದಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಇನ್ನು ಟೊಯೊಟಾ ಕಂಪನಿಯು ಕಾರು ಮಾರಾಟ ಗುರಿತಲುಪಲು ಕಾರ್ಮಿಕರ ಮೇಲೆ ಒತ್ತಡ ಹೇರುತ್ತಿರುವುದಲ್ಲದೆ ದುಂಡಾವರ್ತನೆಯ ಆರೋಪಗಳು ಕೇಳಿಬಂದಿದ್ದು, ಜಪಾನ್ನಲ್ಲಿರುವ ಮುಖ್ಯ ಕಾರು ಉತ್ಪಾದನಾ ಘಟಕದ ಸೂಚನೆ ಮೇರೆಗೆ ಕಾರ್ಯನಿರ್ವಹಿಸುವಂತೆ ಒತ್ತಡ ಹಾಕಲಾಗುತ್ತಿದೆ.
ಆದರೆ ಕಾರ್ಮಿಕರ ನೀತಿ ನಿಯಮಗಳ ಪ್ರಕಾರ ಕಾರ್ಯನಿರ್ವಹಣೆಗೆ ಪಟ್ಟುಹಿಡಿರುವ ಕಾರ್ಮಿಕರ ಒಕ್ಕೂಟವು ಆಡಳಿತ ಮಂಡಳಿಯೊಂದಿಗೆ ವಾಗ್ವಾದ ನಡೆಸುತ್ತಿದ್ದು, ಶೀಘ್ರದಲ್ಲೇ ಕಾರ್ಮಿಕರ ಒಕ್ಕೂಟದ ಜೊತೆಗೂಡಿ ಸಮಸ್ಯೆ ಬಗೆಹರಿಸುವುದಾಗಿ ಕಂಪನಿಯು ಭರವಸೆ ನೀಡಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ
ಇನ್ನು ಯುನಿಯನ್ ಕಾರ್ಮಿಕರ ಪ್ರತಿಭಟನೆಯಿಂದ ಲಾಕೌಟ್ ಆಗಿರುವ ಉತ್ಪಾದನಾ ಘಟಕದಲ್ಲಿ ಕಾರು ಉತ್ಪಾದನೆಯು ಕುಂಠಿತಗೊಂಡಿದ್ದು, ಗುತ್ತಿಗೆ ಕಾರ್ಮಿಕರೊಂದಿಗೆ ಕನಿಷ್ಠ ಪ್ರಮಾಣದ ಉತ್ಪಾದನೆ ಕೈಗೊಳ್ಳಲಾಗುತ್ತಿದೆ. ಇದರಿಂದ ದೀಪಾವಳಿ ಸಂಭ್ರಮಾಚರಣೆಯ ವೇಳೆ ಟೊಯೊಟಾ ಹೊಸ ಕಾರುಗಳ ವಿತರಣೆಯ ನೀರಿಕ್ಷೆಯಲ್ಲಿರುವ ಗ್ರಾಹಕರಿಗೆ ತುಸು ವಿಳಂಬವಾಗುವ ಸಾಧ್ಯತೆಗಳಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹಲವು ಪ್ರಯತ್ನಗಳು ನಡೆದಿವೆ.