Just In
- 1 hr ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 14 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 14 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್: ಟ್ರಕ್ ಚಾಲನೆ ಮಾಡಲು ಚಾಲಕರೇ ಸಿಗುತ್ತಿಲ್ಲ..!
ಕರೋನಾ ವೈರಸ್ನಿಂದಾಗಿ ಇಡಿ ವಿಶ್ವವೇ ಆತಂಕದಲ್ಲಿದ್ದು, ಈ ಮಾರಣಾಂತಿಕ ವೈರಸ್ ಹರಡದಂತೆ ತಡೆಯಲು ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಹಾಮಾರಿ ಕರೋನಾ ವೈರಸ್ ಹಾವಳಿಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿಯು ದಿನದಿಂದ ದಿನಕ್ಕೆ ಕುಸಿಯುತ್ತಿದೆ.
ಕರೋನಾ ವೈರಸ್ ಹರಡದಂತೆ ತಡೆಯಲು ಕೇಂದ್ರ ಸರ್ಕಾರವು 21 ದಿನಗಳ ಲಾಕ್ ಡೌನ್ ಜಾರಿಗೊಳಿಸಿದೆ. ಜನರು ವಿನಾಕಾರಣ ಮನೆಗಳಿಂದ ಹೊರಬಾರದಂತೆ ಮನವಿ ಮಾಡಲಾಗಿದೆ. ಇದರಿಂದಾಗಿ ಬಸ್, ರೈಲು, ಟ್ರಕ್ ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಆದರೆ ಅಗತ್ಯ ವಸ್ತುಗಳ ಸಾಗಾಣಿಕೆಗೆ ಯಾವುದೇ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಕೆಲವು ಸೂಚನೆಗಳನ್ನು ನೀಡಿ ಟ್ರಕ್ ಗಳ ಓಡಾಟಕ್ಕೆ ಅನುಮತಿ ನೀಡಿದೆ. ಆದರೆ ಹಲವಾರು ಸಮಸ್ಯೆಗಳಿರುವುದಾಗಿ ಟ್ರಕ್ ಮಾಲೀಕರ ಸಂಘವು ತಿಳಿಸಿದೆ.
100 ಟ್ರಕ್ಗಳಿಗೆ ಕೇವಲ 15 ಚಾಲಕರು ಮಾತ್ರ ಲಭ್ಯವಿರುವುದಾಗಿ ಟ್ರಕ್ ಮಾಲೀಕರ ಸಂಘವು ಹೇಳಿದೆ. ಕರೋನಾ ವೈರಸ್ ಹರಡುವುದಕ್ಕೆ ಮುನ್ನ 100 ಟ್ರಕ್ಗಳಿಗೆ 58-60 ಚಾಲಕರು ಲಭ್ಯರಿದ್ದರು ಎಂದು ಹೇಳಲಾಗಿದೆ.
ಕರೋನಾ ವೈರಸ್ ಹರಡುವ ಭೀತಿಯಿಂದ ಟ್ರಕ್ ಚಾಲಕರು ತಮ್ಮ ಮನೆಗಳಿಗೆ ಮರಳುತ್ತಿದ್ದಾರೆ ಎಂದು ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘದ (ಎಐಟಿಡಬ್ಲ್ಯೂಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರೋನಾ ವೈರಸ್ ಪೀಡಿತ ರಾಜ್ಯಗಳಲ್ಲಿರುವ ಟ್ರಕ್ ಚಾಲಕರು ತಮ್ಮ ಮನೆಗಳಿಗೆ ಹೋಗಲು ಬಯಸಿದ್ದಾರೆ.
ಕೇವಲ 10%ನಷ್ಟು ಲಾರಿಗಳು ಮಾತ್ರ ಓಡಾಟ ನಡೆಸುತ್ತಿದ್ದು, ಇದರಿಂದಾಗಿ ಅಗತ್ಯ ವಸ್ತುಗಳ ವಿತರಣೆಯಲ್ಲಿ ಸಾಕಷ್ಟು ತೊಂದರೆಗಳಾಗುತ್ತಿದೆ ಎಂದು ಅವರು ಹೇಳಿದರು. ಇದರಿಂದಾಗಿ ಅಗತ್ಯ ವಸ್ತುಗಳು ಲಭ್ಯವಿಲ್ಲದೇ ಬೆಲೆ ಏರಿಕೆಯುಂಟಾಗಿದೆ.
ಲಾಕ್ ಡೌನ್ ಸಮಯದಲ್ಲಿ ಎಲ್ಲಾ ಟ್ರಕ್ ಗಳು ಸಾಮಾನ್ಯ ರೀತಿಯಲ್ಲಿ ಓಡಾಡುತ್ತಿರಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಆದರೆ ಸರ್ಕಾರದ ಸೂಚನೆಯು ಸರಿಯಾಗಿ ಪಾಲನೆಯಾಗುತ್ತಿಲ್ಲ.
ಲಾಕ್ಡೌನ್ ಸಮಯದಲ್ಲಿ ಟ್ರಕ್ ಚಾಲಕರು ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ. ಟ್ರಕ್ ಗಳನ್ನು ತಡೆದು ಅನಗತ್ಯವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಯೂನಿಯನ್ ಹೇಳಿದೆ. ಅನೇಕ ಸ್ಥಳಗಳಲ್ಲಿ ಟ್ರಕ್ ಚಾಲಕರನ್ನು ಥಳಿಸಿದ ಪ್ರಕರಣಗಳೂ ನಡೆದಿವೆ.
ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ರೂ.50 ಲಕ್ಷಗಳ ವಿಮಾ ರಕ್ಷಣೆಯನ್ನು ನೀಡಲಾಗಿದ್ದು, ಟ್ರಕ್ ಚಾಲಕರಿಗೂ ಸಹ ವಿಮೆಯನ್ನು ನೀಡಬೇಕೆಂದು ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘವು ಸರ್ಕಾರವನ್ನು ಒತ್ತಾಯಿಸಿದೆ.