Just In
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 2 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 3 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಯು ಮಾಲಿನ್ಯಕ್ಕೆ ಟ್ರಕ್ಗಳೇ ಪ್ರಮುಖ ಕಾರಣವೆಂದು ತಿಳಿಸಿದ ಸಂಶೋಧನಾ ವರದಿ
ಭಾರತದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರಗಳಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯಕ್ಕೆ ರಾತ್ರಿ ವೇಳೆಯಲ್ಲಿ ನಗರಗಳಲ್ಲಿ ಸಂಚರಿಸುತ್ತಿರುವ ಟ್ರಕ್ಗಳೇ ಪ್ರಮುಖ ಕಾರಣವೆಂದು ಹೇಳಲಾಗಿದೆ.
ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯ (ಎನ್ಇಆರ್ಐ) ವರದಿಯ ಪ್ರಕಾರ ಪಾರ್ಟಿಕುಲೇಟ್ ಮ್ಯಾಟರ್ 10ರ 49% ಹಾಗೂ ಪಾರ್ಟಿಕುಲೇಟ್ ಮ್ಯಾಟರ್ 10ರ 49.5% ರಾತ್ರಿ ವೇಳೆ ಸಂಚರಿಸುವ ಟ್ರಕ್ಗಳಿಂದ ಉಂಟಾಗಿದೆ. ರಾತ್ರಿಯಲ್ಲಿ ಟ್ರಕ್ಗಳಿಂದ ಹೊರಹೊಮ್ಮುವ ಹೊಗೆ ವಾತಾವರಣಕ್ಕೆ ಹರಡಿ ಚಳಿಗಾಲದಲ್ಲಿ ವಾತಾವರಣವನ್ನು ಅಸ್ತವ್ಯಸ್ತಗೊಳಿಸುವುದರ ಜೊತೆಗೆ ಸೂರ್ಯನ ಬೆಳಕಿಗೆ ಅಡ್ಡಿಪಡಿಸುತ್ತದೆ.
ಟ್ರಕ್ಗಳ ಹೊಗೆಯಲ್ಲಿ ಕಂಡುಬರುವ ಅತ್ಯಂತ ಅಪಾಯಕಾರಿ ಪಾರ್ಟಿಕುಲೇಟ್ ಮ್ಯಾಟರ್ 2.5 ಹಾಗೂ ಪಾರ್ಟಿಕುಲೇಟ್ ಮ್ಯಾಟರ್ 10 ಎಂದು ಎನ್ಇಆರ್ಐ ಸಂಶೋಧನಾ ವರದಿಯಲ್ಲಿ ಹೇಳಲಾಗಿದೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಪರಿಸರದಲ್ಲಿ ಈ ಪಾರ್ಟಿಕುಲೇಟ್ ಮ್ಯಾಟರ್ ಹೆಚ್ಚಳವು ಅಕಾಲಿಕ ಮರಣದ ಪ್ರಮಾಣವನ್ನು ಹೆಚ್ಚಿಸುತ್ತದೆ. ಬಹುತೇಕ ನಗರಗಳಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಟ್ರಕ್'ಗಳ ಓಡಾಟಕ್ಕೆ ಅನುಮತಿ ನೀಡಲಾಗಿರುತ್ತದೆ.
ಈ ಸಮಯದಲ್ಲಿ ನಗರದ ಗಾಳಿಯು ಹೆಚ್ಚು ಕಲುಷಿತಗೊಳ್ಳುತ್ತದೆ. ರಾತ್ರಿಯಲ್ಲಿ ಟ್ರಕ್ಗಳಿಂದ ಹೊರಹೊಮ್ಮುವ ಹೊಗೆ ಮುಂಜಾನೆಯ ವೇಳೆಗೆ ಗಾಳಿಯ ಗುಣಮಟ್ಟವನ್ನು ಕಲುಷಿತಗೊಳಿಸುತ್ತದೆ. ಎನ್ಇಆರ್ಐ ಈ ಸಮಯದ ಗಾಳಿಯ ಗುಣಮಟ್ಟವನ್ನು ಕೆಟ್ಟ ಹಾಗೂ ಅಪಾಯಕಾರಿ ಎಂದು ವಿಂಗಡಿಸಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಟ್ರಕ್ಗಳು ಉಂಟು ಮಾಡುವ ಮಾಲಿನ್ಯ ಪ್ರಮಾಣವನ್ನು ನಿಯಮಿತವಾಗಿ ಪರಿಶೀಲಿಸದ ಕಾರಣ ನಗರಗಳನ್ನು ಪ್ರವೇಶಿಸುವ ಟ್ರಕ್ಗಳು ಮಾಲಿನ್ಯವನ್ನುಂಟು ಮಾಡುತ್ತವೆ. ಚಳಿಗಾಲದಲ್ಲಿ ಇಂಗಾಲದ ಡೈಆಕ್ಸೈಡ್ ಪ್ರಮಾಣವು ಹೆಚ್ಚಿನ ಪ್ರಮಾಣದಲ್ಲಿ ಹೊರಹೊಮ್ಮುತ್ತದೆ ಎಂದು ಎನ್ಇಆರ್ಐ ತನ್ನ ವರದಿಯಲ್ಲಿ ತಿಳಿಸಿದೆ.
ಪ್ರತಿ ವರ್ಷ ದೆಹಲಿಯ ವಾಯುಮಾಲಿನ್ಯವು ಚಳಿಗಾಲದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪುತ್ತದೆ. ದೆಹಲಿಯಲ್ಲಿ ಉಂಟಾಗುತ್ತಿರುವ ಮಾಲಿನ್ಯವನ್ನು ನಿಯಂತ್ರಿಸಲು ದೆಹಲಿ ರಾಜ್ಯ ಸರ್ಕಾರವು ಬೆಸ-ಸಮ ನಿಯಮವನ್ನು ಜಾರಿಗೊಳಿಸುತ್ತಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಈ ವರ್ಷ ಚಳಿಗಾಲಕ್ಕೂ ಮುನ್ನವೇ ದೆಹಲಿಯಲ್ಲಿ ಮಾಲಿನ್ಯಕ್ಕೆ ಕಾರಣವಾಗುವ ಕಾರ್ಖಾನೆಗಳನ್ನು ಮುಚ್ಚಲಾಗಿದೆ. ಜೊತೆಗೆ ಮಾಲಿನ್ಯವನ್ನು ಹರಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
ಬೆಸ-ಸಮ ನಿಯಮವನ್ನು ದೆಹಲಿಯಲ್ಲಿ ಮೊದಲ ಬಾರಿಗೆ 2016ರಲ್ಲಿ ಜಾರಿಗೆ ತರಲಾಯಿತು. ನಂತರ ಈ ನಿಯಮವನ್ನು ಮೂರು ಬಾರಿ ಜಾರಿಗೆ ತರಲಾಗಿದೆ. ಕಳೆದ ವರ್ಷವೂ ಮಾಲಿನ್ಯ ಹೆಚ್ಚಳವಾದ ಕಾರಣಕ್ಕೆ ಬೆಸ-ಸಮ ನಿಯಮವನ್ನು ಜಾರಿಗೊಳಿಸಲಾಗಿತ್ತು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ದೆಹಲಿಯಲ್ಲಿ 1 ಕೋಟಿಗೂ ವಾಹನಗಳಿದ್ದು, ಈ ಪೈಕಿ 30-40 ಲಕ್ಷ ವಾಹನಗಳು ಪ್ರತಿದಿನ ರಸ್ತೆಗಳಲ್ಲಿ ಸಂಚರಿಸುತ್ತವೆ. ಈ ವಾಹನಗಳು ಸಿಗ್ನಲ್'ನಲ್ಲಿ ಹೆಚ್ಚು ಹೊತ್ತು ನಿಂತಿರುತ್ತವೆ. ಹೀಗೆ ನಿಂತಿರುವಾಗ ಅವುಗಳ ಎಂಜಿನ್'ಗಳನ್ನು ಆಫ್ ಮಾಡದ ಕಾರಣ ವಾಯುಮಾಲಿನ್ಯ ಹೆಚ್ಚಾಗುತ್ತದೆ.
ದೆಹಲಿ ಹಾಗೂ ಸುತ್ತಮುತ್ತಲಿರುವ ರಾಜ್ಯಗಳಲ್ಲಿ ರೈತರು ಭತ್ತವನ್ನು ಕಟಾವು ಮಾಡಿದ ನಂತರ ಒಣಹುಲ್ಲಿಗೆ ಬೆಂಕಿ ಇಡುವುದರಿಂದ ಪರಿಸರವು ಹದಗೆಡುತ್ತಿದೆ. ರೈತರು ಒಣಹುಲ್ಲಿಗೆ ಬೆಂಕಿ ಇಡುವುದನ್ನು ತಡೆಯಲು, ಸರ್ಕಾರವು ಆಂಟಿ ಡಸ್ಟ್ ಅಭಿಯಾನವನ್ನು ಆರಂಭಿಸಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಈ ಅಭಿಯಾನದಲ್ಲಿ ಒಣಹುಲ್ಲಿನ ನಾಶಕ್ಕಾಗಿ ರೈತರಿಗೆ ಸಾವಯವ ವಿಭಜಕಗಳನ್ನು ನೀಡಲಾಗುತ್ತದೆ. ಇವುಗಳನ್ನು ಸಿಂಪಡಿಸುವುದರಿಂದ ಒಣಹುಲ್ಲು ಕೊಳೆತು ಮಣ್ಣಿನಲ್ಲಿ ಸೇರಿಕೊಳ್ಳುತ್ತದೆ.