Just In
- 10 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 10 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 11 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 11 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಸಡಿಲಿಕೆ: ಸೀಜ್ ಆಗಿದ್ದ ವಾಹನಗಳ ಮಾಲೀಕರಿಗೆ ಸಿಹಿಸುದ್ದಿ..
ಕರೋನಾ ವೈರಸ್ ತಡೆಗಟ್ಟಲು ದೇಶಾದ್ಯಂತ ಲಾಕ್ಡೌನ್ ವಿಧಿಸಿದ್ದ ಕೇಂದ್ರ ಸರ್ಕಾರವು ಪರಿಸ್ಥಿತಿಗೆ ಅನುಗುಣವಾಗಿ ಇದೀಗ ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡಿದ್ದು, ಬೆಂಗಳೂರು ಪೊಲೀಸರು ಕೂಡಾ ಕೆಲವು ಮಹತ್ವದ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.
ವೈರಸ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಕರೋನೊ ವಾರಿಯರ್ಸ್ ಹೊರತಾಗಿ ಲಾಕ್ಡೌನ್ ವೇಳೆ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿದ್ದವರಿಗೆ ಬಿಸಿ ತಟ್ಟಿಸಿದ್ದ ಬೆಂಗಳೂರು ಪೊಲೀಸರು ಕಳೆದ ಒಂದೂವರೆ ತಿಂಗಳಿನಿಂದ ಬರೋಬ್ಬರಿ 1.80 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಿದ್ದು, ಇದೀಗ 2ನೇ ಹಂತದ ಲಾಕ್ಡೌನ್ ಅನ್ನು ತುಸು ಸಡಿಕೆ ಮಾಡಿರುವುದರಿಂದ ಸೀಜ್ ವಾಹನಗಳನ್ನು ಮರಳಿ ನೀಡಲು ನಿರ್ಧರಿಸಲಾಗಿದೆ.
ಕಠಿಣಕ್ರಮಗಳ ನಡುವೆಯೂ ರಸ್ತೆಗಿಳಿದ್ದ ವಾಹನಗಳನ್ನು ಸೀಜ್ ಮಾಡಿದ್ದ ಪೊಲೀಸರು ಲಾಕ್ಡೌನ್ ಮುಗಿಯುವ ತನಕ ಮರಳಿ ನೀಡದಿರಲು ನಿರ್ಧರಿಸಿದ್ದರು. ಇದೀಗ ಲಾಕ್ಡೌನ್ ಸಡಿಲಿಕೆಯಾಗಿರುವುದರಿಂದ ಸೀಜ್ ಆದ ವಾಹನಗಳನ್ನು ಇಂದಿನಿಂದಲೇ ಮರಳಿಸುವುದಾಗಿ ತಿಳಿಸಲಾಗಿದೆ.
ಸೀಜ್ ಆದ ವಾಹನಗಳನ್ನು ಮರಳಿಸುವುದರ ಬಗ್ಗೆ ಸ್ವತಃ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರೇ ಮಾಹಿತಿ ನೀಡಿದ್ದು, ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹಸಚಿವರ ಸೂಚನೆ ಮೇರೆಗೆ ಸೀಜ್ ಆದ ವಾಹನಗಳನ್ನು ಮೇ 1ರಿಂದ ಹಿಂದಿರುಗಿಸಲಾಗುತ್ತಿದೆ ಎಂದಿದ್ದಾರೆ.
MOST READ: ಲಾಕ್ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..
ಸೀಜ್ ಆದ ವಾಹನಗಳನ್ನು ಮರಳಿ ಪಡೆಯುವಾಗ ಅಗತ್ಯ ದಾಖಲೆಗಳನ್ನು ನೀಡುವುದು ಕಡ್ಡಾಯವಾಗಿದ್ದು, ಸೀಜ್ ವಾಹನಗಳು ಸಂಖ್ಯೆ ಹೆಚ್ಚಿರುವುದರಿಂದ ವಾಹನ ಮಾಲೀಕರು ಒಂದೇ ಬಾರಿಗೆ ಠಾಣೆ ಬರುವುದನ್ನು ತಪ್ಪಿಸಲು ಹಂತ ಹಂತವಾಗಿ ವಾಹನಗಳನ್ನು ಮರಳಿ ನೀಡಲು ತೀರ್ಮಾನಿಸಲಾಗಿದೆ.
ಇನ್ನು ಲಾಕ್ಡೌನ್ ವೇಳೆ ಕರ್ತವ್ಯ ನಿಷ್ಠೆಯೊಂದಿಗೆ ಮಾನವೀಯತೆ ಕಾರ್ಯಗಳಿಂದಲೂ ಜನಮೆಚ್ಚುಗೆ ಕಾರಣವಾದ ಬೆಂಗಳೂರು ಪೊಲೀಸರು ವೈರಸ್ ಭೀತಿ ನಡುವೆಯೂ ಅಗತ್ಯವಿರುವ ಜನರಿಗೆ ಸಹಕಾರ ಮಾಡಿದ್ದನ್ನು ಯಾರು ಮರೆಯುವಂತಿಲ್ಲ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು
ಮಹಾಮಾರಿ ಕರೋನಾ ವೈರಸ್ ತಡೆಗಟ್ಟಲು ದೇಶಾದ್ಯಂತ ಲಾಕ್ಡೌನ್ ವಿಧಿಸಿದ್ದರಿಂದ ಅನಿವಾರ್ಯ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ಕೂಡಾ ಒಂದಿಲ್ಲಾ ಒಂದು ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಲುಕುವಂತಾಗಿತ್ತು. ಆದರೆ ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಕೆಲವು ಕಡೆಗಳಲ್ಲಿ ಲಾಕ್ಡೌನ್ ಸಡಿಕೆಯಾಗಿದೆ.
ಲಾಕ್ಡೌನ್ ವೇಳೆ ಅಗತ್ಯ ವಸ್ತುಗಳ ಕೊರತೆಯಿಂದಾಗಿ ಜನಸಾಮಾನ್ಯರು ಒಂದು ಕಡೆ ಪರದಾಟುವಂತಾಗಿದ್ದರೆ ಮತ್ತೊಂದು ಕಡೆಗೆ ಕರೋನಾ ವೈರಸ್ ಸೋಂಕಿತರನ್ನು ಹೊರತುಪಡಿಸಿ ಸಾಮಾನ್ಯ ರೋಗಿಗಳು ಸೂಕ್ತ ವೈದ್ಯಕೀಯ ಸೌಲಭ್ಯ ಮತ್ತು ಚಿಕಿತ್ಸೆ ಸಿಗದೆ ಕಂಗಾಲಾಗಿದ್ದಾರು.
MOST READ: ಲಾಕ್ಡೌನ್ ಎಫೆಕ್ಟ್- ವಿನಾಯ್ತಿ ಸಿಕ್ಕರೂ ವಾಹನ ಉತ್ಪಾದನೆಗೆ ಮುಂದಾಗದ ಆಟೋ ಕಂಪನಿಗಳು
ಇಂತಹ ಸಂಕಷ್ಟ ಪರಿಸ್ಥಿತಿಯಲ್ಲೂ ಕೂಡಾ ಮಾನವೀಯತೆ ಮೆರೆದಿದ್ದ ಬೆಂಗಳೂರು ನಗರ ಪೊಲೀಸ್ ಪೇದೆಯೊಬ್ಬರು ಸ್ಕೂಟರ್ ಮೂಲಕವೇ ನೂರಾರು ಕಿ.ಮೀ ಪ್ರಯಾಣಿಸಿ ಕ್ಯಾನ್ಸರ್ ರೋಗಿರೊಬ್ಬರಿಗೆ ಸಮಯಕ್ಕೆ ಸರಿಯಾಗಿ ಔಷಧಿ ತಲುಪಿಸಿ ಜನ ಮೆಚ್ಚುಗೆಗೆ ಕಾರಣರಾಗಿದ್ದರು.
ಏಪ್ರಿಲ್ 10ರಂದು ಬೆಂಗಳೂರಿನಿಂದ ಧಾರವಾಡಕ್ಕೆ ಪ್ರಯಾಣ ಬೆಳೆಸಿದ್ದ ಪೊಲೀಸ್ ಪೇದೆ ಎಸ್ ಕುಮಾರಸ್ವಾಮಿ ಅವರು ಒಟ್ಟು 860 ಕಿಲೋ ಮೀಟರ್ ಸ್ಕೂಟರ್ ಚಾಲನೆ ಮಾಡಿ ಸೂಕ್ತ ಸಮಯಕ್ಕೆ ಔಷಧಿ ಸಿಗದೆ ಪರದಾಡುತ್ತಿದ್ದ ಕ್ಯಾನ್ಸರ್ ರೋಗಿಯ ಪ್ರಾಣ ಉಳಿಸುವಲ್ಲಿ ನೆರವಾಗಿದ್ದರು.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್
ಬೆಂಗಳೂರಿನಲ್ಲಿ ಮಾತ್ರ ಲಭ್ಯವಿದ್ದ ಕ್ಯಾನ್ಸರ್ ಔಷಧಿಯನ್ನು ಧಾರವಾಡವಾಡಕ್ಕೆ ತರಿಸಿಕೊಳ್ಳಲು ಯತ್ನಿಸುತ್ತಿದ್ದಾಗ ರೋಗಿ ಸಹಾಯಕ್ಕೆ ಧಾವಿಸಿದ ಪೊಲೀಸ್ ಪೇದೆ ಕುಮಾರಸ್ವಾಮಿ ಅವರು, ಔಷಧಿಯ ಮಾಹಿತಿ ಪಡೆದುಕೊಂಡ ನಂತರ ಆನ್ಲೈನ್ ಮೂಲಕ ಖರೀದಿಸಿ ತಲುಪಿಸಿ ಬಂದಿದ್ದರು.
ಇದೇ ಕಾರಣಕ್ಕೆ ಪೊಲೀಸ್ ಪೇದೆ ಕುಮಾರಸ್ವಾಮಿಯವರ ಮಾನವೀಯ ಕಾರ್ಯವನ್ನು ಮೆಚ್ಚಿದ್ದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಪೇದೆಯ ಜನಪರ ಕಾಳಜಿಗಾಗಿ ಸನ್ಮಾನ ಮಾಡಿದ್ದರು. ಈ ಮೂಲಕ ಕರ್ತವ್ಯ ನಿಷ್ಠೆಯ ಜೊತೆ ಜೊತೆಗೆ ಮಾನವೀಯ ಕಾರ್ಯಗಳ ಮೂಲಕ ನಮ್ಮ ಬೆಂಗಳೂರು ಪೊಲೀಸರು ಸಂಕಷ್ಟದ ಸಮಯವನ್ನು ನಿಭಾಯಿಸಿದ ಪರಿ ನಿಜಕ್ಕೂ ಅಭಿನಂದನಾರ್ಹ.