Just In
- 3 min ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 5 min ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 2 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 15 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೋರ್ಡ್ ಸಮೀಕ್ಷಾ ವರದಿಯಲ್ಲಿ ಬಹಿರಂಗವಾಯ್ತು ಕಾರು ಚಾಲಕರ ನಿರ್ಲಕ್ಷ್ಯ
ಫೋರ್ಡ್ ಇಂಡಿಯಾ ಕಂಪನಿಯು ದೇಶಾದ್ಯಂತ ನಡೆಸಿದ ಕಾರು ಚಾಲಕರ ಕುರಿತ ವಾರ್ಷಿಕ ಸಮೀಕ್ಷೆಯ ಮೂರನೇ ಹಂತದ ಸಂಶೋಧನೆಗಳನ್ನು ಬಿಡುಗಡೆಗೊಳಿಸಿದೆ. ಈ ಸಮೀಕ್ಷೆಯಲ್ಲಿ ಸಂಚಾರ ನಿಯಮಗಳ ಅರಿವು ಹಾಗೂ ಕಾರು ಚಾಲಕರಲ್ಲಿ ಚಾಲನಾ ನಡವಳಿಕೆ ಸೇರಿದಂತೆ ಹಲವಾರು ಅಂಶಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ.
ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಚಾಲಕರು ಕಾರು ಚಾಲನೆ ಮಾಡುವಾಗ ಗಮನವು ಬೇರೆಡೆ ಹೋಗುವ ಬಗ್ಗೆ ಬಹಿರಂಗಪಡಿಸಿದ್ದಾರೆ. ಇದರ ಜೊತೆಗೆ ಬಹುತೇಕ ಚಾಲಕರು ಮಕ್ಕಳ ಸುರಕ್ಷತೆಯ ಬಗ್ಗೆ ಕಡಿಮೆ ಅರಿವು ಹೊಂದಿದ್ದಾರೆ. ಚಾಲನೆ ಮಾಡುವಾಗ ಖಾಲಿ ಬಾಟಲಿಗಳು ಅಥವಾ ಪ್ಯಾಕೆಟ್ಗಳನ್ನು ಕಿಟಕಿಯಿಂದ ಹೊರಗೆ ಎಸೆಯುವುದು ಹಾಗೂ ಉಗುಳುವುದನ್ನು ಅನೇಕ ಚಾಲಕರು ಒಪ್ಪಿಕೊಂಡಿದ್ದಾರೆ.
ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಚಾಲಕರಿಗೆ ಸಂಚಾರ ನಿಯಮಗಳಿಗೆ ಸಂಬಂಧಿಸಿದ 31 ಪ್ರಶ್ನೆಗಳನ್ನು ಕೇಳಲಾಗಿತ್ತು. ಅದರಲ್ಲಿ 27% ಜನರು ಮಾತ್ರ 40%ಗಿಂತ ಹೆಚ್ಚಿನ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡಲು ಸಾಧ್ಯವಾಗಿದೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಇನ್ನು ಕೇವಲ 6%ನಷ್ಟು ಜನರು 50%ಗಿಂತ ಹೆಚ್ಚಿನ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ದಾರೆ. ಕಾರು ಚಾಲಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಮೂಲಭೂತ ಮಾಹಿತಿಯ ಕೊರತೆಯಿರುವುದು ಈ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಸರಿಯಾದ ಟ್ರಾಫಿಕ್ ಚಿಹ್ನೆ ಅಥವಾ ಸೈನ್ ಬೋರ್ಡ್'ಗಳನ್ನು ಗುರುತಿಸಲು ಹೆಚ್ಚಿನ ಜನರು ವಿಫಲರಾಗಿದ್ದಾರೆ. ಹೆಚ್ಚಿನ ಜನರು ಕಾರನ್ನು ತಿರುಗಿಸುವಾಗ ಸಿಗ್ನಲ್ ಬಳಸದೇ ಇರುವ ಬಗ್ಗೆ ಹಾಗೂ ವೇಗದ ಮಿತಿಯನ್ನು ಅನುಸರಿಸದೇ ಇರುವ ಬಗ್ಗೆ ಒಪ್ಪಿಕೊಂಡಿದ್ದಾರೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಪ್ರತಿ 3 ಜನರಲ್ಲಿ ಒಬ್ಬರು ನಗರದ ಸಂಚಾರ ಪರಿಸ್ಥಿತಿ ತುಂಬಾ ಕೆಟ್ಟದಾಗಿದ್ದು, ಹೊರಗೆ ಹೋದಾಗ ಹೆಚ್ಚು ಸಂಚಾರ ದಟ್ಟಣೆಯನ್ನು ಎದುರಿಸಿರುವುದಾಗಿ ತಿಳಿಸಿದರು. 97%ನಷ್ಟು ಜನರು ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸುವ ಕಾರಣ ಗಮನವು ಬೇರೆಡೆ ಹೋಗುತ್ತದೆ ಎಂದು ಹೇಳಿದ್ದಾರೆ.
ರಸ್ತೆ ಅಪಘಾತಗಳಿಗೆ ಮುಖ್ಯ ಕಾರಣದ ಬಗ್ಗೆ ಕೇಳಿದ ಪ್ರಶ್ನೆಗೆ 81%ನಷ್ಟು ಜನರು ಅತಿ ವೇಗದಲ್ಲಿ ವಾಹನ ಚಲಾಯಿಸುವುದೇ ರಸ್ತೆ ಅಪಘಾತಗಳಿಗೆ ಮುಖ್ಯ ಕಾರಣವೆಂದು ಹೇಳಿದ್ದಾರೆ. ಸುಮಾರು ಅರ್ಧದಷ್ಟು ಜನರು ವಾಹನ ಚಾಲನೆ ಮಾಡುವಾಗ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದಾಗಿ ಒಪ್ಪಿಕೊಂಡಿದ್ದಾರೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
58%ನಷ್ಟು ಜನರು ನಿದ್ರೆ ಮಂಪರಿನಲ್ಲಿ ಹಲವು ಬಾರಿ ಕಾರು ಚಾಲನೆ ಮಾಡಿರುವುದಾಗಿ ತಿಳಿಸಿದ್ದಾರೆ. ರಸ್ತೆಯಲ್ಲಿ ಇತರ ವಾಹನಗಳಿಗೆ ಅನುಕೂಲ ಕಲ್ಪಿಸುವ ಬಗ್ಗೆ ಕೇಳಿದ ಪ್ರಶ್ನೆಯಲ್ಲಿ 53%ನಷ್ಟು ಜನರು ಆಂಬುಲೆನ್ಸ್ಗಳಂತಹ ತುರ್ತು ವಾಹನಗಳಿಗೆ ದಾರಿ ಮಾಡಿಕೊಟ್ಟಿಲ್ಲವೆಂದು ತಿಳಿಸಿದ್ದಾರೆ. ಇನ್ನು 57%ನಷ್ಟು ಜನರು ವಾಹನ ಚಾಲನೆ ಮಾಡುವಾಗ ತ್ಯಾಜ್ಯವನ್ನು ರಸ್ತೆಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ.