Just In
- 11 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 12 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 12 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 12 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋ, ಟ್ಯಾಕ್ಸಿಗಳ ಮೋಟಾರು ವಾಹನ ತೆರಿಗೆಯನ್ನು ಮನ್ನಾ ಮಾಡಿದ ಸರ್ಕಾರ
ದೆಹಲಿ-ಎನ್ಸಿಆರ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋಗಳು, ಟ್ಯಾಕ್ಸಿಗಳ ಮೋಟಾರು ವಾಹನ ತೆರಿಗೆಯನ್ನು ಹರಿಯಾಣ ಸರ್ಕಾರವು ಮನ್ನಾ ಮಾಡಿದೆ. ಇದರಿಂದಾಗಿ ಆ ಪ್ರದೇಶದ ಜನರಿಗೆ ಸಾರಿಗೆ ಮಾರ್ಗಗಳನ್ನು ಕಂಡುಹಿಡಿಯುವಲ್ಲಿ ತೊಂದರೆಗಳಾಗುವುದು ತಪ್ಪಲಿದೆ.
ಬುಧವಾರ ನಡೆದ ಹರಿಯಾಣ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾರಿಗೆ ಸೇವೆಯನ್ನು ಬಲಪಡಿಸುವುದು ಇದರ ಹಿಂದಿರುವ ಮುಖ್ಯ ಉದ್ದೇಶವಾಗಿದೆ. ಈ ವಿನಾಯಿತಿಯನ್ನು ಎನ್ಸಿಆರ್ ರಾಜ್ಯಗಳಿಗೆ ನೀಡುವ ಗುತ್ತಿಗೆ ಕ್ಯಾರೇಜ್ ಲೈಸೆನ್ಸ್ ಅಡಿಯಲ್ಲಿ ನೀಡಲಾಗುತ್ತದೆ. ಈ ವಿನಾಯಿತಿ ಪರಸ್ಪರ ಸಾಮಾನ್ಯ ಸಾರಿಗೆ ಒಪ್ಪಂದದಡಿಯಲ್ಲಿ ಬರುತ್ತದೆ.
ಸದ್ಯಕ್ಕೆ ಹರಿಯಾಣದಲ್ಲಿ ನೋಂದಣಿಯಾಗಿ ಆರ್ಸಿಟಿಎ ಅಡಿಯಲ್ಲಿ ಪರವಾನಗಿ ಹೊಂದಿರುವ ಆಟೋ ಹಾಗೂ ಟ್ಯಾಕ್ಸಿಗಳು ಎನ್ಸಿಆರ್ ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಚಾಲನೆ ಮಾಡಲು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಈ ಕುರಿತು ಸರ್ಕಾರವು ಹೊರಡಿಸಿರುವ ಹೇಳಿಕೆಯಲ್ಲಿ, ಈ ನಿರ್ಧಾರವು ಹರಿಯಾಣ ಹೊರತುಪಡಿಸಿ ಎನ್ಸಿಆರ್ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುವ ಟ್ಯಾಕ್ಸಿ, ಆಟೋಗಳಿಗೆ ಒಂದೇ ರೀತಿಯ ಮೋಟಾರು ವಾಹನ ತೆರಿಗೆಯಲ್ಲಿ ವಿನಾಯಿತಿ ನೀಡಲಿದೆ ಎಂದು ಹೇಳಿದೆ.
ಇನ್ನು ಮುಂದೆ ಎನ್ಸಿಆರ್ ವಾಹನಗಳಿಗೆ ಹರಿಯಾಣದಲ್ಲಿ ಯಾವುದೇ ತೆರಿಗೆ ವಿಧಿಸುವುದಿಲ್ಲ. ಇದು ಸಂಚಾರ ದಟ್ಟಣೆಯನ್ನು ನಿವಾರಿಸುವುದಲ್ಲದೆ, ಗ್ರಾಹಕರ ಮೇಲೆ ಉಂಟಾಗುವ ಭಾರವನ್ನು ಕಡಿಮೆ ಮಾಡಿ, ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುತ್ತದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ವಿನಾಯಿತಿ ನೀಡಲಾಗುತ್ತಿದೆಯಾದರೂ ಸಾರ್ವಜನಿಕ ಸಾರಿಗೆಯನ್ನು ಸುಧಾರಿಸಲು ಸಹ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕರೋನಾ ಅವಧಿಯಲ್ಲಿ ಸಣ್ಣ ವಾಹನಗಳು ಭಾರಿ ಪ್ರಮಾಣದ ನಷ್ಟವನ್ನು ಅನುಭವಿಸಿವೆ.
ಈ ಪರಿಸ್ಥಿತಿಯಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ದೆಹಲಿ ಎನ್ಸಿಆರ್ ಬಗ್ಗೆ ಹೇಳುವುದಾದರೆ, ದೆಹಲಿಯ ಬಹುತೇಕ ಪ್ರದೇಶಗಳಲ್ಲಿ ಮೆಟ್ರೋ ಸಂಚಾರವನ್ನು ಪುನರಾರಂಭಿಸಲಾಗಿದೆ. ಮೆಟ್ರೋ ರೈಲು ದೆಹಲಿ-ಎನ್ಸಿಆರ್ ಪ್ರದೇಶದಲ್ಲಿಯೂ ಕಾರ್ಯನಿರ್ವಹಿಸುತ್ತದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಇತ್ತೀಚೆಗೆ ಸುಪ್ರೀಂ ಕೋರ್ಟ್ ದೇಶಾದ್ಯಂತ ಎಲೆಕ್ಟ್ರಿಕ್ ರಿಕ್ಷಾಗಳ ನೋಂದಣಿಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್,ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ರಿಕ್ಷಾಗಳನ್ನು ನೋಂದಾಯಿಸುವುದನ್ನು ನಿಷೇಧಿಸಿದೆ.