Just In
- 1 hr ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 2 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 2 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 2 hrs ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ಸಂಕಷ್ಟ: ಕೇಂದ್ರಕ್ಕೆ ರೂ.6.50 ಕೋಟಿ ದೇಣಿಗೆ ನೀಡಿದ ಹೋಂಡಾ ಫೌಂಡೇಶನ್
ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಹರಸಾಹಸ ಪಡುತ್ತಿದ್ದು, ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿವೆ.
ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.
ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳದಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಸರ್ಕಾರಗಳ ಪ್ರಯತ್ನಕ್ಕೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಸಹಕಾರ ನೀಡುತ್ತಿವೆ.
ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಯು ಸಾಧ್ಯವಿರುವ ಕಡೆಗಳಲ್ಲಿ ಸರ್ಕಾರದ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಗ್ರೂಪ್ ಕೂಡಾ ತನ್ನ ಹೋಂಡಾ ಫೌಂಡೇಶನ್ ಮೂಲಕ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಹಣಾಕಾಸು ನೆರವು ನೀಡಿದೆ.
2020ರ ಏಪ್ರಿಲ್ ಅವಧಿಯಲ್ಲಿನ ಕೋವಿಡ್ ಹೆಚ್ಚಳ ಸಂದರ್ಭದಲ್ಲೂ ಬರೋಬ್ಬರಿ ರೂ.10 ಕೋಟಿ ದೇಣಿಗೆ ನೀಡಿದ್ದ ಹೋಂಡಾ ಗ್ರೂಪ್ ಕಂಪನಿಯು ಇದೀಗ 2ನೇ ಅಲೆಯ ಕೋವಿಡ್ ನಿಯಂತ್ರಣಕ್ಕಾಗಿ ರೂ. 6.50 ಕೋಟಿ ದೇಣಿಗೆ ಘೋಷಣೆ ಮಾಡಿದ್ದು, ದೇಣಿಗೆ ಹಣವನ್ನು ಪಿಎಂ ಕೇರ್ಸ್ ಫಂಡ್(ಪ್ರಧಾನ ಮಂತ್ರಿ ಪರಿಹಾರ ನಿಧಿ)ಗೆ ನೀಡಲಾಗಿದೆ.
ಇನ್ನು ಹೋಂಡಾ ಮೋಟಾರ್ಸೈಕಲ್ ಅಂಡ್ ಸ್ಕೂಟರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಹೆಚ್ಎಂಎಸ್ಐ) ಮತ್ತು ಹೋಂಡಾ ಕಾರ್ಸ್ ಇಂಡಿಯಾ ತನ್ನ ನಾಲ್ಕು ಘಟಕಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ 15 ದಿನಗಳ ಕಾಲ ಉತ್ಪಾದನೆಯನ್ನು ಬಂದ್ ಮಾಡಿದ್ದು, ಹರಿಯಾಣದ ಮನೇಸರ್, ರಾಜಸ್ಥಾನದ ತಪುಕರ್, ಕರ್ನಾಟಕದ ನರಸಾಪುರ ಹಾಗೂ ಗುಜರಾತ್'ನ ವಿಠಾಪುರಗಳಲ್ಲಿನ ಘಟಕಗಳಲ್ಲಿನ ಉತ್ಪಾದನೆ ಬಂದ್ ಮಾಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಉತ್ಪಾದನೆಯನ್ನು ಬಂದ್ ಮಾಡಿದರೂ ಕೂಡಾ ಗ್ರಾಹಕರ ಸೇವೆಗಳಲ್ಲಿ ಯಾವುದೇ ತೊಂದರೆ ಆಗದಂತೆ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಂಡಿರುವುದಾಗಿ ತನ್ನ ಗ್ರಾಹಕರಿಗೆ ಭರವಸೆ ನೀಡಿರುವ ಹೋಂಡಾ ಕಂಪನಿಯು ವಾಹನ ಮಾರಾಟ ಮತ್ತು ಗ್ರಾಹಕರಿಗೆ ಸೇವೆಗಳಿಗೆ ಆನ್ಲೈನ್ ಪ್ಲ್ಯಾಟ್ಫಾರ್ಮ್ ತೆರೆದಿದೆ.
ಅಗತ್ಯವಿದ್ದಲ್ಲಿ ಗ್ರಾಹಕರ ಮನೆ ಬಾಗಿಲುಗಳಿಗೆ ಸೇವೆ ಒದಗಿಸುತ್ತಿರುವ ಹೋಂಡಾ ಕಂಪನಿಯು ಸುರಕ್ಷಾ ಮಾರ್ಗಸೂಚಿ ಪಾಲಿಸುತ್ತಿದ್ದು, ಹೊಸ ವಾಹನ ಖರೀದಿ ಪ್ರಕ್ರಿಯೆಯನ್ನು ಯಾವುದೇ ರೀತಿಯಲ್ಲಿ ಸ್ಥಗಿತಗೊಳಿಸಿಲ್ಲ. ವಾಹನ ಖರೀದಿ ಪ್ರಕ್ರಿಯೆ ಎಂದಿನಂತೆ ಮುಂದುವರೆದಿದ್ದು, ಪರಿಸ್ಥಿತಿಗೆ ಅನುಗುಣವಾಗಿ ವಾಹನ ವಿತರಣೆ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿದೆ.
MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್
ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನಕ್ಕೆ ಅಡಚಣೆ ಎದುರಾಗುತ್ತಿದ್ದು, ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್ಲೈನ್ ಪ್ಲ್ಯಾಟ್ಫಾರ್ಮ್ಗಳು ಸಾಕಷ್ಟು ಬಳಕೆಯಾಗುತ್ತಿವೆ.