Just In
- 8 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 9 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 11 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 11 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲೆಕ್ಟ್ರಿಕ್ ವಾಹನ ನೀತಿಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾದ ರಾಜ್ಯ ಸರ್ಕಾರ
ರಾಜ್ಯಕ್ಕೆ ಎಲೆಕ್ಟ್ರಿಕ್ ವಾಹನ ತಯಾರಿಸುವ ಕಂಪನಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಕರ್ನಾಟಕ ಸರ್ಕಾರವು ತನ್ನ ಎಲೆಕ್ಟ್ರಿಕ್ ವಾಹನ ನೀತಿಯನ್ನು ಬದಲಿಸಲಿದೆ. ಸ್ಥಿರ ಆಸ್ತಿಗಳ ಮೌಲ್ಯದ ಮೇಲೆ 15%ನಷ್ಟು ಕ್ಯಾಪಿಟಲ್ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರವು ನಿರ್ಧರಿಸಿದೆ.
ಈ ಸಬ್ಸಿಡಿಯು ಗರಿಷ್ಠ 50 ಎಕರೆ ಭೂಮಿಯನ್ನು ಒಳಗೊಂಡಿದೆ. ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು 2017ರಲ್ಲಿ ಜಾರಿಗೊಳಿಸಲಾಯಿತು. ಆದರೆ ಹೆಚ್ಚು ಹೂಡಿಕೆದಾರರನ್ನು ಆಕರ್ಷಿಸಲು ಈ ನೀತಿಯನ್ನು ಬದಲಿಸಬೇಕಾಗಿದೆ.
ಉದ್ಯಮಿಗಳನ್ನು ಆಕರ್ಷಿಸಲು ವಿವಿಧ ರಾಜ್ಯಗಳ ನಡುವೆ ಪೈಪೋಟಿ ಎದುರಾಗಿದೆ. ಹೆಚ್ಚಿನ ವಿನಾಯಿತಿ ದೊರೆಯುತ್ತಿರುವುದರಿಂದ ಕೆಲವು ಕಂಪನಿಗಳು ಬೇರೆ ರಾಜ್ಯಗಳಿಗೆ ಸ್ಥಳಾಂತರಗೊಂಡಿವೆ.
MOST READ: ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು
ಓಲಾ ಕ್ಯಾಬ್ ಕಂಪನಿಯು ಬೆಂಗಳೂರಿನಲ್ಲಿ ನೆಲೆಯೂರಿದ್ದರೂ, ರೂ.2,400 ಕೋಟಿ ವೆಚ್ಚದಲ್ಲಿ ತನ್ನ ಹೊಸ ಉತ್ಪಾದನಾ ಘಟಕವನ್ನು ತಮಿಳುನಾಡಿನ ಹೊಸೂರಿನಲ್ಲಿ ಸ್ಥಾಪಿಸುತ್ತಿದೆ ಎಂದು ಬೊಮ್ಮಾಯಿ ಹೇಳಿದರು.
ಎಲೆಕ್ಟ್ರಿಕ್ ಕಂಪನಿಗಳನ್ನು ಆಕರ್ಷಿಸಲು ನಾವು ನಮ್ಮ ನೀತಿಗಳನ್ನು ಬದಲಿಸಬೇಕು ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಈಗ ಕರ್ನಾಟಕ ಸರ್ಕಾರವು ಸಹ ತಮಿಳುನಾಡಿನಂತೆಯೇ ರಿಯಾಯಿತಿ ನೀಡುವ ನೀತಿಯ ಬಗ್ಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
MOST READ: ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್
ಕಂಪನಿಗಳ ವಹಿವಾಟಿನ ಮೇಲೆ 1% ಉತ್ಪಾದನಾ ಸಬ್ಸಿಡಿಯನ್ನು ನೀಡುವ ಮೂಲಕ ಉತ್ತೇಜಿನ ನೀಡುವಂತಹ ಮತ್ತೊಂದು ಪ್ರಮುಖ ನಿರ್ಧಾರವನ್ನು ಕರ್ನಾಟಕದ ಸಚಿವ ಸಂಪುಟ ಸಭೆಯು ತೆಗೆದುಕೊಂಡಿದೆ.
ಈ ಸಬ್ಸಿಡಿಯನ್ನು ಮೆಗಾ, ಅಲ್ಟ್ರಾ, ಸೂಪರ್ ಮೆಗಾ ಎಲೆಕ್ಟ್ರಿಕ್ ವೆಹಿಕಲ್ ಅಸೆಂಬ್ಲಿ ಹಾಗೂ ಉತ್ಪಾದನಾ ಘಟಕಗಳಿಗೆ ಕಾರ್ಯಾಚರಣೆಯ ಮೊದಲ ವರ್ಷದಿಂದ ಐದು ವರ್ಷಗಳ ಅವಧಿಗೆ ನೀಡಲಾಗುವುದು.
MOST READ: ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು
ಹೊಸ ನೀತಿಯಡಿಯಲ್ಲಿಎಲೆಕ್ಟ್ರಿಕ್ ವಾಹನ ಉತ್ಪಾದನಾ ಉದ್ಯಮಗಳಿಗೆ ಇವಿ ಲಿಥಿಯಂ ಐಯಾನ್ ಬ್ಯಾಟರಿ ಪೂರೈಕೆದಾರರು ಸೇರಿದಂತೆ ಇವಿ ಘಟಕಗಳನ್ನು ವ್ಯಾಖ್ಯಾನಿಸಲು, ಸರ್ಟಿಫೈ ಮಾಡಲು ತಾಂತ್ರಿಕ ಸಮಿತಿಯನ್ನು ರಚಿಸಲಾಗುವುದು.
ಮತ್ತೊಂದು ಪ್ರಮುಖ ತಿದ್ದುಪಡಿಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ನೀಡುವ ತರಬೇತಿಯನ್ನು ಉತ್ತೇಜಿಸಲು ತರಬೇತಿ ಪಡೆಯುವವರ ವೆಚ್ಚದ 50%ನಷ್ಟು ಭರಿಸಲು ಕರ್ನಾಟಕ ಸರ್ಕಾರವು ನಿರ್ಧರಿಸಿದೆ.
MOST READ: ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ
ಅಂದರೆ ಪ್ರತಿ ತಿಂಗಳು ಗರಿಷ್ಠ ರೂ.10,000 ಪಾವತಿಸಲಿದೆ. ಬೆಂಗಳೂರಿನ ಬಿಡದಿ ಬಳಿ ಎಲೆಕ್ಟ್ರಿಕ್ ವೆಹಿಕಲ್ ಪಾರ್ಕ್ ಸ್ಥಾಪಿಸಲು ಕರ್ನಾಟಕ ಸರ್ಕಾರವು ಸುಮಾರು 400 ಎಕರೆ ಭೂಮಿಯನ್ನು ಮೀಸಲಿಟ್ಟಿದೆ.