Just In
- 6 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 8 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 8 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 9 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್
ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಕರ್ನಾಟಕ ಸರ್ಕಾರವು ಕೂಡಾ ಹಲವಾರು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತಂದಿದ್ದು, ನಿಗದಿತ ಅವಧಿ ನಂತರ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಬ್ರೇಕ್ ಹಾಕಲು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಅಗತ್ಯ ಸೇವೆಗಳಿಗಾಗಿ ಬಳಕೆಯಾಗುವ ವಾಹನ ಸಂಚಾರವನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಕಟ್ಟುನಿಟ್ಟಾಗಿ ಬಂದ್ ಮಾಡಲಾಗಿದ್ದು, ಕಠಿಣ ಕ್ರಮ ಜಾರಿ ನಡುವೆಯೂ ಖಾಸಗಿ ವಾಹನ ಮಾಲೀಕರು ನಿಯಮ ಉಲ್ಲಂಘಿಸುತ್ತಿದ್ದಾರೆ.
ಅಗತ್ಯ ಸೇವೆಗಳನ್ನು ಒದಗಿಸುವ ವಾಹನಗಳಿಗೆ, ಸರಕು ಸಾಗಣೆ ವಾಹನಗಳಿಗೆ ಮತ್ತು ಆರೋಗ್ಯ ಸೇವೆಯ ವಾಹನಗಳಿಗೆ ಮಾತ್ರವೇ ಅವಕಾಶ ನೀಡಿದ್ದರೂ ಸಾರ್ವಜನಿಕರು ಮಾತ್ರ ಅನಗತ್ಯವಾಗಿ ವಾಹನಗಳನ್ನು ರಸ್ತೆಗಿಳಿಸುತ್ತಿದ್ದಾರೆ.
ಕಠಿಣ ಕಾನೂನು ಕ್ರಮದ ಮುನ್ನೆಚ್ಚರಿಕೆಯ ನಡುವೆಯೂ ರಾಜ್ಯಾದ್ಯಂತ ದಿನಂಪ್ರತಿ ಸಾವಿರಾರು ವಾಹನಗಳನ್ನು ಪೊಲೀಸ್ ಇಲಾಖೆಯು ಜಪ್ತಿ ಮಾಡುತ್ತಿದ್ದು, ಜಪ್ತಿ ಮಾಡಿದ ವಾಹನಗಳ ಮಾಲೀಕರ ವಿರುದ್ದ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.
ಲಾಕ್ಡೌನ್ ಉಲ್ಲಂಘನೆ ಮಾಡಿದ ವಾಹನಗಳ ಮೇಲೆ ದಾಖಲಿಸಲಾಗುತ್ತಿರುವ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯ ಪ್ರಕರಣಗಳು ಸಾಮಾನ್ಯ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಕ್ಕಿಂತಲೂ ಹೆಚ್ಚು ಕಠಿಣವಾಗಿವೆ.
ಸಾಮಾನ್ಯ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಸ್ಥಳದಲ್ಲೇ ದಂಡ ಪಾವತಿಸಿ ನಿಯಮ ಉಲ್ಲಂಘನೆ ಪ್ರಕರಣ ಹಿಂಪಡೆಯಬಹುದಾಗಿದ್ದು, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆಯ ಪ್ರಕರಣಗಳಿಗೆ ಕಡ್ಡಾಯವಾಗಿ ಕೋರ್ಟ್ನಲ್ಲೇ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬೇಕು.
ಇದಕ್ಕಾಗಿ ನೀವು ವಕೀಲರನ್ನು ನೇಮಕ ಮಾಡಿಕೊಂಡ ಕಾನೂನು ಹೋರಾಟ ಮಾಡಬೇಕಾಗುವುದಲ್ಲದೆ ನಿರ್ಬಂಧದ ಅವಧಿಯಲ್ಲಿ ವಾಹನವನ್ನು ಬಳಕೆ ಮಾಡಿದ್ದಕ್ಕೆ ಸೂಕ್ತ ಕಾರಣ ಮತ್ತು ದಾಖಲೆಗಳನ್ನು ಹಾಜರುಪಡಿಸಬೇಕು.
ಒಂದು ವೇಳೆ ಕೋರ್ಟ್ ವಿಚಾರಣೆಯಲ್ಲಿ ಸೂಕ್ತ ದಾಖಲೆ ಮತ್ತು ಕಾರಣವನ್ನು ನೀಡುವಲ್ಲಿ ವಿಫಲವಾದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಅಡಿ ಕನಿಷ್ಠ 7 ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
MOST READ: ಕರೋನಾ ಸೋಂಕಿತರಿಗಾಗಿ ಕಾರುಗಳನ್ನು ಮೊಬೈಲ್ ಆಸ್ಪತ್ರೆಗಳಾಗಿ ಬದಲಿಸಿದ ಯುವಕರು
ಇಷ್ಟು ದಿನ ಕಾಲ ಲಾಕ್ಡೌನ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ವಾಹನ ಮಾಲೀಕರ ವಿರುದ್ದ ಕೇವಲ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿ ದಂಡ ವಸೂಲಿ ಮಾಡಿ ಕೈಬಿಡುತ್ತಿದ್ದ ಪೊಲೀಸರು ಇದೀಗ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.
ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ನಿಯಮ ಉಲ್ಲಂಘಿಸುವ ವಾಹನ ಸವಾರರು ಸೆಷನ್ಸ್ ಕೋರ್ಟ್ ಮಟ್ಟದಲ್ಲಿ ಕಾನೂನು ಹೋರಾಟ ಮಾಡಬೇಕಲ್ಲದೆ ಪ್ರಕರಣ ಸಾಬೀತಾದರೆ ಜೈಲು ಶಿಕ್ಷೆ ತಪ್ಪಿದ್ದಲ್ಲ.
MOST READ: ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕಿನಲ್ಲಿ ದೇಶ ಸುತ್ತುತ್ತಿದ್ದ ವೃದ್ಧ ದಂಪತಿಯ ಬಲಿ ಪಡೆದ ಕರೋನಾ ವೈರಸ್
ಹಾಗೆಯೇ ಕೋರ್ಟ್ ವಿಚಾರಣೆ ಅವಧಿಯಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ವಾಹನವನ್ನು ಮರುಮಾರಾಟ ಮಾಡುವಂತಿಲ್ಲ, ಮಾಡಿಫೈಗೊಳಿಸುವಂತಿಲ್ಲ ಇನ್ನೊಬ್ಬರ ಹೆಸರಿಗೆ ವರ್ಗಾವಣೆ ಮಾಡುವಂತಿಲ್ಲ ಎಂಬ ನಿಯಮಗಳಿದ್ದು, ಪ್ರಕರಣದ ವಿಚಾರಣೆಗೆ ಕನಿಷ್ಠ 2 ವರ್ಷ ಕಾಲಾವಕಾಶ ತೆಗೆದುಕೊಳ್ಳಬಹುದಾಗಿದೆ.
ಬೆಂಗಳೂರು ಮತ್ತು ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆ ಅಡಿಯಲ್ಲೇ ಸಾವಿರಾರು ಪ್ರಕರಣಗಳು ದಾಖಲಾಗಿದ್ದು, ವಾಹನ ಸವಾರರ ಮೇಲಿನ ಹಲ್ಲೆ ಪ್ರಕರಣಗಳಿಗೆ ಬ್ರೇಕ್ ಹಾಕಿದ ನಂತರ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತಿದೆ.
ಇದರಿಂದ ಅಗತ್ಯ ಸಂದರ್ಭಗಳನ್ನು ಹೊರತುಪಡಿಸಿ ನಿರ್ಬಂಧದ ವೇಳೆ ಅನಗತ್ಯವಾಗಿ ವಾಹನಗಳನ್ನು ಹೊರೆಗೆ ತೆಗೆದಲ್ಲಿ ಕಠಿಣ ಕ್ರಮಗಳನ್ನು ಎದುರಿಸಬೇಕಲ್ಲದೆ ದುಬಾರಿ ಮೊತ್ತದ ದಂಡದ ಜೊತೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗಬಹುದು.
ಇನ್ನು 2020ರಲ್ಲಿಯೂ ಪೊಲೀಸರು ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೊರ ಬಂದವರಿಂದ ಸಾವಿರಾರು ವಾಹನಗಳನ್ನು ವಶಕ್ಕೆ ಪಡೆದಿದ್ದರು. ವಾಹನಗಳ ದಾಖಲೆಗಳನ್ನು ಪರಿಶೀಲಿಸಿದ ನಂತರ ವಾಹನಗಳನ್ನು ಹಿಂದಿರುಗಿಸಲಾಗಿತ್ತು.
2020ರಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್'ನಲ್ಲಿ ಜನರ ಓಡಾಟದ ಮೇಲೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿತ್ತು. ಆದರೆ ಈ ಬಾರಿ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದರೂ ನಿಯಮ ಮೀರಿ ಹೊರಹೋಗುವ ವಾಹನ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.