Just In
- 14 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 14 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 15 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 16 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನಕ್ಕೆ ಚಾಲನೆ ನೀಡಿದ ಆನಂದ್ ಮಹೀಂದ್ರಾ
ಮಹೀಂದ್ರಾ ಅಂಡ್ ಮಹೀಂದ್ರಾ ದೇಶದಲ್ಲಿರುವ ಜನಪ್ರಿಯ ಕಾರು ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ದೇಶದಲ್ಲಿ ಕರೋನಾ ವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಪನಿಯು ಸರ್ಕಾರ ಹಾಗೂ ಜನರಿಗೆ ನೆರವಾಗಲು ಹೊಸ ಅಭಿಯಾನವನ್ನು ಆರಂಭಿಸಿದೆ.
ಈ ಅಭಿಯಾನದಲ್ಲಿ ಕಂಪನಿಯು ತನ್ನ ಬೊಲೆರೊ ಪಿಕಪ್ ಟ್ರಕ್ ಮೂಲಕ ಮಹಾರಾಷ್ಟ್ರದಾದ್ಯಂತ ಆಕ್ಸಿಜನ್ ಸಿಲಿಂಡರ್ಗಳನ್ನು ಸರಬರಾಜು ಮಾಡಲಿದೆ. ಈ ಬಗ್ಗೆ ಮಾತನಾಡಿರುವ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ, ಕಂಪನಿಯು ತನ್ನ 70 ಬೊಲೆರೊ ಟ್ರಕ್ಗಳ ಮೂಲಕ ಆಕ್ಸಿಜನ್ ಸಿಲಿಂಡರ್ಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪಿಸಲಿದೆ.
ಇದೇ ವೇಳೆ ಮುಂದಿನ 48 ಗಂಟೆಗಳಲ್ಲಿ ಮುಂಬೈ, ಥಾಣೆ, ನಾಸಿಕ್ ಹಾಗೂ ನಾಗ್ಪುರದಲ್ಲಿ ಈ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದರು. ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಈ ಅಭಿಯಾನಕ್ಕೆ ಆಕ್ಸಿಜನ್ ಆನ್ ವ್ಹೀಲ್ಸ್ ಎಂಬ ಹೆಸರಿಡಲಾಗಿದೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಆಕ್ಸಿಜನ್ ಆನ್ ವ್ಹೀಲ್ಸ್ ಕಾರ್ಯ ವಿಧಾನ
ಈ ಅಭಿಯಾನವನ್ನು ಸರಾಗವಾಗಿ ನಡೆಸಲು ಕಂಪನಿಯು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದೆ. ಇದರ ಜೊತೆಗೆ ಕಂಪನಿಯು ಆಕ್ಸಿಜನ್ ಸಿಲಿಂಡರ್ಗಳನ್ನು ಇರಿಸಲು ಗೊಡಾನ್ ಅನ್ನು ಸಹ ಸಿದ್ಧಪಡಿಸಿದೆ.
ಹತ್ತಿರದಲ್ಲಿರುವ ಆಕ್ಸಿಜನ್ ಉತ್ಪಾದನಾ ಘಟಕದಲ್ಲಿ ಖಾಲಿ ಸಿಲಿಂಡರ್ಗಳನ್ನು ರೀಫಿಲ್ ಮಾಡಲಾಗುತ್ತದೆ. ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ದೇಶದ ಬಹುತೇಕ ಎಲ್ಲಾ ರಾಜ್ಯಗಳು ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿವೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಎಲ್ಲಾ ರಾಜ್ಯಗಳಿಗಿಂತ ಕೆಟ್ಟ ಪರಿಸ್ಥಿತಿಯನ್ನು ಮಹಾರಾಷ್ಟ್ರ ರಾಜ್ಯವು ಎದುರಿಸುತ್ತಿದೆ. ಮಹಾರಾಷ್ಟ್ರದಲ್ಲಿ ಇದುವರೆಗೂ ಒಟ್ಟು 46 ಲಕ್ಷಕ್ಕೂ ಹೆಚ್ಚು ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಸುಮಾರು 68 ಸಾವಿರ ಜನರು ಚಿಕಿತ್ಸೆಯ ಪಡೆಯುವ ಸಂದಭದಲ್ಲಿ ಮೃತ ಪಟ್ಟಿದ್ದಾರೆ.
ಇಂತಹ ಸನ್ನಿವೇಶದಲ್ಲಿ ಮಹೀಂದ್ರಾ ಕಂಪನಿಯು ಮಹಾರಾಷ್ಟ್ರದಲ್ಲಿ ಆಕ್ಸಿಜನ್ ಆನ್ ವ್ಹೀಲ್ಸ್ ಅಭಿಯಾನವನ್ನು ಆರಂಭಿಸಿದೆ. ಸದ್ಯಕ್ಕೆ ಈ ಅಭಿಯಾನವನ್ನು ಮಹಾರಾಷ್ಟ್ರದಲ್ಲಿ ಮಾತ್ರ ಆರಂಭಿಸಲಾಗಿದೆ ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.
MOSTREAD: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಶೀಘ್ರದಲ್ಲೇ ಈ ಅಭಿಯಾನವನ್ನು ದೇಶದ ಇತರ ರಾಜ್ಯಗಳಲ್ಲಿಯೂ ಆರಂಭಿಸಲಾಗುವುದು. ಈ ಅಭಿಯಾನದಲ್ಲಿ ನಾವು ನಮ್ಮ ವಿಶ್ವಾಸಾರ್ಹ ಸ್ಥಳೀಯ ವ್ಯಾಪಾರಿಗಳ ಸಹಾಯವನ್ನೂ ಪಡೆಯುತ್ತೇವೆ ಎಂದು ಅವರು ಹೇಳಿದರು.
ಈ ಮೂಲಕ ಸ್ಥಳೀಯ ಆಡಳಿತಕ್ಕೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತೇವೆ ಎಂದು ಆನಂದ್ ಮಹೀಂದ್ರಾ ತಿಳಿಸಿದರು. ಸದ್ಯಕ್ಕೆ ಮಹಾರಾಷ್ಟ್ರ ಹಾಗೂ ದೆಹಲಿಯ ಪರಿಸ್ಥಿತಿ ಗಂಭೀರವಾಗಿದೆ.