Just In
- 2 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 3 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 4 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 4 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Movies Bhagyalakshmi: ಕನ್ನಿಕಾ ಮೇಡಂ ಚಿನ್ನಾಭರಣ ಕದ್ದರಾ? ಆಕೆ ಅಹಂ ಇಳಿಸಲು ಮಾಡಿದ ಐಡಿಯಾ?
- News 140 ಕೋಟಿ ಜನ ನಿಮ್ಮನ್ನು ತಿರಸ್ಕರಿಸಿರುವುದರಲ್ಲಿ ಅಚ್ಚರಿ ಏನಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರಿಗಾಗಿ ವಿಶಿಷ್ಟ ಯೋಜನೆ ಘೋಷಿಸಿದ ಮಹೀಂದ್ರಾ
ಕರೋನಾ ವೈರಸ್ ಎರಡನೇ ಅಲೆ ಯುವಕರು, ವಯಸ್ಕರು ಸೇರಿದಂತೆ ಎಲ್ಲಾ ವಯಸ್ಸಿನವರಿಗೆ ಹರಡುತ್ತಿದೆ. ಈ ಮಹಾಮಾರಿ ವೈರಸ್'ಗೆ ಬಲಿಯಾಗುವವರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಈ ಪರಿಸ್ಥಿತಿಯಲ್ಲಿ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ರೈತರಿಗಾಗಿ ಹೊಸ ಯೋಜನೆಯನ್ನು ಘೋಷಿಸಿದೆ. ಕಳೆದ ಭಾನುವಾರ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ಹೊಸ ಟ್ರಾಕ್ಟರುಗಳನ್ನು ಖರೀದಿಸುವ ಗ್ರಾಹಕರಿಗೆ ಉಚಿತ ವಿಮಾ ಯೋಜನೆಯನ್ನು ನೀಡುವುದಾಗಿ ಕಂಪನಿ ತಿಳಿಸಿದೆ.
ಕರೋನಾ ವೈರಸ್ ಮೊದಲ ಅಲೆಯ ವೇಳೆ ಕಂಪನಿಯು ಈ ರೀತಿಯ ವಿಶೇಷ ಕಾರ್ಯಕ್ರಮವನ್ನು ಪರಿಚಯಿಸಿತ್ತು. ಈಗ ಮತ್ತೊಮ್ಮೆ ಈ ಯೋಜನೆಯನ್ನು ಪರಿಚಯಿಸಿದೆ. ಕರೋನಾ ವೈರಸ್'ನಿಂದ ಪರಿಸ್ಥಿತಿ ಹದಗೆಡುತ್ತಿರುವ ಸಂದರ್ಭದಲ್ಲಿ ಈ ಯೋಜನೆಯನ್ನು ಮತ್ತೆ ಪರಿಚಯಿಸಲಾಗಿದೆ.
MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು
ಕಂಪನಿಯು ಈ ವಿಮಾ ಯೋಜನೆಯನ್ನು ಎಂ ಪ್ರೊಟೆಕ್ಟ್ ಕೋವಿಡ್ ಪ್ಲಾನ್ ಹೆಸರಿನಲ್ಲಿ ಆರಂಭಿಸಿದೆ. ಈ ಯೋಜನೆಯ ಮೂಲಕ ರೈತರು ಸುಮಾರು ರೂ.1 ಲಕ್ಷಗಳವರೆಗೆ ಪ್ರಯೋಜನವನ್ನು ಪಡೆಯಬಹುದು.
ಮಹೀಂದ್ರಾ ಕಂಪನಿಯು ರೈತರು ಈ ಯೋಜನೆಯ ಮೂಲಕ ಈ ಸಂಕಷ್ಟದ ಸಂದರ್ಭದಲ್ಲಿ ಪ್ರಯೋಜನ ಪಡೆಯಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದೆ. ಈ ಯೋಜನೆ ರೈತರಿಗೆ ಮಾತ್ರವಲ್ಲದೆ ಅವರ ಕುಟುಂಬಕ್ಕೂ ನೆರವು ನೀಡಲಿದೆ ಎಂಬುದು ಗಮನಾರ್ಹ.
MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್
ಯಾವುದೇ ಕಾರಣದಿಂದ ಸಾಲಗಾರನು ಸತ್ತರೆ ಆತನ ವಾಹನದ ಮೇಲಿನ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ. ಕಂಪನಿಯು ಇದನ್ನು ಮಹೀಂದ್ರಾ ಕ್ರೆಡಿಟ್ ಸುರಕ್ಷಾ ಯೋಜನೆಯ ಮೂಲಕ ಮಾಡಲು ನಿರ್ಧರಿಸಿದೆ.
ಕರೋನಾ ವೈರಸ್ ವೇಗವಾಗಿ ಹರಡುತ್ತಿರುವುದು ವಾಹನ ಉತ್ಪಾದನೆ ಹಾಗೂ ಮಾರಾಟದ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಆಟೋ ಮೊಬೈಲ್ ಕಂಪನಿಗಳು ನೆರವಿನ ಹಸ್ತ ಚಾಚುತ್ತಿವೆ.
MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು
ಆಟೋ ಮೊಬೈಲ್ ಕಂಪನಿಗಳು ಧನಸಹಾಯ, ವೈದ್ಯಕೀಯ ಸಲಕರಣೆ ಒದಗಿಸುವುದು ಹಾಗೂ ಆಕ್ಸಿಜನ್ ಉತ್ಪಾದನೆಯ ಮೂಲಕ ತಮ್ಮದೇ ಆದ ರೀತಿಯಲ್ಲಿ ನೆರವಾಗುತ್ತಿವೆ. ಇದರ ಜೊತೆಗೆ ಹಲವು ವಾಹನ ತಯಾರಕ ಕಂಪನಿಗಳು ಸರ್ಕಾರದ ಜೊತೆ ಕೈ ಜೋಡಿಸಿವೆ.