Just In
- 6 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 7 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 8 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 9 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
100 ಆಕ್ಸಿಜನ್ ಕಾನ್ಸನ್ಟ್ರೇಟರ್, 3 ಆ್ಯಂಬುಲೆನ್ಸ್ ದೇಣಿಗೆ ನೀಡಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ಕೋವಿಡ್ ವಿರುದ್ದದ ಹೋರಾಟದಲ್ಲಿ ಸರ್ಕಾರಕ್ಕೆ ವಿವಿಧ ಮಾದರಿಯ ನೆರವು ನೀಡುವ ಮೂಲಕ ವೈರಸ್ ತಗ್ಗಿಸುವಲ್ಲಿ ಸಾಕಷ್ಟು ಸಹಕಾರಿಯಾಗಿದ್ದು, ಇತ್ತೀಚೆಗೆ ಕಂಪನಿಯು ಆದ್ಯತೆಯ ಮೇರೆಗೆ ಉತ್ತಾರಾಖಂಡ್ ಸರ್ಕಾರಕ್ಕೆ ವಿಶೇಷ ನೆರವು ಘೋಷಣೆ ಮಾಡಿದೆ.
ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಆಟೋ ಕಂಪನಿಗಳ ಹೊಸ ಯೋಜನೆಗಳ ಪರಿಣಾಮ ಸೋಂಕು ನಿಯಂತ್ರಿಸಲು ಸಾಕಷ್ಟು ಸಹಕಾರಿಯಾಗಿದೆ.
ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ನೊಂದಿಗೆ ಇನ್ನು ಕೂಡಾ ಲೌಕ್ಡೌನ್ ಮುಂದುವರಿಸಲಾಗುತ್ತಿದೆ.
ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಆಟೋ ಕಂಪನಿಗಳು ಆರ್ಥಿಕ ಸಂಕಷ್ಟದ ನಡುವೆಯೂ ಸರ್ಕಾರದ ಪ್ರಯತ್ನಗಳಿಗೆ ಕೈಜೋಡಿಸಿವೆ.
ವೈರಸ್ ಹರಡುವಿಕೆ ತೀವ್ರವಾಗಿರುವುದರಿಂದ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಮಹೀಂದ್ರಾ ಸೇರಿದಂತೆ ಹಲವು ವಾಹನ ತಯಾರಿಕಾ ಕಂಪನಿಗಳು ವೈದ್ಯಕೀಯ ಸೇವೆಗಳಿಗೆ ಅಗತ್ಯವಾಗಿರುವ ಆಕ್ಸಿಜನ್ ಉತ್ಪಾದನೆ, ಆಕ್ಸಿಜನ್ ಕಾನ್ಸನ್ಟ್ರೇಟರ್ ಮತ್ತು ಅಗತ್ಯವಿರುವ ಕಡೆಗಳಲ್ಲಿ ಕೋವಿಡ್ ಕೇರ್ ನಿರ್ಮಾಣ ಮಾಡಿವೆ.
ಮಹೀಂದ್ರಾ ಕಂಪನಿಯು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಾಕಷ್ಟು ಹಣಾಕಾಸು ನೆರವು ನೀಡಿದ್ದು, ಇದೀಗ ಆದ್ಯತೆಯ ಮೇರೆ ಉತ್ತರಾಖಂಡ್ನಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಕೀಯ ಸೌಲಭ್ಯ ಹೆಚ್ಚಿಸಲು 100 ಆಕ್ಸಿಜನ್ ಕಾನ್ಸನ್ಟ್ರೇಟರ್ ಮತ್ತು 3 ಆ್ಯಂಬುಲೆನ್ಸ್ಗಳನ್ನು ದೇಣಿಗೆ ನೀಡಿದೆ.
ಜೊತೆಗೆ ದೇಶದ ಪ್ರಮುಖ ನಗರಗಳಲ್ಲಿ ಆಕ್ಸಿಜನ್ ಕೊರತೆ ನಿಗಿಸಲು ಆಕ್ಸಿಜನ್ ಆನ್ ವೀಲ್ಹ್ ಕಾರ್ಯಕ್ರಮವು ಕಂಪನಿಯ ಮಹತ್ವದ ಯೋಜನೆಗಾಗಿ ಗುರುತಿಸಿಕೊಂಡಿದ್ದು, ಕೋವಿಡ್ ಹೆಚ್ಚಿರುವ ಉತ್ತರಾಖಾಂಡ್ನಲ್ಲಿ ವೈದ್ಯಕೀಯ ಸೇವೆಗಳ ಕೊರತೆ ನಿಗಿಸಲು ಮಹೀಂದ್ರಾ ಕಂಪನಿಯು ಆಕ್ಸಿಜನ್ ಕಾನ್ಸನ್ಟ್ರೇಟರ್ ಮತ್ತು ಆ್ಯಂಬುಲೆನ್ಸ್ಗಳನ್ನು ದೇಣಿಗೆ ನೀಡಿದೆ.
ಆಕ್ಸಿಜನ್ ಕಾನ್ಸನ್ಟ್ರೇಟರ್ಗಳು ಸದ್ಯ ಮಾರುಕಟ್ಟೆಯಲ್ಲಿ ವಿವಿಧ ಬ್ರಾಂಡ್ ಮತ್ತು ಗುಣಮಟ್ಟ ಆಧರಿಸಿದ ರೂ.70 ಸಾವಿರದಿಂದ ರೂ.1 ಲಕ್ಷದ ತನಕ ಮಾರಾಟಗೊಳ್ಳುತ್ತಿದ್ದು, ಆ್ಯಂಬುಲೆನ್ಸ್ಗಳನ್ನು ಮಹೀಂದ್ರಾ ಕಂಪನಿಯು ತನ್ನದೇ ನಿರ್ಮಾಣದ ಸೂಪ್ರೊ ವ್ಯಾನ್ಗಳ ಆ್ಯಂಬುಲೆನ್ಸ್ ಎಡಿಷನ್ಗಳನ್ನೇ ದೇಣಿಯಾಗಿ ನೀಡಿದೆ.
ಇನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್) ನೀತಿ ಅಡಿಯಲ್ಲಿ ಮಹೀಂದ್ರಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಮಟ್ಟದ ಹಣಕಾಸಿನ ನೆರವು ನೀಡಿವೆ.
ಕೋವಿಡ್ ನಿಯಂತ್ರಣಕ್ಕಾಗಿ ಪ್ರಮುಖ ವಾಹನ ಕಂಪನಿಗಳು ಹಣಕಾಸು ನೆರವು ನೀಡಿದ್ದಲ್ಲಿ ಇನ್ನು ಕೆಲವು ವಾಹನ ಕಂಪನಿಗಳು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲು ವೆಂಟಿಲೇಟರ್ ಉತ್ಪಾದನೆ ಮತ್ತು ಆಕ್ಸಿಜನ್ ಉತ್ಪಾದನೆಗೆ ಸಹಕಾರಿಯಾಗುತ್ತಿರುವುದಲ್ಲದೆ ಕೋವಿಡ್ ಕೇರ್ಗಳಿಗೆ ಚಾಲನೆ ನೀಡಿದೆ.