Just In
- 10 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 11 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 13 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಸೋಂಕಿತರಿಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು ಮುಂದಾದ ಮಾರುತಿ ಸುಜುಕಿ
ಭಾರತದಲ್ಲಿ ಕರೋನಾ ವೈರಸ್ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಭಾರತದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 20 ಲಕ್ಷದ ಗಡಿ ದಾಟಿದೆ.
ಈಗಾಗಲೇ ಈ ಮಹಾಮಾರಿ ವೈರಸ್'ಗೆ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಪ್ರತಿ ದಿನ ಸುಮಾರು 3 ಲಕ್ಷ ಹೊಸ ಪ್ರಕರಣಗಳು ದಾಖಲಾಗುತ್ತಿರುವುದರಿಂದ ದೇಶಾದ್ಯಂತ ವೈದ್ಯಕೀಯ ಮೂಲ ಸೌಲಭ್ಯಗಳ ಕೊರತೆ ಎದುರಾಗಿದೆ. ಕರೋನಾ ವೈರಸ್ ಎರಡನೇ ಅಲೆಯಲ್ಲಿ ಸೋಂಕಿತರು ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆ.
ಸಕಾಲಕ್ಕೆ ಆಕ್ಸಿಜನ್ ದೊರಕದ ಕಾರಣ ಪ್ರತಿ ದಿನ ಸಹಸ್ರಾರು ಜನರು ಸಾವನ್ನಪ್ಪುತ್ತಿದ್ದಾರೆ. ದೇಶದಲ್ಲಿರುವ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮದೇ ಆದ ರೀತಿಯಲ್ಲಿ ಸೋಂಕಿತರಿಗೆ ನೆರವಾಗುತ್ತಿವೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಈಗ ದೇಶದ ಅಗ್ರ ಗಣ್ಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಜೈಡಸ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಗುಜರಾತ್ನ ಅಹಮದಾಬಾದ್ನ ಸೀತಾಪುರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತೆರೆಯುವುದಾಗಿ ಪ್ರಕಟಿಸಿದೆ.
ಈ ಆಸ್ಪತ್ರೆಯ ನಿರ್ಮಾಣಕ್ಕೆ ರೂ.126 ಕೋಟಿ ವೆಚ್ಚವಾಗಲಿದೆ. ಈ ಪೂರ್ತಿ ಹಣವನ್ನು ಮಾರುತಿ ಸುಜುಕಿ ಪ್ರತಿಷ್ಠಾನದಿಂದ ಭರಿಸಲಾಗುತ್ತದೆ. ಈ ಆಸ್ಪತ್ರೆಯನ್ನು ಜೈಡಸ್ ಗ್ರೂಪ್ನ ಸಿಎಸ್ಆರ್ ಅಂಗವಾದ ರಾಮನ್ಭಾಯ್ ಫೌಂಡೇಶನ್ ನಿರ್ವಹಿಸಲಿದೆ ಎಂದು ಮಾರುತಿ ಸುಜುಕಿ ಕಂಪನಿ ತಿಳಿಸಿದೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ಕೋವಿಡ್ 19 ರೋಗಿಗಳನ್ನು ಉಪಚರಿಸಲು ಹಾಗೂ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಈ ಬಗ್ಗೆ ಮಾತನಾಡಿರುವ ಮಾರುತಿ ಸುಜುಕಿ ಇಂಡಿಯಾದ ಎಂಡಿ ಹಾಗೂ ಸಿಇಒ ಕೆನಿಚಿ ಅಯುಕಾವಾ, ನಮ್ಮ ಗುಜರಾತ್ ಉತ್ಪಾದನಾ ಘಟಕವು ಆರಂಭವಾದಾಗ, ಈ ಪ್ರದೇಶದಲ್ಲಿ ಯಾವುದೇ ಪ್ರಮುಖ ವೈದ್ಯಕೀಯ ಸೌಲಭ್ಯಗಳು ಲಭ್ಯವಿರಲಿಲ್ಲ.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ನಾವು ಉತ್ತಮ ಗುಣಮಟ್ಟದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ನಿರ್ಧರಿಸಿದ್ದೇವೆ. ಈ ಆಸ್ಪತ್ರೆಯನ್ನು ಜೈಡಸ್ ಗ್ರೂಪ್ ನಿರ್ವಹಣೆ ಮಾಡಲಿದೆ. ಈ ಆಸ್ಪತ್ರೆಯು ಕೋವಿಡ್ 19 ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ನೆರವಾಗಲಿದೆ ಎಂದು ಹೇಳಿದರು.
ಈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಸೀತಾಪುರದ ಅಕ್ಕ ಪಕ್ಕದ ಹಳ್ಳಿಗಳಲ್ಲಿ ವಾಸಿಸುವ 3.75 ಲಕ್ಷಕ್ಕೂ ಹೆಚ್ಚು ಜನರಿಗೆ ಕೈಗೆಟುಕುವ ಶುಲ್ಕದಲ್ಲಿ ಸೇವೆ ನೀಡಲಾಗುವುದು ಎಂದು ಕಂಪನಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.
MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು
ಈ ಆಸ್ಪತ್ರೆಯಲ್ಲಿ ಕರೋನಾ ರೋಗಿಗಳಿಗೆ 50 ಹಾಸಿಗೆಗಳ ಸೌಲಭ್ಯವಿದೆ. ಇದನ್ನು 100 ಹಾಸಿಗೆಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯವು 7.5 ಎಕರೆ ಪ್ರದೇಶದಲ್ಲಿದೆ. ಈ ಆಸ್ಪತ್ರೆ ಈ ಪ್ರದೇಶದಲ್ಲಿರುವ ಮೊದಲನೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ.