Just In
- 1 hr ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 2 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 2 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 2 hrs ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News ಬೆಂಗಳೂರಲ್ಲಿ ನಿತ್ಯ 10 mld ಸಂಸ್ಕರಿಸಿದ ನೀರು ಪೂರೈಕೆ: BWSSB
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇಂದ್ರ ಸಚಿವರ ಮನವಿ ಮೇರೆಗೆ ತುರ್ತಾಗಿ 8 ಕಾರ್ ಆಂಬ್ಯುಲೆನ್ಸ್ ನಿಯೋಜಿಸಿದ ಎಂಜಿ ಮೋಟಾರ್
ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಸರ್ಕಾರದ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಕೋವಿಡ್ ನಿಯಂತ್ರಣಕ್ಕಾಗಿ ಹಲವಾರು ರೀತಿಯ ನೆರವು ನೀಡುತ್ತಿವೆ.
ಕೋವಿಡ್ 2ನೇ ಅಲೆಯಿಂದಾಗಿ ಇಡೀ ದೇಶವೇ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಆರ್ಥಿಕ ಚಟುವಟಿಕೆಗಳಿಲ್ಲದೆ ಭಾರೀ ನಷ್ಟ ಅನುಭವಿಸುತ್ತಿದ್ದರೂ ಸಾಮಾಜಿಕ ಜವಾಬ್ದಾರಿ ಅಡಿ ಹಲವು ವಾಹನ ತಯಾಕರ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ವಿವಿಧ ರೀತಿಯ ಸಹಕಾರ ಘೋಷಿಸಿವೆ. ಪರಿಸ್ಥಿತಿಗೆ ಅನುಗುಣವಾಗಿ ಹಲವು ಕಾರು ಕಂಪನಿಗಳು ತಮ್ಮ ವಾಹನ ಉತ್ಪಾದನಾ ಘಟಕದಲ್ಲಿ ತಾತ್ಕಾಲಿಕವಾಗಿ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದ್ದು, ಇನ್ನು ಕೆಲವು ವಾಹನ ಕಂಪನಿಗಳು ಹಣಕಾಸು ನೆರವು ಘೋಷಣೆ ಮಾಡಿವೆ.
ಕೋವಿಡ್ ವಿರುದ್ದದ ಹೋರಾಟದಲ್ಲಿ ಆರಂಭದಿಂದಲೂ ವಿವಿಧ ಹಂತಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಕ್ಕೆ ಹಣಕಾಸಿನ ಜೊತೆ ವೈದ್ಯಕೀಯ ಸೇವೆಗಳ ನೆರವು ನೀಡಿರುವ ಎಂಜಿ ಮೋಟಾರ್ ಕಂಪನಿಯು ಇದೀಗ ಕೇಂದ್ರ ಸಚಿವರ ಸೂಚನೆ ಮೇರೆಗೆ ವೈದ್ಯಕೀಯ ಸೇವೆಗಳಿಗೆ ಮತ್ತೊಂದು ಸಹಕಾರ ನೀಡಿ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ.
ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್) ನೀತಿ ಅಡಿಯಲ್ಲಿ ನಾಗಪುರ ಮತ್ತು ಅಮರಾವತಿ ವಿಭಾಗಗಳನ್ನು ಒಳಗೊಂಡ ವಿದರ್ಭದಲ್ಲಿ ಆಂಬ್ಯುಲೆನ್ಸ್ ಕೊರತೆ ನಿಗಿಸಲು ಎಂಜಿ ಮೋಟಾರ್ ಮತ್ತು ಪೆಟಿಎಂ ಕಂಪನಿಗಳು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಮನವಿ ಮೇರೆಗೆ ತುರ್ತಾಗಿ ಸುಮಾರು 8 ಕಾರ್ ಆಂಬ್ಯುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನಿಯೋಜಿಸಿವೆ.
ನಿತಿನ್ ಗಡ್ಕರಿಯವರು ಎಂಜಿ ಮೋಟಾರ್ ಮತ್ತು ಪೆಟಿಎಂ ಕಂಪನಿಗಳಿಗೆ ಖುದ್ದಾಗಿ ಕರೆ ಮಾಡಿ ಮನವಿ ಮಾಡಿದ್ದು, ನಾಗಪುರ ಮತ್ತು ಅಮರಾವತಿ ವಿಭಾಗಗಳಲ್ಲಿ ಸುಮಾರು 100 ಕಾರ್ ಆ್ಯಂಬುಲೆನ್ಸ್ ನಿಯೋಜನೆಗಾಗಿ ಮನವಿ ಮಾಡಿದ್ದಾರೆ. ಸಚಿವರ ಮನವಿಗೆ ತುರ್ತಾಗಿ ಸ್ಪಂದಿಸಿದ ಎಂಜಿ ಮೋಟಾರ್ ಕಂಪನಿಯು ತಕ್ಷಣಕ್ಕೆ ಲಭ್ಯವಿದ್ದ 8 ಕಾರ್ ಆಂಬ್ಯುಲೆನ್ಸ್ಗಳನ್ನು ನಿಯೋಜನೆಸಿದೆ.
ಮುಂದಿನ ಕೆಲವೇ ವಾರಗಳಲ್ಲಿ ಸಚಿವರ ಸೂಚಿಸಿರುವ 100 ಕಾರ್ ಆಂಬ್ಯುಲೆನ್ಸ್ಗಳನ್ನು ಅಗತ್ಯವಿರುವ ಎಲ್ಲಾ ಕಡೆಗಳಲ್ಲೂ ನಿಯೋಜಿಸುವುದಾಗಿ ಭರವಸೆ ನೀಡಿರುವ ಎಂಜಿ ಮೋಟಾರ್ ಕಂಪನಿಯು ನಿನ್ನೆಯಷ್ಟೇ ಸರ್ಕಾರಿ ಆಸ್ಪತ್ರೆಗಳ ಬೆಡ್ ಸಾಮರ್ಥ್ಯ ಹೆಚ್ಚಳಕ್ಕಾಗಿ ಸುಮಾರು 200 ಗುಣಮಟ್ಟದ ಹಾಸಿಗೆಗಳನ್ನು ದೇಣಿಗೆಯಾಗಿ ನೀಡಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಕಳೆದ ವರ್ಷವು ಸಹ ಕೋವಿಡ್ ಹೆಚ್ಚಳದ ಸಂದರ್ಭದಲ್ಲಿ ಕಾರು ಉತ್ಪಾದನೆ ಸ್ಥಗಿತಗೊಂಡಿದ್ದ ಸಂದರ್ಭದಲ್ಲಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದ ಎಂಜಿ ಮೋಟಾರ್ ಕಂಪನಿಯು ಮಾಕ್ಸ್ ಕಂಪನಿಯ ವೆಂಟೆಲೆಟರ್ ಉತ್ಪಾದನೆಯ ಹೆಚ್ಚಳಕ್ಕೂ ಸ್ಥಳಾವಕಾಶ ಒದಗಿಸಿದೆ.
ಜೊತೆಗೆ ಎಂಜಿ ಮೋಟಾರ್ ಕಂಪನಿಯು ದೇಶಾದ್ಯಂತ ಪ್ರಮುಖ ಪೊಲೀಸ್ ಠಾಣೆಗಳಲ್ಲಿ ಕರೋನಾ ವಾರಿಯರ್ಸ್ಗೆ ಯಾವುದೇ ತೊಂದರೆಯಾಗದಂತೆ ನಿರಂತವಾಗಿ ವೆಹಿಕಲ್ ಸ್ಯಾನಿಟೈಜ್ ಸೌಲಭ್ಯವನ್ನು ಉಚಿತವಾಗಿ ಒದಗಿಸುತ್ತಿದ್ದು, ಕಾರ್ಪೊರೆಟ್ ಸಾಮಾಜಿಕ ಹೊಣೆಗಾರಿಕೆ ಅಡಿ ಸಮುದಾಯದ ಸೇವೆಗೆ ಜೊತೆಯಾಗಿರುವ ಎಂಜಿ ಮೋಟಾರ್ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!
ಎಂಜಿ ಮೋಟಾರ್ ಮಾತ್ರವಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಹಲವಾರು ವಾಹನ ತಯಾಕರ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಕೆಲವು ಕಂಪನಿಗಳು ವೈದ್ಯಕೀಯ ಸೇವೆಗಳಿಗೆ ಸಹಕಾರ ನೀಡಿದ್ದಲ್ಲಿ ಇನ್ನು ಕೆಲವು ಕಂಪನಿಗಳು ಹಣಕಾಸಿನ ನೆರವು ಒದಗಿಸುತ್ತಿವೆ.