Just In
- 9 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 10 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 11 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 12 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ಸಂಕಷ್ಟ: 200 ಹಾಸಿಗೆಗಳನ್ನು ದೇಣಿಗೆ ನೀಡಿದ ಎಂಜಿ ಮೋಟಾರ್
ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವ ಪರಿಣಾಮ ವೈರಸ್ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹರಸಾಹಸಪಡುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಹಲವಾರು ಖಾಸಗಿ ಕಂಪನಿಗಳು ಸಹ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿವೆ.
ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.
ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳದಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ವೈದ್ಯಕೀಯ ಸೇವೆಗಳನ್ನು ತಲುಪಿಸುವ ಸರ್ಕಾರಗಳ ಪ್ರಯತ್ನಕ್ಕೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹ ಸಾಧ್ಯವಿರುವ ಕಡೆಗಳಲ್ಲಿ ಕೈಜೋಡಿಸಿವೆ.
ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಸರ್ಕಾರದ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಕೋವಿಡ್ ನಿಯಂತ್ರಣಕ್ಕಾಗಿ ಆರ್ಥಿಕ ನೆರವು ನೀಡಿವೆ.
ಕೋವಿಡ್ 2ನೇ ಅಲೆಯಿಂದಾಗಿ ಇಡೀ ದೇಶವೇ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಆರ್ಥಿಕ ಚಟುವಟಿಕೆಗಳಿಲ್ಲದೆ ಭಾರೀ ನಷ್ಟ ಅನುಭವಿಸುತ್ತಿದ್ದರೂ ಸಾಮಾಜಿಕ ಜವಾಬ್ದಾರಿ ಅಡಿ ಹಲವು ವಾಹನ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ವಿವಿಧ ರೀತಿಯ ಸಹಕಾರ ಘೋಷಿಸಿವೆ. ಪರಿಸ್ಥಿತಿಗೆ ಅನುಗುಣವಾಗಿ ಹಲವು ಕಾರು ಕಂಪನಿಗಳು ತಮ್ಮ ವಾಹನ ಉತ್ಪಾದನಾ ಘಟಕದಲ್ಲಿ ತಾತ್ಕಾಲಿಕವಾಗಿ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದ್ದು, ಇನ್ನು ಕೆಲವು ವಾಹನ ಕಂಪನಿಗಳು ಹಣಕಾಸು ನೆರವು ಘೋಷಣೆ ಮಾಡಿವೆ.
ಕೋವಿಡ್ ವಿರುದ್ದದ ಹೋರಾಟದಲ್ಲಿ ಆರಂಭದಿಂದಲೂ ವಿವಿಧ ಹಂತಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಕ್ಕೆ ಹಣಕಾಸಿನ ಜೊತೆ ವೈದ್ಯಕೀಯ ಸೇವೆಗಳ ನೆರವು ನೀಡಿರುವ ಎಂಜಿ ಮೋಟಾರ್ ಕಂಪನಿಯು ಇದೀಗ ಸೋಂಕಿತರಿಗೆ ಎದುರಾಗುತ್ತಿರುವ ಬೆಡ್ ಸಮಸ್ಯೆಗೆ ಸ್ಪಂದಿಸಿದೆ.
ಸರ್ಕಾರಿ ಆಸ್ಪತ್ರೆಗಳ ಬೆಡ್ ಸಾಮರ್ಥ್ಯ ಹೆಚ್ಚಳಕ್ಕಾಗಿ ನೆರವಾಗಿರುವ ಎಂಜಿ ಮೋಟಾರ್ ಕಂಪನಿಯು ಸುಮಾರು 200 ಹಾಸಿಗೆಗಳನ್ನು ದೇಣಿಗೆಯಾಗಿ ನೀಡಿದ್ದು, ಅಗತ್ಯವಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಕೆಗೆ ಸಹಕಾರ ನೀಡಿದೆ.
ಎಂಜಿ ಮೋಟರ್ ಇಂಡಿಯಾ ಕ್ರೆಡಿಹೆಲ್ತ್ನ ಮೂಲಕ ಸುಸ್ತಿರವಾದ ಹಾಸಿಗೆಗಳನ್ನು ದೇಣಿಗೆಯಾಗಿ ನೀಡಿದ್ದು, ಭಾರತೀಯ ಸೇನಾ ಪಡೆಗಳ ಹಾಸಿಗೆ ಸೌಲಭ್ಯ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಆರ್ಯನ್ ಪೇಪರ್ ಮಿಲ್ಸ್ ಜೊತೆಗೂಡಿ ಗುಣಮಟ್ಟದ ಪ್ಲೈವುಡ್ ಒಳಗೊಂಡ ಹಾಸಿಗೆ ಸೌಲಭ್ಯವನ್ನು ಸಿದ್ದಪಡಿಸಿದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!
ಕಳೆದ ವರ್ಷವು ಸಹ ಕೋವಿಡ್ ಹೆಚ್ಚಳದ ಸಂದರ್ಭದಲ್ಲಿ ಕಾರು ಉತ್ಪಾದನೆ ಸ್ಥಗಿತಗೊಂಡಿದ್ದ ಸಂದರ್ಭದಲ್ಲಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದ ಎಂಜಿ ಮೋಟಾರ್ ಕಂಪನಿಯು ಮಾಕ್ಸ್ ಕಂಪನಿಯ ವೆಂಟೆಲೆಟರ್ ಉತ್ಪಾದನೆಯ ಹೆಚ್ಚಳಕ್ಕೂ ಸ್ಥಳಾವಕಾಶ ಒದಗಿಸುತ್ತಿತ್ತು.
ಜೊತೆಗೆ ಗುಜರಾತಿನ ವಡೋದರಾ ಸೇರಿದಂತೆ ಪ್ರಮುಖ ಕಡೆಗಳಲ್ಲಿ ಆಧುನಿಕ ಸೌಲಭ್ಯವುಳ್ಳ ಕಾರ್ ಆ್ಯಂಬುಲೆನ್ಸ್ ಸಹ ದೇಣಿಯಾಗಿ ನೀಡಿರುವ ಎಂಜಿ ಮೋಟಾರ್ ಕಂಪನಿಯು ದೇಶಾದ್ಯಂತ ಪ್ರಮುಖ ಪೊಲೀಸ್ ಠಾಣೆಗಳಲ್ಲಿ ಕರೋನಾ ವಾರಿಯರ್ಸ್ಗೆ ಯಾವುದೇ ತೊಂದರೆಯಾಗದಂತೆ ನಿರಂತವಾಗಿ ವೆಹಿಕಲ್ ಸ್ಯಾನಿಟೈಜ್ ಸೌಲಭ್ಯವನ್ನು ಉಚಿತವಾಗಿ ಒದಗಿಸಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಕಳೆದ ವಾರವಷ್ಟೇ ಕೋವಿಡ್ ಅಬ್ಬರ ಹೆಚ್ಚಿರುವುದರಿಂದ ದೇವನಂದನ್ ಗ್ಯಾಸ್ ಪ್ರೈ.ಲಿ ಕಂಪನಿ ಜೊತೆಗೂಡಿ ಕಾರು ಉತ್ಪಾದನಾ ಘಟಕದಲ್ಲೇ ಮೆಡಿಕಲ್ ಆಕ್ಸಿಜನ್ ಉತ್ಪಾದನೆಯನ್ನು ತೀವ್ರಗೊಳಿಸಲಾಗಿದ್ದು, ಕಾರ್ಪೊರೆಟ್ ಸಾಮಾಜಿಕ ಹೊಣೆಗಾರಿಕೆ ಅಡಿ ಸಮುದಾಯದ ಸೇವೆಗೆ ಜೊತೆಯಾಗಿರುವ ಎಂಜಿ ಮೋಟಾರ್ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.