Just In
- 9 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 10 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 11 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 12 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಡ್ಡಾಯವಾಗಿ ಎಲೆಕ್ಟ್ರಿಕ್ ವಾಹನ ಬಳಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರಿಗೆ ಸಚಿವ
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿರವರು ತಮ್ಮ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ್ದಾರೆ. ದೇಶದಲ್ಲಿ ವಾಹನಗಳಿಂದ ವಾಯುಮಾಲಿನ್ಯವು ಹೆಚ್ಚುತ್ತಿರುವುದರಿಂದ ಇದಕ್ಕೆ ಪರಿಹಾರ ನೀಡುವುದು ಸವಾಲಿನ ಕೆಲಸವಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ದೇಶದ ಆದಾಯದ ಬಹುಪಾಲು ಭಾಗವನ್ನು ಪೆಟ್ರೋಲಿಯಂ ಆಮದಿಗಾಗಿ ಖರ್ಚು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಜೊತೆಗೆ ವಾಯು ಮಾಲಿನ್ಯವು ಕಡಿಮೆಯಾಗುತ್ತದೆ ಎಂದು ಅವರು ಹೇಳಿದರು.
ದೇಶದಲ್ಲಿ ಪ್ರತಿ ವರ್ಷ 8 ಲಕ್ಷ ಕೋಟಿ ಪೆಟ್ರೋಲಿಯಂ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಚಾಲನೆಗೆ ಕಡಿಮೆ ಖರ್ಚಾಗುತ್ತದೆ ಎಂದು ಗಡ್ಕರಿ ಹೇಳಿದರು.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಕೃಷಿ ಹಾಗೂ ನಿರ್ಮಾಣ ಕ್ಷೇತ್ರದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಅವರು ಹೇಳಿದರು. ಕೃಷಿಯಲ್ಲಿ ಎಲೆಕ್ಟ್ರಿಕ್ ಟ್ರಾಕ್ಟರ್ ಹಾಗೂ ಉಪಕರಣಗಳನ್ನು ಬಳಸುವುದರಿಂದ ಡೀಸೆಲ್ ವೆಚ್ಚವನ್ನು ಕಡಿಮೆ ಮಾಡಬಹುದು.
ಇದರಿಂದ ರೈತರ ಆದಾಯ ಹೆಚ್ಚಾಗುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದರು. ವಾಹನ ಉತ್ಪಾದನಾ ಘಟಕಗಳು ಹಾಗೂ ಕಾರ್ಖಾನೆಗಳಿಂದ ಹೊರಹೊಮ್ಮುವ ಹೊಗೆ ಕೂಡ ವಾಯುಮಾಲಿನ್ಯಕ್ಕೆ ಮುಖ್ಯ ಕಾರಣ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಎಲೆಕ್ಟ್ರಿಕ್ ಉಪಕರಣಗಳ ಬಳಕೆಯನ್ನು ಉತ್ತೇಜಿಸಲು ಉದ್ಯಮ ಕ್ಷೇತ್ರವನ್ನೂ ಪರಿಗಣಿಸಲಾಗುತ್ತಿದೆ ಎಂದು ಅವರು ಹೇಳಿದರು. ಕಲ್ಲಿದ್ದಲಿಗೆ ಪರ್ಯಾಯವನ್ನು ಸರ್ಕಾರವು ಅನ್ವೇಷಿಸುತ್ತಿದೆ. ಉತ್ಪಾದನಾ ಘಟಕಗಳು ಹಾಗೂ ಕಾರ್ಖಾನೆಗಳಲ್ಲಿನ ಎಲೆಕ್ಟ್ರಿಕ್ ಕಿಚನ್ ಸಿಸ್ಟಂಗಳು ಮಾಲಿನ್ಯವನ್ನು ಹೋಗಲಾಡಿಸಲು ಪ್ರಮುಖ ಪಾತ್ರ ವಹಿಸುತ್ತವೆ.
ಸದ್ಯಕ್ಕೆ ಇದರ ಸಾಧಕ ಭಾದಕಗಳನ್ನು ಅಧ್ಯಯನ ಮಾಡಲಾಗುತ್ತಿದೆ ಎಂದು ಗಡ್ಕರಿ ಹೇಳಿದರು. ನಿತಿನ್ ಗಡ್ಕರಿರವರು ಇತ್ತೀಚೆಗಷ್ಟೇ ಗೋ ಎಲೆಕ್ಟ್ರಿಕ್ ಅಭಿಯಾನಕ್ಕೆ ಚಾಲನೆ ನೀಡಿದರು.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಈ ಅಭಿಯಾನದಡಿಯಲ್ಲಿ ಪೆಟ್ರೋಲಿಯಂ ಆಮದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಇತ್ತೀಚೆಗೆ ನಿತಿನ್ ಗಡ್ಕರಿ ಸಿಎನ್ಜಿ ಚಾಲಿತ ದೇಶದ ಮೊದಲ ಟ್ರ್ಯಾಕ್ಟರ್ ಅನ್ನು ಬಿಡುಗಡೆಗೊಳಿಸಿದರು.
ಸಿಎನ್ಜಿ ಕಿಟ್ ಹೊಂದಿರುವ ದೇಶದ ಮೊದಲ ಡೀಸೆಲ್ ಟ್ರಾಕ್ಟರ್ ಇದಾಗಿದೆ. ಈ ಟ್ರ್ಯಾಕ್ಟರ್ ಬಳಕೆಯಿಂದ ಪ್ರತಿ ವರ್ಷ ಡೀಸೆಲ್ ಮೇಲೆ ಮಾಡುವ ಖರ್ಚಿನಲ್ಲಿ ರೂ.1.50 ಲಕ್ಷಗಳಷ್ಟು ಹಣವನ್ನು ಉಳಿಸಬಹುದು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಕೃಷಿ ವೆಚ್ಚವನ್ನು ಕಡಿಮೆ ಮಾಡಿ, ಕೃಷಿಯಿಂದ ಬರುವ ಆದಾಯವನ್ನು ಹೆಚ್ಚಿಸುವುದು ಈ ಟ್ರಾಕ್ಟರ್ ಉತ್ಪಾದನೆಯ ಹಿಂದಿರುವ ಮುಖ್ಯ ಉದ್ದೇಶ. ಟ್ರಾಕ್ಟರುಗಳನ್ನು ಸಿಎನ್ಜಿಯಾಗಿ ಪರಿವರ್ತಿಸಲು ಕೇಂದ್ರ ಸರ್ಕಾರವು ಕೇಂದ್ರಗಳನ್ನು ಸ್ಥಾಪಿಸುತ್ತಿದೆ.
ಈ ಕೇಂದ್ರಗಳಲ್ಲಿ ಸಿಎನ್ಜಿ ಕಿಟ್ಗಳನ್ನು ಟ್ರಾಕ್ಟರುಗಳಲ್ಲಿ ಅತ್ಯಂತ ಕಡಿಮೆ ಬೆಲೆಗೆ ಅಳವಡಿಸಲಾಗುವುದು ಎಂದು ಈ ಟ್ರಾಕ್ಟರ್ ಬಿಡುಗಡೆ ಸಮಾರಂಭದಲ್ಲಿ ನಿತಿನ್ ಗಡ್ಕರಿ ಹೇಳಿದರು. ದೇಶದ ಪ್ರತಿ ಜಿಲ್ಲೆಯಲ್ಲೂ ಇಂತಹ ಕೇಂದ್ರಗಳನ್ನು ತೆರೆಯುವ ಯೋಜನೆ ಸಿದ್ಧಪಡಿಸಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಒಂದು ಲೀಟರ್ ಡೀಸೆಲ್ ಬೆಲೆ ಸುಮಾರು ರೂ.83ಗಳಾದರೆ, ಪ್ರತಿ ಕೆಜಿ ಸಿಎನ್ಜಿ ಬೆಲೆ ರೂ.42ಗಳಾಗಿದೆ. ಒಬ್ಬ ರೈತ ಪ್ರತಿ ವರ್ಷ ಡೀಸೆಲ್ಗಾಗಿ ರೂ.3 ರಿಂದ ರೂ.3.5 ಲಕ್ಷ ಖರ್ಚು ಮಾಡಬೇಕಾಗುತ್ತದೆ. ಸಿಎನ್ಜಿ ಟ್ರ್ಯಾಕ್ಟರ್ ಬಳಸಿದರೆ ಪ್ರತಿ ವರ್ಷ ರೂ.1.50 ಲಕ್ಷ ಉಳಿತಾಯ ಮಾಡಬಹುದು. ಶೀಘ್ರದಲ್ಲೇ ದೇಶದಲ್ಲಿ ಎಲೆಕ್ಟ್ರಿಕ್ ಟ್ರಾಕ್ಟರುಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.