Just In
- 3 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 3 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 4 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 6 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies Puttakkana makkalu: ಮಗಳ ಜೀವನ ಸರಿಪಡಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಪುಟ್ಟಕ್ಕ
- News Heavy Rain: ಸಕ್ಕರೆ ನಾಡಿನಲ್ಲಿ ವರ್ಷದ ಮೊದಲ ಮಳೆ: ಧರೆಗುರುಳಿದ ಮರ, ಕಮಾನುಗಳು
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಡಿಗೆ ವಾಹನಗಳ ವಿಮೆ ಬಗ್ಗೆ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್
ಇತ್ತೀಚೆಗೆ ವಾಹನ ವಿಮೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಾಹನವನ್ನು ಬಾಡಿಗೆಗೆ ತೆಗೆದುಕೊಂಡರೆ ವಾಹನದ ಥರ್ಡ್ ಪಾರ್ಟಿ ವಿಮಾ ರಕ್ಷಣೆಯನ್ನು ಸಹ ವರ್ಗಾವಣೆ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಸಂದರ್ಭದಲ್ಲಿ ವಾಹನವನ್ನು ಬಾಡಿಗೆಗೆ ಪಡೆದ ವ್ಯಕ್ತಿಯನ್ನು ವಾಹನದ ಮಾಲೀಕರೆಂದು ಪರಿಗಣಿಸಲಾಗುತ್ತದೆ. ವಾಹನವನ್ನು ಬಾಡಿಗೆಗೆ ಪಡೆದ ನಂತರ ಅಪಘಾತವಾದರೆ ವಿಮಾ ಕಂಪನಿಯು ಪರಿಹಾರವನ್ನು ನೀಡಬೇಕಾಗುತ್ತದೆ.
ವಾಹನಕ್ಕೆ ವಿಮೆ ಮಾಡಿಸಿ, ನಿಗಮವು ಅದನ್ನು ನಿಗದಿತ ಮಾರ್ಗದಲ್ಲಿ ಒಪ್ಪಂದದಡಿಯಲ್ಲಿ ಚಾಲನೆ ಮಾಡುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದಲ್ಲಿ, ವಿಮಾ ಕಂಪನಿಯು ಪರಿಹಾರವನ್ನು ನೀಡುವ ಜವಾಬ್ದಾರಿಯನ್ನು ಹೊಂದಿರುತ್ತದೆಯೇ ಅಥವಾ ನಿಗಮ ಅಥವಾ ವಾಹನ ಮಾಲೀಕರು ಜವಾಬ್ದಾರಿಯನ್ನು ಹೊಂದಿರುತ್ತಾರೆಯೇ ಎಂಬ ಪ್ರಶ್ನೆ ಸುಪ್ರೀಂ ಕೋರ್ಟ್ನ ಮುಂದೆ ಎದುರಾಗಿತ್ತು.
ತೀರ್ಪು ನಿಡುವಾಗ ಸುಪ್ರೀಂ ಕೋರ್ಟ್ ಒಪ್ಪಂದದ ಪ್ರಕಾರ, ನಿಗಮವು ಆ ವಾಹನದ ಅಧಿಪತ್ಯದಲ್ಲಿರುವ ವಾಹನದ ಮಾಲೀಕರಂತಿದೆ ಎಂದು ಹೇಳಿದೆ. ವಾಹನದೊಳಗೆ ಡ್ರೈವರ್ ಅಥವಾ ಕಂಡಕ್ಟರ್ ಕೆಲಸ ಮಾಡುತ್ತಿರುತ್ತಾರೆ.
ಅಂತಹ ಸಂದರ್ಭದಲ್ಲಿ ವಾಹನದ ಜೊತೆಗೆ ವಿಮಾ ಪಾಲಿಸಿಯೂ ವರ್ಗಾವಣೆಯಾಗಿದೆ ಎಂದು ಪರಿಗಣಿಸಲಾಗುತ್ತದೆ. ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದೊಂದಿಗೆ ವಾಹನ ಮಾಲೀಕರ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣವು ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು.
ಒಪ್ಪಂದದ ಪ್ರಕಾರ ವಾಹನ ಮಾಲೀಕರು ಬಸ್ ಅನ್ನು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಬಾಡಿಗೆಗೆ ನೀಡಿದ್ದರು. ಬಸ್ ಮಾಲೀಕರು ಬಾಡಿಗೆ ಅವಧಿಯಲ್ಲಿ ವಿಮೆ ಪಡೆದಿದ್ದರು. ಈ ಬಸ್ 25 ಆಗಸ್ಟ್ 1998 ರಂದು ಅಪಘಾತಕ್ಕೀಡಾಯಿತು.
ಈ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದರು. ಅವರ ಕುಟುಂಬ ಸದಸ್ಯರು ಮೋಟಾರ್ ಅಪಘಾತ ಹಕ್ಕುಗಳ ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಿ,ಪರಿಹಾರವನ್ನು ಕೋರಿದ್ದರು.
ನ್ಯಾಯಮಂಡಳಿ ವಿಮಾ ಕಂಪನಿಗೆ ರೂ.1.82 ಲಕ್ಷಗಳ ಪರಿಹಾರವನ್ನು ಮೃತರ ಮುಂದಿನ ರಕ್ತಸಂಬಂಧಿಗಳಿಗೆ 6% ಬಡ್ಡಿಯೊಂದಿಗೆ ಪಾವತಿಸಲು ಆದೇಶಿಸಿತು. ಆದರೆ, ವಿಮಾ ಕಂಪನಿಯು ಈ ಆದೇಶವನ್ನು ಅಲಹಾಬಾದ್ ಹೈಕೋರ್ಟ್ನಲ್ಲಿ ಪ್ರಶ್ನಿಸಿತು.
ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮವು ಬಾಡಿಗೆಗೆ ಬಸ್ ಓಡಿಸುತ್ತಿರುವುದರಿಂದ ವಿಮಾ ಕಂಪನಿಯು ಮೂರನೇ ವ್ಯಕ್ತಿಗೆ ಪರಿಹಾರವನ್ನು ಪಾವತಿಸಲು ಹೊಣೆಗಾರನಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು.
ಅಲಹಾಬಾದ್ ಹೈ ಕೋರ್ಟ್ ಆದೇಶದ ವಿರುದ್ಧ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತು. ಸುದೀರ್ಘ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಬುಧವಾರ ಈ ಪ್ರಕರಣದ ತೀರ್ಪು ನೀಡಿದೆ.
ಯಾವುದೇ ಕಂಪನಿ ಅಥವಾ ನಿಗಮವು ಮಾಲಿಕರಿಂದ ವಾಹನವನ್ನು ಬಾಡಿಗೆಗೆ ತೆಗೆದುಕೊಂಡರೆ, ವಾಹನದ ಜೊತೆಗೆ, ಅದರ ಮೂರನೇ ವ್ಯಕ್ತಿಯ ವಿಮೆಯನ್ನು ಸಹ ವರ್ಗಾವಣೆ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ. ಇದರಿಂದ ಒಪ್ಪಂದದ ಅವಧಿಯಲ್ಲಿ ವಾಹನವು ಅಪಘಾತಕ್ಕೀಡಾದರೆ ವಿಮಾ ಕಂಪನಿಯು ಪರಿಹಾರವನ್ನು ಪಾವತಿಸಲು ಹೊಣೆಗಾರನಾಗ ಬೇಕಾಗುತ್ತದೆ.