Just In
- 27 min ago ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- 2 hrs ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 3 hrs ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 3 hrs ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
Don't Miss!
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Movies Yuva Review : ಕ್ಲಾಸ್-ಮಾಸ್; ಸ್ಯಾಂಡಲ್ವುಡ್ನ ಹೊಸ ಪರ್ವ ಈ ಯುವ, ಹೇಗಿದೆ ದೊಡ್ಮನೆ ಕುಡಿಯ ಅಬ್ಬರ?
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಡಿಗೆ ವಾಹನಗಳ ವಿಮೆ ಬಗ್ಗೆ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್
ಇತ್ತೀಚೆಗೆ ವಾಹನ ವಿಮೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಾಹನವನ್ನು ಬಾಡಿಗೆಗೆ ತೆಗೆದುಕೊಂಡರೆ ವಾಹನದ ಥರ್ಡ್ ಪಾರ್ಟಿ ವಿಮಾ ರಕ್ಷಣೆಯನ್ನು ಸಹ ವರ್ಗಾವಣೆ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಸಂದರ್ಭದಲ್ಲಿ ವಾಹನವನ್ನು ಬಾಡಿಗೆಗೆ ಪಡೆದ ವ್ಯಕ್ತಿಯನ್ನು ವಾಹನದ ಮಾಲೀಕರೆಂದು ಪರಿಗಣಿಸಲಾಗುತ್ತದೆ. ವಾಹನವನ್ನು ಬಾಡಿಗೆಗೆ ಪಡೆದ ನಂತರ ಅಪಘಾತವಾದರೆ ವಿಮಾ ಕಂಪನಿಯು ಪರಿಹಾರವನ್ನು ನೀಡಬೇಕಾಗುತ್ತದೆ.
ವಾಹನಕ್ಕೆ ವಿಮೆ ಮಾಡಿಸಿ, ನಿಗಮವು ಅದನ್ನು ನಿಗದಿತ ಮಾರ್ಗದಲ್ಲಿ ಒಪ್ಪಂದದಡಿಯಲ್ಲಿ ಚಾಲನೆ ಮಾಡುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದಲ್ಲಿ, ವಿಮಾ ಕಂಪನಿಯು ಪರಿಹಾರವನ್ನು ನೀಡುವ ಜವಾಬ್ದಾರಿಯನ್ನು ಹೊಂದಿರುತ್ತದೆಯೇ ಅಥವಾ ನಿಗಮ ಅಥವಾ ವಾಹನ ಮಾಲೀಕರು ಜವಾಬ್ದಾರಿಯನ್ನು ಹೊಂದಿರುತ್ತಾರೆಯೇ ಎಂಬ ಪ್ರಶ್ನೆ ಸುಪ್ರೀಂ ಕೋರ್ಟ್ನ ಮುಂದೆ ಎದುರಾಗಿತ್ತು.
ತೀರ್ಪು ನಿಡುವಾಗ ಸುಪ್ರೀಂ ಕೋರ್ಟ್ ಒಪ್ಪಂದದ ಪ್ರಕಾರ, ನಿಗಮವು ಆ ವಾಹನದ ಅಧಿಪತ್ಯದಲ್ಲಿರುವ ವಾಹನದ ಮಾಲೀಕರಂತಿದೆ ಎಂದು ಹೇಳಿದೆ. ವಾಹನದೊಳಗೆ ಡ್ರೈವರ್ ಅಥವಾ ಕಂಡಕ್ಟರ್ ಕೆಲಸ ಮಾಡುತ್ತಿರುತ್ತಾರೆ.
ಅಂತಹ ಸಂದರ್ಭದಲ್ಲಿ ವಾಹನದ ಜೊತೆಗೆ ವಿಮಾ ಪಾಲಿಸಿಯೂ ವರ್ಗಾವಣೆಯಾಗಿದೆ ಎಂದು ಪರಿಗಣಿಸಲಾಗುತ್ತದೆ. ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದೊಂದಿಗೆ ವಾಹನ ಮಾಲೀಕರ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣವು ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು.
ಒಪ್ಪಂದದ ಪ್ರಕಾರ ವಾಹನ ಮಾಲೀಕರು ಬಸ್ ಅನ್ನು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಬಾಡಿಗೆಗೆ ನೀಡಿದ್ದರು. ಬಸ್ ಮಾಲೀಕರು ಬಾಡಿಗೆ ಅವಧಿಯಲ್ಲಿ ವಿಮೆ ಪಡೆದಿದ್ದರು. ಈ ಬಸ್ 25 ಆಗಸ್ಟ್ 1998 ರಂದು ಅಪಘಾತಕ್ಕೀಡಾಯಿತು.
ಈ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದರು. ಅವರ ಕುಟುಂಬ ಸದಸ್ಯರು ಮೋಟಾರ್ ಅಪಘಾತ ಹಕ್ಕುಗಳ ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಿ,ಪರಿಹಾರವನ್ನು ಕೋರಿದ್ದರು.
ನ್ಯಾಯಮಂಡಳಿ ವಿಮಾ ಕಂಪನಿಗೆ ರೂ.1.82 ಲಕ್ಷಗಳ ಪರಿಹಾರವನ್ನು ಮೃತರ ಮುಂದಿನ ರಕ್ತಸಂಬಂಧಿಗಳಿಗೆ 6% ಬಡ್ಡಿಯೊಂದಿಗೆ ಪಾವತಿಸಲು ಆದೇಶಿಸಿತು. ಆದರೆ, ವಿಮಾ ಕಂಪನಿಯು ಈ ಆದೇಶವನ್ನು ಅಲಹಾಬಾದ್ ಹೈಕೋರ್ಟ್ನಲ್ಲಿ ಪ್ರಶ್ನಿಸಿತು.
ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮವು ಬಾಡಿಗೆಗೆ ಬಸ್ ಓಡಿಸುತ್ತಿರುವುದರಿಂದ ವಿಮಾ ಕಂಪನಿಯು ಮೂರನೇ ವ್ಯಕ್ತಿಗೆ ಪರಿಹಾರವನ್ನು ಪಾವತಿಸಲು ಹೊಣೆಗಾರನಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು.
ಅಲಹಾಬಾದ್ ಹೈ ಕೋರ್ಟ್ ಆದೇಶದ ವಿರುದ್ಧ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತು. ಸುದೀರ್ಘ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಬುಧವಾರ ಈ ಪ್ರಕರಣದ ತೀರ್ಪು ನೀಡಿದೆ.
ಯಾವುದೇ ಕಂಪನಿ ಅಥವಾ ನಿಗಮವು ಮಾಲಿಕರಿಂದ ವಾಹನವನ್ನು ಬಾಡಿಗೆಗೆ ತೆಗೆದುಕೊಂಡರೆ, ವಾಹನದ ಜೊತೆಗೆ, ಅದರ ಮೂರನೇ ವ್ಯಕ್ತಿಯ ವಿಮೆಯನ್ನು ಸಹ ವರ್ಗಾವಣೆ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ. ಇದರಿಂದ ಒಪ್ಪಂದದ ಅವಧಿಯಲ್ಲಿ ವಾಹನವು ಅಪಘಾತಕ್ಕೀಡಾದರೆ ವಿಮಾ ಕಂಪನಿಯು ಪರಿಹಾರವನ್ನು ಪಾವತಿಸಲು ಹೊಣೆಗಾರನಾಗ ಬೇಕಾಗುತ್ತದೆ.