Just In
- 28 min ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 31 min ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 1 hr ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- 1 hr ago ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Movies STD ಬೂತ್ನಲ್ಲಿ ಕೆಲಸ ಮಾಡುವಾಗ 500 ರೂ. ಸಂಬಳ; ಶೋ ಆರಂಭಿಸಿದ ಮೇಲೆ ಗಳಿಸಿದ್ದೆಷ್ಟು ಕೋಟಿ?
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನ ಮಾಲೀಕರೇ ಇನ್ಮುಂದೆ ದೋಷಯುಕ್ತ ವಾಹನಗಳ ಸಮಸ್ಯೆ ಬಗ್ಗೆ ಚಿಂತಿಸಬೇಕಿಲ್ಲ!
ಇನ್ನು ಮುಂದೆ ವಾಹನ ಮಾಲೀಕರು ದೋಷಯುಕ್ತ ವಾಹನಗಳನ್ನು ಮಾರಾಟ ಮಾಡುವ ಕಂಪನಿಗಳ ವಿರುದ್ಧ ಸರ್ಕಾರಕ್ಕೆ ಸುಲಭವಾಗಿ ದೂರು ನೀಡಬಹುದು. ವಾಹನಗಳ ಮಾಲೀಕರ ಅನುಕೂಲಕ್ಕಾಗಿ ಕೇಂದ್ರ ರಸ್ತೆ ಸಾರಿಗೆ ಇಲಾಖೆಯು ವೆಹಿಕಲ್ ರಿಕಾಲ್ ಪೋರ್ಟಲ್ ಅನ್ನು ಆರಂಭಿಸಿದೆ.
ಈ ಪೋರ್ಟಲ್'ನಲ್ಲಿ ವಾಹನ ಮಾಲೀಕರು ತಮ್ಮ ವಾಹನಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಬಹುದು. ಈ ಮೂಲಕ ವಾಹನಗಳಿಗೆ ಸಂಬಂಧಿಸಿದ ದೂರುಗಳನ್ನು ಶೀಘ್ರವೇ ಬಗೆಹರಿಸಬಹುದು ಎಂಬುದು ಸರ್ಕಾರದ ಅಭಿಪ್ರಾಯ.
ಈಗ ಭಾರತದಲ್ಲಿರುವ ವಾಹನ ತಯಾರಕ ಕಂಪನಿಗಳು ಸ್ವಯಂಪ್ರೇರಿತವಾಗಿ ವಾಹನಗಳನ್ನು ರಿಕಾಲ್ ಮಾಡುತ್ತಿವೆ. ವಾಹನಗಳಲ್ಲಿ ಏನಾದರೂ ದೋಷಗಳು ಕಂಡು ಬಂದರೆ ಕಂಪನಿಗಳು ಆ ವಾಹನಗಳನ್ನು ರಿಕಾಲ್ ಮಾಡಿ ಅವುಗಳನ್ನು ಸರಿಪಡಿಸಿ ಗ್ರಾಹಕರಿಗೆ ಹಿಂದಿರುಗಿಸುತ್ತವೆ.
ಆದರೆ ಕೆಲವು ಗ್ರಾಹಕರು ರಿಕಾಲ್ ಮಾಡಿದ ನಂತರವೂ ತಮ್ಮ ವಾಹನಗಳನ್ನು ಸರಿಪಡಿಸಿರುವುದಿಲ್ಲವೆಂದು ದೂರುತ್ತಾರೆ. ಇದರಿಂದ ಗ್ರಾಹಕರು ದೋಷಯುಕ್ತ ವಾಹನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರತಿದಿನ ಎದುರಿಸಬೇಕಾಗುತ್ತದೆ.
ಈ ವಾಹನಗಳ ಬಳಕೆಯಿಂದಾಗಿ ರಸ್ತೆ ಅಪಘಾತಗಳ ಸಾಧ್ಯತೆಯೂ ಹೆಚ್ಚಾಗುತ್ತದೆ. ಹೊಸ ವಾಹನ ಮರುಪಡೆಯುವಿಕೆ ನೀತಿಯಡಿಯಲ್ಲಿ, ವಾಹನ ಮಾಲೀಕರು ತಮ್ಮ ವಾಹನಕ್ಕೆ ಸಂಬಂಧಿಸಿದ ಸಮಸ್ಯೆಗಳ ದೂರುಗಳನ್ನು 7 ವರ್ಷಗಳಲ್ಲಿ ಸಲ್ಲಿಸಲು ಸಾಧ್ಯವಾಗುತ್ತದೆ.
ವಾಹನ ಮಾಲೀಕರಿಂದ ಬರುವ ದೂರುಗಳ ಆಧಾರದ ಮೇಲೆ ಕೇಂದ್ರೀಕೃತ ಏಜೆನ್ಸಿಯಾದ ರಾಷ್ಟ್ರೀಯ ಹೆದ್ದಾರಿ ಸಂಚಾರ ಸುರಕ್ಷತಾ ಆಡಳಿತ (ಎನ್ಎಚ್ಟಿಎಸ್ಎ) ತನಿಖೆ ನಡೆಸಲಿದೆ.
ಈ ಏಜೆನ್ಸಿ ವಾಹನಗಳನ್ನು ನಿರ್ದಿಷ್ಟ ಸಮಯದೊಳಗೆ ದುರಸ್ತಿ ಪಡಿಸುವಂತೆ ಅಥವಾ ಬದಲಿಸುವಂತೆ ಸೂಚಿಸುತ್ತದೆ. ಕಳೆದ ವರ್ಷ ಸಾರಿಗೆ ಇಲಾಖೆಯು ಮೋಟಾರು ವಾಹನ ಕಾಯ್ದೆಗೆ (1988) ತಿದ್ದುಪಡಿ ಮಾಡಿ ವಾಹನಗಳ ರಿಕಾಲ್'ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.
ಇದರ ಅನ್ವಯ ವಾಹನ ತಯಾರಕ ಕಂಪನಿಗಳು ವಾಹನಗಳಲ್ಲಿ ದೋಷ ಕಂಡುಬಂದಲ್ಲಿ ಕಡ್ಡಾಯವಾಗಿ ವಾಹನ ಮರುಪಡೆಯಬೇಕಾಗುತ್ತದೆ. ಈ ಕಾನೂನಿನ ಪ್ರಕಾರ, ಕಂಪನಿಯು ದೋಷಯುಕ್ತ ವಾಹನವನ್ನು ಮರುಪಡೆಯಲು ನಿರಾಕರಿಸಿದರೆ ಅಥವಾ ಪದೇ ಪದೇ ನಿಯಮಗಳನ್ನು ಉಲ್ಲಂಘಿಸಿದರೆ ರೂ.10 ಲಕ್ಷದಿಂದ ರೂ.10 ಕೋಟಿವರೆಗೆ ದಂಡ ವಿಧಿಸಲಾಗುತ್ತದೆ.
ವಾಹನ ಮಾಲೀಕರ ಹಕ್ಕುಗಳನ್ನು ರಕ್ಷಿಸಲು ಈ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೊಸ ನಿಯಮವನ್ನು ಈ ವರ್ಷದ ಏಪ್ರಿಲ್ 1ರಿಂದ ಜಾರಿಗೊಳಿಸಲಾಗಿದೆ.
ಈ ನಿಯಮವು ಎಲ್ಲಾ ರೀತಿಯ ವಾಹನಗಳಿಗೂ ಅನ್ವಯವಾಗುತ್ತದೆ. ಅಂದರೆ ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ, ಲಘು ವಾಹನಗಳು, ಭಾರೀ ಗಾತ್ರದ ಕಮರ್ಷಿಯಲ್ ವಾಹನಗಳಿಗೆ ಈ ನಿಯಮವು ಅನ್ವಯವಾಗುತ್ತದೆ.
ವಾಹನಗಳನ್ನು ಮರುಪಡೆಯುವ ಸಂಪೂರ್ಣ ವೆಚ್ಚವನ್ನು ಕಂಪನಿಗಳು ಭರಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿದೆ. 6 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಅಥವಾ 1 ಲಕ್ಷಕ್ಕಿಂತ ಹೆಚ್ಚಿನ ನಾಲ್ಕು ಚಕ್ರ ವಾಹನಗಳನ್ನು ಮರುಪಡೆಯುವ ಕಂಪನಿಗಳಿಗೆ ದೋಷಯುಕ್ತ ಉತ್ಪನ್ನಗಳನ್ನು ಮಾರಾಟ ಮಾಡಿದ ಕಾರಣಕ್ಕೆ ರೂ.1 ಕೋಟಿವರೆಗೆ ದಂಡ ವಿಧಿಸಲಾಗುತ್ತದೆ.