Just In
- 8 min ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 2 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 2 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ಸಾರ್ವಕಾಲಿಕ ದಾಖಲೆ ಕಾಣುತ್ತಿರುವ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಿಂದಾಗಿ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ನಿಯಂತ್ರಣ ತಪ್ಪಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಗ್ಗಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಣಯ ಪ್ರಕಟಿಸಿದೆ.
ದಿನಂಪ್ರತಿ ಹೆಚ್ಚುತ್ತಿರುವ ಇಂಧನ ಬೆಲೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂಧನಗಳ ಮೇಲೆ ಅಬಕಾರಿ ಸುಂಕ(Excise Duty) ಪ್ರಮಾಣವನ್ನು ಕಡಿತ ಮಾಡಿದೆ. ಅಬಕಾರಿ ಸುಂಕ ಇಳಿಕೆ ಮಾಡಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಹೊಸ ದರ ಇಂದು ಮಧ್ಯರಾತ್ರಿಯಿಂದಲೇ ಅಧಿಕೃತವಾಗಿ ಜಾರಿಯಾಗಿದೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲೆ ರೂ. 8 ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ರೂ. 6 ಇಳಿಕೆ ಮಾಡಿದ್ದು, ಇದರಿಂದ ಪೆಟ್ರೋಲ್ ಪ್ರತಿ ಲೀಟರ್ಗೆ ರೂ.9.50 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ ರೂ.7 ಇಳಿಕೆಯಾಗಲಿದೆ.
ಸದ್ಯ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 111.09 ಪೈಸೆ ಮತ್ತು ಡೀಸೆಲ್ ಬೆಲೆ ರೂ. 94.79 ಪೈಸೆಗೆ ಮಾರಾಟಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಅಬಕಾರಿ ಸುಂಕ ಇಳಿಕೆ ನಂತರ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ. 101.59 ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ರೂ. 87.79 ಪೈಸೆಗೆ ಇಳಿಕೆಯಾಗಲಿದೆ.
ಇಂಧನ ಮೇಲಿನ ಅಬಕಾರಿ ಸುಂಕ ಕಡಿತಯಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ ಒಂದು ಲಕ್ಷ ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದ್ದು, ಅಬಕಾರಿ ಸುಂಕ ಇಳಿಕೆಯಿಂದ ತೆರಿಗೆದಾರರು, ಮಧ್ಯಮ ವರ್ಗ ಮತ್ತು ಬಡತನ ರೇಖೆಯಲ್ಲಿರುವವರಿಗೆ ಸಹಾಯವಾಗಲಿದೆ ಎನ್ನಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರಣಿ ಟ್ವಿಟ್ ಮಾಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆಯಿಂದ ಕೇವಲ ವಾಹನ ಮಾಲೀಕರಿಗೆ ಮಾತ್ರವಲ್ಲ ವಾಹನಗಳ ನಿರ್ವಹಣಾ ವೆಚ್ಚ ಹೆಚ್ಚಳದಿಂದ ಜನಸಾಮಾನ್ಯರಿಗೂ ಕೂಡಾ ಸಾಕಷ್ಟು ಹೊರೆಯಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿ ನಿರಂತರ ಒತ್ತಡ ನಡುವೆ ಕೇಂದ್ರ ಸರ್ಕಾರವು ಇದೀಗ ಮಹತ್ವದ ನಿರ್ಣಯ ಪ್ರಕಟಿಸಿದೆ.
ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತೈಲ ಬೆಲೆಯ ಸಮರದಿಂದಾಗಿ ದುಬಾರಿಯಾಗುತ್ತಿರುವ ಇಂಧನ ಬೆಲೆಯನ್ನು ನಿಯಂತ್ರಿಸಲು ಹಲವು ಹೊಸ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರವು ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣವನ್ನು ಹಂತ-ಹಂತವಾಗಿ ಹೆಚ್ಚಿಸುತ್ತಿದೆ.
ಪೆಟ್ರೋಲ್ ದರ ಇಳಿಕೆಗಾಗಿ 2025ರ ವೇಳೆಗೆ ಪೆಟ್ರೋಲ್ನಲ್ಲಿ ಎಥೆನಾಲ್ ಪ್ರಮಾಣವನ್ನು ಶೇ.20 ಹೆಚ್ಚಿಸುವ ಗುರಿ ಹೊಂದಿದ್ದು, ಎಥೆನಾಲ್ ಮಿಶ್ರಣ ಪ್ರಮಾಣವನ್ನು ಹಂತ-ಹಂತವಾಗಿ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರವು ಇದೀಗ ಮೊದಲ ಹಂತದ ಅವಧಿಗೂ ಮುನ್ನ ಶೇ.10 ಎಥೆನಾಲ್ ಮಿಶ್ರಣದ ಗುರಿಯನ್ನು ತಲುಪಿದೆ.
ಯೋಜನೆಯ ಪ್ರಕಾರ 2022ರ ಕೊನೆಯಲ್ಲಿ ಶೇ.5 ರಷ್ಟು ಎಥೆನಾಲ್ ಮಿಶ್ರಣ ಮಾಡುವ ಗುರಿಹೊಂದಲಾಗಿತ್ತು. ಆದರೆ ನಿಗದಿತ ಅವಧಿಗೂ ಮುನ್ನವೇ ಎಥೆನಾಲ್ ಪ್ರಮಾಣದ ಮಿಶ್ರಣವನ್ನು ಮೇ ಆರಂಭದಲ್ಲಿಯೇ ಗುರಿ ತಲುಪಲಾಗಿದ್ದು, ಈ ವರ್ಷಾಂತ್ಯಕ್ಕೆ ಇದರ ಪ್ರಮಾಣವು ಶೇ.12ಕ್ಕೆ ಹೆಚ್ಚಳವಾಗಬಹುದಾಗಿದೆ.
ಹೆಚ್ಚುತ್ತಿರುವ ಪೆಟ್ರೋಲ್ ಬೆಲೆ ಇಳಿಕೆ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಗುರಿಸಾಧನೆಯೊಂದಿಗೆ ಸರ್ಕಾರವು ಮುಂದಿನ ಅಕ್ಟೋಬರ್ ವೇಳೆಗೆ ಪೆಟ್ರೋಲ್ ಮೇಲಿನ ಹಸಿರು ತೆರಿಗೆ ಇಳಿಕೆಯನ್ನು ಪ್ರತಿ ಲೀಟರ್ಗೆ ರೂ.2 ರಷ್ಟು ಇಳಿಕೆ ಮಾಡಬಹುದಾಗಿದೆ.
ದೇಶದಲ್ಲಿ ಎಥೆನಾಲ್ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ತೈಲ ಸಚಿವಾಲಯ ಮತ್ತು ಸರ್ಕಾರದ ನೀತಿ ಆಯೋಗವು ಜಂಟಿಯಾಗಿ ಸಿದ್ಧಪಡಿಸಿದ ಮಿಶ್ರಣದ ಮಾರ್ಗಸೂಚಿಯಂತೆ 2022ರ ಅಂತ್ಯದ ವೇಳೆಗೆ ಶೇ. 5 ರಷ್ಟು ಮತ್ತು 2025ರ ವೇಳೆಗೆ ಶೇ.20 ರಷ್ಟು ಮಿಶ್ರಣ ಮಾಡುವ ಗುರಿಯನ್ನು ಹೊಂದಿತ್ತು.
ಇದೀಗ ನಿಗದಿತ ಅವಧಿಗೂ ಮುನ್ನ ಎಥೆನಾಲ್ ಮಿಶ್ರಣ ಪ್ರಮಾಣವು ಹೆಚ್ಚಳವಾಗಿರುವುದರಿಂದ ಮುಂಬರುವ ಕೇಂದ್ರದ ಚಳಿಗಾಲ ಅಧಿವೇಶನದ ವೇಳೆ ಹೊಸ ತೆರಿಗೆ ಕಡಿತ ಕುರಿತಂತೆ ಅಧಿಕೃತ ಸುತ್ತೋಲೆ ಹೊರಡಿಸಲಿರುವ ಕೇಂದ್ರ ಸರ್ಕಾರವು ಪೆಟ್ರೋಲ್ ಹೊರೆಯನ್ನು ತಗ್ಗಿಸಲಿದೆ.
ಪೆಟ್ರೋಲ್ನಲ್ಲಿ ಶೇ.20 ರಷ್ಟು ಎಥೆನಾಲ್ ಮಿಶ್ರಣದ ಮೂಲಕ ಕೇಂದ್ರ ಸರ್ಕಾರವು ತೈಲ ಆಮದು ವಹಿವಾಟಿನಲ್ಲಿ ವಾರ್ಷಿಕವಾಗಿ 5 ಬಿಲಿಯನ್ ಡಾಲರ್(ರೂ.30,000 ಕೋಟಿ ರೂ.ಗಿಂತ ಹೆಚ್ಚು) ಉಳಿತಾಯ ಮಾಡಲಿದೆ.
ಇದರೊಂದಿಗೆ ಕೇಂದ್ರ ಸರ್ಕಾರವು 2030ರ ವೇಳೆಗೆ ಶೇ.5 ರಷ್ಟು ಜೈವಿಕ ಡೀಸೆಲ್ ಅನ್ನು ಡೀಸೆಲ್ನೊಂದಿಗೆ ಮಿಶ್ರಣ ಮಾಡುವ ಗುರಿಯನ್ನು ಹೊಂದಲಾಗಿದ್ದು, ಇಂಧನ ಪರಿವರ್ತನೆ ಮತ್ತು ಹವಾಮಾನ ಕ್ರಿಯಾ ಯೋಜನೆಗಳ ಭಾಗವಾಗಿ ಶುದ್ಧ ಇಂಧನಗಳ ಅಳವಡಿಕೆಯನ್ನು ವೇಗಗೊಳಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ಎಥೆನಾಲ್ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ವಿವಿಧ ಮೂಲಗಳ ಮೇಲೆ ಹೆಚ್ಚಿನ ಹೂಡಿಕೆ ಮಾಡುತ್ತಿದ್ದು, ಹೊಸ ಗುರಿಸಾಧನೆಗೆ ಕನಿಷ್ಠ 4 ಬಿಲಿಯನ್ ಲೀಟರ್ನಷ್ಟು ಎಥೆನಾಲ್ ಉತ್ಪಾದನೆಗಾಗಿ ಎಲ್ಲ ಅಗತ್ಯ ಕ್ರಮಕೈಗೊಳ್ಳಲಾಗಿದೆ.