Just In
- 1 hr ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- 2 hrs ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 2 hrs ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 2 hrs ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2023ರಿಂದ ಭಾರತದಲ್ಲಿ ಮಾರಾಟಗೊಳ್ಳಲಿದೆ ಜೈವಿಕ ಇಂಧನ ಒಳಗೊಂಡ ಇ20 ಪೆಟ್ರೋಲ್ ಮಾದರಿ
ಭಾರತದಲ್ಲಿ ಹೊಸ ವಾಹನಗಳ ಸಂಖ್ಯೆ ಹೆಚ್ಚಿದಂತೆ ಇಂಧನ ಬಳಕೆಯ ಪ್ರಮಾಣವು ಕೂಡಾ ಸಾಕಷ್ಟು ಹೆಚ್ಚಳವಾಗುತ್ತಿದ್ದು, ಪೆಟ್ರೋಲ್ ಆಮದನ್ನು ಕಡಿಮೆ ಮಾಡಲು ಭಾರತ ಸರ್ಕಾರವು ದೇಶದಲ್ಲಿ ಜೈವಿಕ ಇಂಧನ ಉತ್ಪಾದನೆಯನ್ನು ಉತ್ತೇಜಿಸುತ್ತಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರಮುಖ ಇಂಧನ ಪೂರೈಕೆ ಕಂಪನಿಗಳು ಇ10(E10) ಪೆಟ್ರೋಲ್ ಮಾದರಿಯನ್ನು ಮಾರಾಟ ಮಾಡಲಾಗುತ್ತಿದ್ದು, ಇದರಲ್ಲಿ ಪ್ರತಿಶತ 90 ರಷ್ಟು ಪೆಟ್ರೋಲ್ ಮತ್ತು ಶೇ. 10 ರಷ್ಟು ಜೈವಿಕ ಇಂಧನ ಅಂದರೆ ಎಥೆನಾಲ್ ಮಿಶ್ರಣ ಹೊಂದಿರುತ್ತದೆ.
ಆದರೆ 2023ರ ವೇಳೆಗೆ ಭಾರತ ಸರ್ಕಾರವು ಎಥೆನಾಲ್ ಮಿಶ್ರಣ ಪ್ರಮಾಣವನ್ನು ಶೇಕಡಾ 20ಕ್ಕೆ ಹೆಚ್ಚಿಸುವ ಯೋಜನೆಯಲ್ಲಿದ್ದು, ಶೇ. 20 ರಷ್ಟು ಎಥೆನಾಲ್ ಹೊಂದಿರುವ ಪೆಟ್ರೋಲ್ ಮಾದರಿಯನ್ನು ಇ20(E20) ಮಾದರಿಯಾಗಿ ಮಾರಾಟ ಮಾಡಲಾಗುತ್ತದೆ.
ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಮುಂದಿನ ವರ್ಷ 2023ರ ಏಪ್ರಿಲ್ನಿಂದಲೇ ಇ20 ಇಂಧನ ಮಾದರಿಯನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದ್ದು, ಈ ಇಂಧನವು ಶೇ.80 ರಷ್ಟು ಪೆಟ್ರೋಲ್ ಮತ್ತು ಶೇ. 20 ರಷ್ಟು ಎಥೆನಾಲ್ ಮಿಶ್ರಣವನ್ನು ಹೊಂದಿರುತ್ತದೆ.
ಇ20 ಪೆಟ್ರೋಲ್ ಮಾದರಿಯನ್ನು ಪರಿಚಯಿಸುತ್ತಿರುವ ಕುರಿತಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾತನಾಡಿದ್ದು, ಅದೇ ಸಮಯದಲ್ಲಿ ಕೇಂದ್ರ ಸಚಿವರು ಎಥೆನಾಲ್ ಪ್ರಮಾಣವನ್ನು 2025ರ ವೇಳೆಗೆ ಶೇ. 50ಕ್ಕೆ ಹೆಚ್ಚಿಸುವ ಸುಳಿವು ನೀಡಿದ್ದಾರೆ.
ಇ10 ಪೆಟ್ರೋಲ್ ಮಾದರಿಯಲ್ಲಿ ಶೇ. 10 ರಷ್ಟು ಎಥೆನಾಲ್ ಮಿಶ್ರಣದಿಂದಾಗಿ ಭಾರತವು ಪ್ರತಿ ವರ್ಷ 41,500 ಕೋಟಿ ರೂಪಾಯಿ ಆದಾಯವನ್ನು ಉಳಿಸುತ್ತಿದೆ ಎಂದಿರುವ ಕೇಂದ್ರ ಸಚಿವರು 2.7 ಮಿಲಿಯನ್ ಟನ್ ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿಮೆಯಾಗಿದೆ ಎಂದಿದ್ದಾರೆ.
ಹಾಗೆಯೇ ಶೇ. 20 ರಷ್ಟು ಎಥೆನಾಲ್ ಅನ್ನು ಮಿಶ್ರಣ ಮಾಡುವುದರಿಂದ ಪೆಟ್ರೋಲ್ ಆಮದಿನಲ್ಲಿ ಪ್ರತಿ ವರ್ಷ 4 ಬಿಲಿಯನ್ ಡಾಲರ್ ಉಳಿತಾಯ ಮಾಡಬಹುದೆಂದು ಅಂದಾಜಿಸಲಾಗಿದೆ.
ವಿಶ್ವಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಪರಿಸರ ಸ್ನೇಹ ವಾಹನಗಳ ಬಳಕೆಯನ್ನು ಹೆಚ್ಚಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಎಥೆನಾಲ್ ಬಳಕೆಗಾಗಿ ಕೇಂದ್ರ ಸರ್ಕಾರವು ಹೆಚ್ಚಿನ ಗಮನಹರಿಸುತ್ತಿದೆ.
ವಿಶ್ವ ಜೈವಿಕ ಇಂಧನ ದಿನಾಚರಣೆಯ ಅಂಗವಾಗಿ ನಿನ್ನೆಯಷ್ಟೇ ಕೇಂದ್ರ ಸರ್ಕಾರವು ಎಥೆನಾಲ್ ಉತ್ಪಾದನೆ ಹೆಚ್ಚಳಕ್ಕಾಗಿ ಇಂದು ಮಹತ್ವದ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದು, ಹರಿಯಾದ ಪಾಣಿಪತ್ನಲ್ಲಿ ನಿರ್ಮಿಸಲಾದ ಎರಡನೇ ತಲೆಮಾರಿನ ಎಥೆನಾಲ್ ಉತ್ಪಾದನಾ ಸ್ಥಾವರವನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಕ್ಕೆ ಸಮರ್ಪಿಸಿದರು.
ಹೊಸ ಘಟಕದ ನಿರ್ಮಾಣಕ್ಕಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಕಂಪನಿಯು ರೂ. 900 ಕೋಟಿ ವೆಚ್ಚದಲ್ಲಿ ಈ ಜೈವಿಕ ಇಂಧನ ಘಟಕವನ್ನು ನಿರ್ಮಿಸಿದ್ದು, ದೇಶದಲ್ಲಿ ಜೈವಿಕ ಇಂಧನಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ಪ್ರಯತ್ನಗಳನ್ನು ಬಲಪಡಿಸುವ ಉದ್ದೇಶದಿಂದ ಈ ಹೊಸ ಸ್ಥಾವರವನ್ನು ಸ್ಥಾಪಿಸಲಾಗಿದೆ.
ಹೊಸ ಜೈವಿಕ ಇಂಧನ ಉತ್ಪಾದನಾ ಘಟಕದಿಂದ ಕಂಪನಿಯು ಪ್ರತಿ ವರ್ಷ 30 ಮಿಲಿಯನ್ ಲೀಟರ್ಗೂ ಅಧಿಕ ಜೈವಿಕ ಇಂಧನವನ್ನು ಉತ್ಪಾದಿಸಲಿದ್ದು, ಕೃಷಿ-ಬೆಳೆ ಅವಶೇಷಗಳಿಂದಲೇ ಎಥೆನಾಲ್ ತಯಾರಿಕೆ ಮಾಡಲಾಗುತ್ತದೆ. ಇದು ರೈತರನ್ನು ಸಬಲಗೊಳಿಸುವುದಲ್ಲದೇ ಹೊಸ ಉದ್ಯಮ ಕಾರ್ಯಾಚರಣೆಯು ರೈತರಿಗೂ ಹೆಚ್ಚುವರಿ ಆದಾಯವನ್ನು ಗಳಿಸುವ ಅವಕಾಶವನ್ನು ಒದಗಿಸುತ್ತದೆ.
ಹೊಸ ಘಟಕ ಉತ್ಪಾದನಾ ಆರಂಭಿಸಿದ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಪ್ರಕೃತಿಯನ್ನು ಆರಾಧಿಸುವ ನಮ್ಮ ದೇಶದಲ್ಲಿ ಜೈವಿಕ ಇಂಧನವು ಪ್ರಕೃತಿಯನ್ನು ರಕ್ಷಿಸುವ ಕೀಲಿಯಾಗಿದೆ. ನಮ್ಮ ರೈತರು ಅದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲಿದ್ದು, ನಮಗೆ ಜೈವಿಕ ಇಂಧನ ಎಂದರೆ ಪರಿಸರವನ್ನು ಉಳಿಸುವ ಹಸಿರು ಇಂಧನ ಎಂದಿದ್ದಾರೆ.
ಜೊತೆಗೆ ಹೊಸ ಜೈವಿಕ ಇಂಧನ ಸ್ಥಾವರಗಳು ಸ್ಥಾಪಿಯಾದರೇ ಇದು ಹೊಸ ಉದ್ಯೋಗ ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು. ಎಥೆನಾಲ್ ಉತ್ಪಾದನೆಯಿಂದ ರೈತರು ಹೆಚ್ಚಿನ ಪ್ರಯೋಜನ ಪಡೆಯಲಿದ್ದು, ಇದರಿಂದ ಮಾಲಿನ್ಯದ ಸವಾಲುಗಳು ಕಡಿಮೆಯಾಗಲಿವೆ ಎಂದಿದ್ದಾರೆ.
ಪ್ರತಿ ವರ್ಷ 30 ಮಿಲಿಯನ್ ಲೀಟರ್ ಜೈವಿಕ ಇಂಧನವನ್ನು ಉತ್ಪಾದಿಸಲಾಸಲಾಗತ್ತಿದ್ದು, ಸ್ಥಳೀಯ ತಂತ್ರಜ್ಞಾನದ ಆಧಾರದ ಮೇಲೆ, ಈ ಯೋಜನೆಯು ವಾರ್ಷಿಕವಾಗಿ ಸುಮಾರು ಎರಡು ಲಕ್ಷ ಟನ್ ಭತ್ತದ ಹುಲ್ಲು ಬಳಸಿ ವಾರ್ಷಿಕವಾಗಿ ಸುಮಾರು 30 ಮಿಲಿಯನ್ ಲೀಟರ್ ಜೈವಿಕ ಇಂಧನವನ್ನು ಅಂದರೆ ಎಥೆನಾಲ್ ಅನ್ನು ಉತ್ಪಾದಿಸುತ್ತದೆ.
ಇದಲ್ಲದೆ ಕೃಷಿ-ಬೆಳೆ ಅವಶೇಷಗಳನ್ನು ಸಹನ ಎಥೆನಾಲ್ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದು ಇದು ರೈತರನ್ನು ಸಬಲಗೊಳಿಸುತ್ತದೆ ಮತ್ತು ಹೆಚ್ಚುವರಿ ಆದಾಯವನ್ನು ಗಳಿಸುವ ಅವಕಾಶವನ್ನು ಒದಗಿಸುತ್ತದೆ. ಎಥೆನಾಲ್ ತಯಾರಿಕೆಗಾಗಗಿ ಇನ್ಮುಂದೆ ಅನಾವಶ್ಯಕವಾಗಿ ಸುಡಲಾಗುವ ಭತ್ತದ ಒಣಹುಲ್ಲನ್ನು ವ್ಯಾಪಕ ಬಳಕೆಯಾಗುವುದದರಿಂದ ಸುಡುವ ಪ್ರಕ್ರಿಯೆ ಕಡಿಮೆ ಮಾಡುತ್ತದೆ. ಭತ್ತದ ಒಣಹುಲ್ಲಿನ ಕೊಯ್ಲು, ಸಾಗಣೆ, ಸಂಗ್ರಹಣೆ ಇತ್ಯಾದಿಗಳಿಗೆ ಸರಬರಾಜು ಸರಪಳಿಯಲ್ಲಿ ಪರೋಕ್ಷ ಉದ್ಯೋಗವನ್ನು ಸೃಷ್ಟಿಸುತ್ತದೆ.