Just In
- 14 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 14 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 15 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 17 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಭಿನ್ನ ರೀತಿಯ ಪ್ರತಿಭಟನೆಗೆ ಮುಂದಾದ ಲಾರಿ ಚಾಲಕರು
ಕರೋನಾ ವೈರಸ್ ಹರಡುವುದನ್ನು ತಡೆಯಲು ಮಾರ್ಚ್ 24ರಿಂದ ಭಾರತದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಯಿತು. ಈ ಅವಧಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಯಿತು.
ಬಸ್, ರೈಲು, ವಿಮಾನ, ಆಟೋ ಹಾಗೂ ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಇವುಗಳ ಜೊತೆಗೆ ಖಾಸಗಿ ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರವನ್ನು ಸಹ ನಿರ್ಬಂಧಿಸಲಾಯಿತು. ನಿಯಮ ಉಲ್ಲಂಘಿಸಿ ಹೊರ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ಈಗ ಲಾಕ್ಡೌನ್ ನಿಯಮಗಳನ್ನು ಸಡಿಲಿಸಲಾಗಿದ್ದು, ವಾಹನಗಳ ಸಂಚಾರಕ್ಕೆ ಹಂತ ಹಂತವಾಗಿ ಅನುಮತಿ ನೀಡಲಾಗಿದೆ.
ಆದರೆ ಇನ್ನೂ ಹಲವು ನಗರಗಳಲ್ಲಿ ಖಾಸಗಿ ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಚಲಾಯಿಸಲು ನಿರ್ಬಂಧಗಳಿವೆ. ಕರೋನಾ ವೈರಸ್ನಿಂದ ಹೆಚ್ಚು ತತ್ತರಿಸಿರುವ ಮುಂಬೈ ಹಾಗೂ ಚೆನ್ನೈನಂತಹ ನಗರಗಳಲ್ಲಿ ಈಗಲೂ ಸಹ ಪ್ರತಿದಿನವೂ ಬಸ್ಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಟ್ರಕ್ ಚಾಲಕರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕರೋನಾ ವೈರಸ್ ಸೋಂಕಿನ ಅಟ್ಟಹಾಸದ ನಡುವೆಯೂ ಹಾಲು, ತರಕಾರಿ ಹಾಗೂ ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುತ್ತಿದ್ದಾರೆ.
ಟ್ರಕ್ ಚಾಲಕರಿಗೆ ಆರೋಗ್ಯ ವಿಮೆ ನೀಡುವಂತೆ ಒತ್ತಾಯಿಸಿ ಇಂದು ಜುಲೈ 1 ಟ್ರಕ್ ಚಾಲಕರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯ ಅಂಗವಾಗಿ ಎಲ್ಲಾ ಟ್ರಕ್ ಚಾಲಕರು ಇಂದು ಮಧ್ಯಾಹ್ನದಿಂದ 1 ವಾರಗಳ ಕಾಲ 1 ನಿಮಿಷ ಏಕಕಾಲದಲ್ಲಿ ಹಾರ್ನ್ ಮಾಡಲಿದ್ದಾರೆ.
MOST READ: ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಸರ್ಕಾರದ ಗಮನ ಸೆಳೆಯಲು ಈ ರೀತಿ ವಿಭಿನ್ನ ಪ್ರತಿಭಟನೆ ನಡೆಸಲಿದ್ದಾರೆ. ಎಲ್ಲಾ ಟ್ರಕ್ ಚಾಲಕರಿಗೆ ವಿಮೆ ನೀಡಬೇಕೆಂದು ಒತ್ತಾಯಿಸಿ ವಿವಿಧ ಟ್ರಕ್ ಮಾಲೀಕರು ಹಾಗೂ ಸಾರಿಗೆ ಸಂಘಗಳು ಜಂಟಿಯಾಗಿ ಹೋರಾಟವನ್ನು ನಡೆಸುತ್ತಿವೆ.
ಜುಲೈ 1ರಿಂದ ಆರಂಭವಾಗುವ ಈ ಪ್ರತಿಭಟನೆ ಒಂದು ವಾರಗಳ ಕಾಲ ನಡೆಯಲಿದೆ. ಕರೋನಾ ವೈರಸ್ಗೆ ತುತ್ತಾಗಬಹುದೆಂಬ ಭಯದಿಂದ ಅನೇಕ ಟ್ರಕ್ ಚಾಲಕರು ಕೆಲಸಕ್ಕೆ ಮರಳಲು ಹಿಂಜರಿಯುತ್ತಿದ್ದಾರೆ ಎಂದು ಸಾರಿಗೆ ಯೂನಿಯನ್ ಅಧಿಕಾರಿಗಳು ಹೇಳಿದ್ದಾರೆ.
MOST READ: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಕುಟುಂಬ ಸದಸ್ಯರಿಗೂ ಕರೋನಾ ವೈರಸ್ ಹರಡಬಹುದೆಂಬ ಕಾರಣಕ್ಕೆ ಹಲವು ಟ್ರಕ್ ಚಾಲಕರು ಟ್ರಕ್ ಚಾಲನೆಗೆ ಮುಂದಾಗುತ್ತಿಲ್ಲ. ತಮಗೆ ಏನಾದರೂ ತೊಂದರೆಯಾದರೆ ಕುಟುಂಬದ ಗತಿ ಏನು ಎಂಬ ಭಯ ಅವರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಟ್ರಕ್ ಚಾಲಕರಿಗೆ ಆರೋಗ್ಯ ವಿಮೆ ನೀಡುವಂತೆ ಒತ್ತಾಯಿಸಲಾಗುತ್ತಿದೆ.
ಭಾರತದಲ್ಲಿ ಸದ್ಯಕ್ಕೆ 8 ಮಿಲಿಯನ್ ಟ್ರಕ್ಗಳಿವೆ. ಇವುಗಳಲ್ಲಿ 3 ಮಿಲಿಯನ್ ಟ್ರಕ್ಗಳು ಇನ್ನೂ ಸಂಚಾರವನ್ನು ಆರಂಭಿಸಿಲ್ಲ. ಟ್ರಕ್ ಉದ್ಯಮವು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆಯನ್ನು ಆರಂಭಿಸದ ಕಾರಣಕ್ಕೆ ಈ ಟ್ರಕ್ಗಳು ಇನ್ನೂ ಸಂಚಾರವನ್ನು ಆರಂಭಿಸಿಲ್ಲ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.