ದೇವನಹಳ್ಳಿ ಭೀಕರ ಅಪಘಾತಕ್ಕೆ 6 ವಿದ್ಯಾರ್ಥಿಗಳು ಸೇರಿ 7 ಜನ ಬಲಿ, ಇಲ್ಲಿದೆ ಮಾಹಿತಿ... Bengaluru Road Accident

By Malathesha M

ಬೆಂಗಳೂರು: ಹೊಸಕೋಟೆ ಹಾಗೂ ದಾಬಸ್‌ಪೇಟೆಯ ಸ್ಯಾಟಲೈಟ್ ರಿಂಗ್ ರೋಡ್ (ಎಸ್‌ಟಿಆರ್‌ಆರ್‌) ಮಾರ್ಗದಲ್ಲಿ, ಸತ್ಯವಾರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 7 ಜನರು ಮೃತಪಟ್ಟಿದ್ದಾರೆ. ಇನ್ನು ಈ ಭೀಕರ ಅಪಘಾತದಲ್ಲಿ 1 ಟ್ರಕ್, ಎಕ್ಸ್‌ಯುವಿ ಕಾರು & ಒಂದು ಬೈಕ್ ನಜ್ಜುಗುಜ್ಜಾಗಿ ಹೋಗಿವೆ. ಹೆದ್ದಾರಿಯಲ್ಲಿ ದಿಢೀರ್ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಡಿಕ್ಕಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ, ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಬೆಂಗಳೂರು ಹೊರವಲಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಸಂಭವಿಸಿರುವ ಈ ದುರಂತಕ್ಕೆ ಮೊದಲು ಎಕ್ಸ್‌ಯುವಿ ಕಾರು ಡಿಕ್ಕಿಯಾಗಿದ್ದೇ ಕಾರಣ ಎನ್ನಲಾಗಿದೆ. ಹೀಗೆ ಹೆದ್ದಾರಿಯಲ್ಲಿ ಎಕ್ಸ್‌ಯುವಿ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಟ್ರಕ್‌ಗೆ ಹೋಗಿ ಗುದ್ದಿದೆ. ಇಲ್ಲಿ ಅತಿವೇಗದ ಚಾಲನೆಯಿಂದ ಈ ಭೀಕರ ಅಪಘಾತವು ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ನಿಖರ ಕಾರಣಕ್ಕಾಗಿ ತನಿಖೆ ಆರಂಭ ಆಗಿದೆ. ಭೀಕರ ಅಪಘಾತದಲ್ಲಿ ಒಟ್ಟು 6 ವಿದ್ಯಾರ್ಥಿಗಳು ಸೇರಿ ಒಟ್ಟು 7 ಜನ ಬಲಿಯಾಗಿದ್ದಾರೆ. ಮೃತದೇಹಗಳನ್ನು ಕೂಡಲೇ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

6 ವಿದ್ಯಾರ್ಥಿಗಳು ಮತ್ತು ಉದ್ಯೋಗಿ ಬಲಿ

ಬೆಂಗಳೂರು ಹೊರವಲಯದ ಹೆದ್ದಾರಿ, ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಸಾಕ್ಷಿಯಾಗಿತ್ತು. ಹೊಸಕೋಟೆ ಹಾಗೂ ದಾಬಸ್‌ಪೇಟೆ ಹೆದ್ದಾರಿಯ ಕಳಪೆ ನಿರ್ಮಾಣ ಮತ್ತು ವಿನ್ಯಾಸದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೃತರಲ್ಲಿ ಬೈಕ್ ಸವಾರ ಸ್ಥಳೀಯರಾಗಿದ್ದು ಕಾರಿನಲ್ಲಿ ಇದ್ದ ಉಳಿದವರು ಬೆಂಗಳೂರಿನ ಕೊತ್ತನೂರು ಮೂಲದವರು ಎನ್ನಲಾಗಿದೆ. ಅಪಘಾತಕ್ಕೆ ಅತಿವೇಗ ಪ್ರಮುಖ ಕಾರಣ ಎಂಬುದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಪಿಯು ವಿದ್ಯಾರ್ಥಿಗಳ ಜಾಲಿ ರೈಡ್ ಅಪಘಾತಕ್ಕೆ ಕಾರಣ ಆಗಿದೆಯಾ? ಎಂಬ ಪ್ರಶ್ನೆ ಹುಟ್ಟುಹಾಕಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಅಶ್ವಿನ್, ಅಹನ್, ಆಯನ್, ಅಲಿ, ಭರತ್, ಈಶನ್ ಎಂದು ಗುರುತಿಸಲಾಗಿದೆ. 6 ವಿದ್ಯಾರ್ಥಿಗಳೂ ಸೇರಿ, ಬೈಕ್ ಸವಾರ ಸಫಲ್ ಕಂಪನಿಯ ಉದ್ಯೋಗಿ ಗಗನ್ ಕೂಡ ಅಪಘಾತಕ್ಕೆ ಬಲಿಯಾಗಿದ್ದಾರೆ.

ಮಕ್ಕಳನ್ನು ಕಳೆದುಕೊಂಡ ಪೋಷಕರ ಕಣ್ಣೀರು

ಅಪಘಾತ ನಡೆದ ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದ ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಹಾಗೂ ಪೊಲೀಸರ ತಂಡ, ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪೋಷಕರಿಗೆ ಬೆಳ್ಳಂಬೆಳಗ್ಗೆ ಈ ಸಾವಿನ ಸುದ್ದಿ ತಲುಪಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇತ್ತ ಏನೂ ತಪ್ಪು ಮಾಡದೆ ತನ್ನ ಪಾಡಿಗೆ ತಾನು ಕೆಲಸಕ್ಕೆ ಹೊರಟಿದ್ದ ಉದ್ಯೋಗಿ ಕೂಡ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಈ ಭೀಕರ ಅಪಘಾತ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಕೂಡ ಸುದ್ದಿಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Credit: Oneindia

More from DriveSpark

Article Published On: Friday, February 13, 2026, 10:26 [IST]
English summary
Bengaluru Road Accident And Seven people No More After A Road Crash Near Hoskote
Read more on notification
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+