Just In
- 42 min ago Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- 12 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 14 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 14 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- News Bengaluru-Mysuru Expressway: ಪ್ರಯಾಣಿಕರೇ ಗಮನಿಸಿ, ಏಪ್ರಿಲ್ 18 & 19ರಂದು ಈ ಮಾರ್ಗಗಳಲ್ಲಿ ಬರುವ ಮುನ್ನ ಎಚ್ಚರ..
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Movies ಅನುಷ್ಕಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಯಾಕೆ ಸಿನಿಮಾ ಮಾಡ್ತಿಲ್ಲಾ? ನಿರ್ದೇಶಕರಿ ಕಂಡೀಷನ್ ಹಾಕ್ತಿದ್ದಾರಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಂಬ್ಯುಲೆನ್ಸ್ ಗೆ ದಾರಿ ತೋರಿಸಿ ಶೌರ್ಯ ಪ್ರಶಸ್ತಿ ಪಡೆದ 12 ವರ್ಷದ ಬಾಲಕ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹವು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಜನರ ಆಸ್ತಿ ಹಾಗೂ ಜೀವಕ್ಕೆ ದೊಡ್ಡ ವಿಪತ್ತನ್ನು ತಂದೊಡ್ಡಿದೆ. ಸದ್ಯಕ್ಕೆ ದಕ್ಷಿಣ ಭಾರತದ ಬಹುತೇಕ ಭಾಗಗಳು ಪ್ರವಾಹಕ್ಕೆ ಸಿಲುಕಿವೆ.
ಜನರನ್ನು ರಕ್ಷಿಸಲು ಹಾಗೂ ಅವಶ್ಯಕತೆ ಇರುವ ಜನರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ತುರ್ತು ಸೇವೆಗಳು ಹಗಲು ಇರುಳೆನ್ನದೇ ಕಾರ್ಯ ನಿರ್ವಹಿಸುತ್ತಿವೆ. ಆದರೆ ಕೆಲವು ಭಾಗಗಳಲ್ಲಿ ರಸ್ತೆಗಳು ಮುಳುಗಿರುವುದರಿಂದ ರಕ್ಷಣಾ ಕಾರ್ಯವು ಅಷ್ಟು ಸುಲಭವಾಗಿಲ್ಲ. ಆ ರಸ್ತೆಗಳಲ್ಲಿ ಮನುಷ್ಯರು ಸಹ ನಡೆದುಕೊಂಡು ಹೋಗುವುದು ಅಸಾಧ್ಯವಾಗಿದೆ. ಪ್ರವಾಹದ ನೀರಿನಲ್ಲಿ ನಡೆದುಕೊಂಡು ಹೋಗುತ್ತಿರುವ 12 ವರ್ಷದ ಬಾಲಕನ ವೀಡಿಯೊವೊಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಈ ಬಾಲಕನನ್ನು ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯ ಸರ್ಕಾರವು ಸನ್ಮಾನಿಸಿದೆ. ವೆಂಕಟೇಶ್ ಎಂಬಾತನೇ 12 ವರ್ಷದ ಈ ಬಾಲಕ. ನೀರಿನಿಂದ ಆವೃತ್ತವಾಗಿರುವ ಸೇತುವೆಯನ್ನು ದಾಟಲು ಪರದಾಡುತ್ತಿದ್ದ ಆಂಬ್ಯುಲೆನ್ಸ್ಗೆ ದಡ ತಲುಪಲು ಸಹಾಯ ಮಾಡಿದ ವೆಂಕಟೇಶ್ ರಾತ್ರೋರಾತ್ರಿ ಹೀರೋ ಆಗಿದ್ದಾನೆ.
ತನ್ನ ಸಮಯಪ್ರಜ್ಣೆಯಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದವರ ಪ್ರಾಣ ಕಾಪಾಡಿದ್ದಾನೆ. ಈ ಘಟನೆಯು ಆಗಸ್ಟ್ 10 ರಂದು ರಾಯ್ಚೂರಿನ ದೇವದುರ್ಗದ ಹಿರೇರಾಯನಕುಂಪಿ ಗ್ರಾಮದಲ್ಲಿರುವ ಸೇತುವೆಯ ಬಳಿ ನಡೆದಿದೆ. ಪ್ರವಾಹದಿಂದಾಗಿ ಸೇತುವೆಯ ಮೇಲೆಲ್ಲಾ ನೀರು ನಿಂತಿದೆ.
ಆಂಬ್ಯುಲೆನ್ಸ್ ಚಾಲಕ ಮುಂದಿರುವ ದಾರಿ ಕಾಣದೇ, ಮುಂದೆ ಚಲಿಸದೇ ಹಾಗೆಯೇ ನಿಂತು ಬಿಟ್ಟಿದ್ದಾನೆ. ವರದಿಗಳ ಪ್ರಕಾರ, ಈ ಆಂಬ್ಯುಲೆನ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಮಕ್ಕಳು ಹಾಗೂ ಸತ್ತ ಮಹಿಳೆಯ ಶವವನ್ನು ಹೊತ್ತುಕೊಂಡು ಸೇತುವೆಯನ್ನು ದಾಟಲು ಪ್ರಯತ್ನಿಸುತ್ತಿತ್ತು ಎನ್ನಲಾಗಿದೆ.
ಅಲ್ಲಿಯೇ ಆಟವಾಡುತ್ತಿದ್ದ ಹುಡುಗರನ್ನು ಸೇತುವೆ ದಾಟಬಹುದೇ ಎಂದು ಆಂಬುಲೆನ್ಸ್ ಚಾಲಕ ಕೇಳಿದ್ದಾನೆ. ಯಾವ ಹುಡುಗರು ಮುಂದೆ ಬಂದಿಲ್ಲ. ಆಗ ವೆಂಕಟೇಶ್ ತನ್ನ ಸಮಯಪ್ರಜ್ಣೆಯಿಂದ ನೀರು ನಿಂತಿರುವ ಸೇತುವೆಯ ಮೇಲೆ ನಡೆದು ಕೊಂಡು ಹೋಗಿದ್ದಾನೆ.
ಅವನು ನಡೆದುಕೊಂಡು ಮುಂದೆ ಹೋದಂತೆಲ್ಲಾ ಆಂಬುಲೆನ್ಸ್ ಚಾಲಕನು ಆತನನ್ನು ಹಿಂಬಾಲಿಸಿದ್ದಾನೆ. ಇಡೀ ಘಟನೆಯನ್ನು ರೆಕಾರ್ಡ್ ಮಾಡಲಾಗಿದ್ದು, ಈ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
MOST READ: ಡೀಸೆಲ್ ಕಾರುಗಳನ್ನು ಖರೀದಿಸುವುದಾದರೆ ಈಗಲೇ ಖರೀದಿಸಿ..!
ವೆಂಕಟೇಶ್ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದಾನೆ. ಹಿರಿಯ ಐಎಎಸ್ ಅಧಿಕಾರಿ, ಕ್ಯಾಪ್ಟನ್ ಮಣಿವಣ್ಣನ್ರವರು ಈ ವರ್ಷದ ಶೌರ್ಯ ಪ್ರಶಸ್ತಿಗೆ ವೆಂಕಟೇಶನ ಹೆಸರನ್ನು ಶಿಫಾರಸ್ಸು ಮಾಡುವಂತೆ ಮಕ್ಕಳ ಕಲ್ಯಾಣ ಇಲಾಖೆಗೆ ಸೂಚಿಸಿದ್ದಾರೆ.
MOST READ: ಫಾರ್ಚುನರ್ ಹೊಂದಿರುವ ಭಾರತದ ಸೆಲೆಬ್ರಿಟಿಗಳಿವರು..!
ವೆಂಕಟೇಶನ ಸಾಹಸಕ್ಕಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಆತನನ್ನು ಸನ್ಮಾನಿಸಿದ್ದಾರೆ. ಪ್ರವಾಹದಿಂದಾಗಿ ಹಲವು ರಸ್ತೆಗಳು ಹಾಳಾಗಿವೆ. ಜಲಾವೃತ್ತವಾಗಿರುವ ರಸ್ತೆಗಳಲ್ಲಿ ಚಾಲನೆ ಮಾಡುವ ಪ್ರತಿಯೊಬ್ಬರು ಜಾಗರೂಕರಾಗಿರಬೇಕು.
MOST READ: ಆರ್ಟಿಕಲ್ 370 ರದ್ದಾದ ಬೆನ್ನಲ್ಲೆ ಜಮ್ಮು ಕಾಶ್ಮೀರದಲ್ಲಿ ಶುರುವಾಗಿದೆ ಹೊಸ ಕೈಗಾರಿಕಾ ಕ್ರಾಂತಿ
ಈ ಮೊದಲು, ಮಹೀಂದ್ರಾ ಸ್ಕಾರ್ಪಿಯೋ ಎಸ್ಯುವಿ ಹೆಚ್ಚಿನ ಮಟ್ಟದ ನೀರಿನಿಂದಾಗಿ ಅಂಡರ್ಪಾಸ್ನಲ್ಲಿ ಸಿಲುಕಿಕೊಂಡಿತ್ತು. ಮಳೆಯಿಂದಾಗಿ ಆ ವಾಹನದ ವಿದ್ಯುತ್ ಕೈಕೊಟ್ಟ ಕಾರಣ ವಾಹನದ ಡೋರ್ಗಳು ತೆರೆಯಲು ಸಾಧ್ಯವಾಗದೇ, ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರು ಹೊರಬರಲು ಸಾಧ್ಯವಾಗದೇ ವಾಹನದೊಳಗೆ ಮೃತಪಟ್ಟಿದ್ದರು.
ಮಳೆಯ ಅಬ್ಬರ ಜೋರಾಗಿರುವ ಸಮಯದಲ್ಲಿ ದೊಡ್ಡ ಗಾತ್ರದ ಗುಂಡಿಗಳು ಉಂಟಾಗುತ್ತವೆ. ನೀರು ತುಂಬಿ ಕೊಳ್ಳುವುದರಿಂದ ಗುಂಡಿಗಳು ಕಾಣದೇ ಹೋಗುತ್ತವೆ. ಅಂತಹ ರಸ್ತೆಗಳಲ್ಲಿ ವಾಹನ ಚಲಾಯಿಸುವುದರಿಂದ ವಾಹನಕ್ಕೆ ಅಪಾರ ಪ್ರಮಾಣದ ಹಾನಿಯುಂಟಾಗುತ್ತದೆ.
ನೀರಿನ ಪ್ರವಾಹದಿಂದಾಗಿ ಕೆಲವೊಮ್ಮೆ ರಸ್ತೆಗಳಲ್ಲಿರುವ ಮ್ಯಾನ್ಹೋಲ್ ಕವರ್ಗಳು ಹೊರಬರುತ್ತವೆ. ಅವುಗಳ ಮೂಲಕ ಹಾದುಹೋಗುವ ವಾಹನಗಳಿಗೆ ಅಪಾಯವಾಗುವುದು ಖಚಿತ. ನೀರು ತುಂಬಿರುವ ರಸ್ತೆಗಳಲ್ಲಿ ವಾಹನಗಳು ಸಿಲುಕಿ ಕೊಳ್ಳುತ್ತವೆ.
ಇದು ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ವಾಹನಗಳು ಪ್ರವಾಹಕ್ಕೆ ಸಿಲುಕಿ ರಸ್ತೆಯಲ್ಲಿ ನಿಂತರೆ, ವಾಹನವನ್ನು ಸ್ಟಾರ್ಟ್ ಮಾಡಲು ಪ್ರಯತ್ನ ಪಡಬೇಡಿ, ಇದರಿಂದಾಗಿ ಎಂಜಿನ್ ಶಾಶ್ವತವಾಗಿ ಹಾನಿಗೊಳಗಾಗುವ ಸಾಧ್ಯತೆಗಳಿವೆ.