Just In
- 8 min ago ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- 9 min ago Ather: ಬೆಂಗಳೂರಿನ ಎಥರ್ನಿಂದ ಫ್ಯಾಮಿಲಿ ಇ-ಸ್ಕೂಟರ್ 'ರಿಜ್ಟಾ' ಬುಕ್ಕಿಂಗ್ ಆರಂಭ, ರೂ.999 ಪಾವತಿಸಿದರೆ ಸಾಕು!
- 1 hr ago Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- 1 hr ago 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
Don't Miss!
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Movies "ನನಗೂ ಆರೋಗ್ಯ ತಪ್ಪಿತಲ್ಲ.. ನನ್ನ ಮಗ ಅನಾಥ ಆಗಿಬಿಟ್ಟನಲ್ಲ ಅನಿಸಿತ್ತು" : ರಾಘಣ್ಣ
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ
ಮದುವೆ ಸಂಭ್ರಮಕ್ಕಾಗಿ ಹೊರಟಿದ್ದ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ಜನ ಮೃತಪಟ್ಟು 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಚಹಳ್ಳಿಯ ಬಳಿ ನಡೆದಿದೆ.
ಮದುವೆ ಸಂಭ್ರಮಕ್ಕಾಗಿ ಹೊರಟಿದ್ದ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ಜನ ಮೃತಪಟ್ಟು 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಚಹಳ್ಳಿಯ ಬಳಿ ನಡೆದಿದೆ.
ಕುಣಿಗಲ್-ಮದ್ದೂರು ಹೆದ್ದಾರಿಯ ಮಾಚಹಳ್ಳಿ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ವೇಗದಲ್ಲಿದ್ದ ಕ್ಯಾಂಟರ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ತಾಲ್ಲೂಕಿನ ಗಡಿ ಗ್ರಾಮಗಳಾದ ಯಡಾನಹಳ್ಳಿ ಹಾಗೂ ಅವಸರದಹಳ್ಳಿ ಗ್ರಾಮಕ್ಕೆ ಸೇರಿದವರಾಗಿದ್ದು, ಇವರೆಲ್ಲರು ರಾಜಣ್ಣ ಎಂಬುವರ ಮಗಳ ವಿವಾಹದಲ್ಲಿ ಪಾಲ್ಗೊಳ್ಳಲು ಕ್ಯಾಂಟರ್ನಲ್ಲಿ ಶಿವಪುರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಮೃತರನ್ನು ಜಯಮ್ಮ, ಪಾರ್ವತಿ, ಬೀರಮ್ಮ, ಸಣ್ಣಮ್ಮ, ಮಾದಮ್ಮ, ಶಿವಣ್ಣ, ರೇಣುಕಮ್ಮ, ಸೋನ, ಮೀನಾಕ್ಷಿ, ಕಾಳಮ್ಮ, ಕಮಲಮ್ಮ, ಪೂಜಾ ಹಾಗೂ ಕರಿಯಪ್ಪ ಎಂದು ಗುರುತಿಸಲಾಗಿದ್ದು, ಗಾಯಾಳುಗಳಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆ ಹಾಗೂ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Recommended Video
ಇನ್ನು ದುರಂತಕ್ಕೆ ಚಾಲಕ ಮಾಡಿದ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಮತ್ತೊಂದು ವಾಹನವನ್ನು ಹಿಂದಿಕ್ಕಲು ಹೋಗಿ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಉರುಳಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತ ತಮ್ಮವರನ್ನು ಕಳೆದುಕೊಂಡ ದುಃಖದಲ್ಲಿ ಆಸ್ಪತ್ರೆ ಬಳಿ ಬಂದಿರುವ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಸಾವು ನೋವಿನ ಕಣ್ಣೀರಿನ ನಡುವೆಯೇ ವಧು-ವರರು ಸಪ್ತಪದಿ ತುಳಿದಿದ್ದಾರೆ ಎನ್ನಲಾಗಿದೆ.
ಚಾಲಕನ ಮಾಡಿದ ಒಂದು ತಪ್ಪಿನಿಂದ ದೊಡ್ಡ ಅನಾಹುತವೇ ನಡೆದಿದ್ದು, ಯಾವುದೇ ಕಾರಣಕ್ಕೂ ಮುಂಜಾಗ್ರತೆ ಇಲ್ಲದೇ ವೇಗದ ಚಾಲನೆ ಮಾಡುವ ಮುನ್ನ ಸಾಕಷ್ಟು ಎಚ್ಚರಿ ವಹಿಸುವುದು ಒಳಿತು.
Trending On DriveSpark Kannada:
ಎಚ್ಚರ... ಇನ್ಮುಂದೆ ಈ ಬೈಕುಗಳು ನೊಂದಣಿಯಾಗೋದಿಲ್ಲ !!