Just In
- 2 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 3 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 4 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 5 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಇವರು ಪ್ರವೃತ್ತಿಯಲ್ಲಿ ನಟಿ: ಯಾರಿವರು ಗೊತ್ತೇ?
- News Heavy Rain: ಸಕ್ಕರೆ ನಾಡಿನಲ್ಲಿ ವರ್ಷದ ಮೊದಲ ಮಳೆ: ಧರೆಗುರುಳಿದ ಮರ, ಕಮಾನುಗಳು
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನ ಡೀಲರ್ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ
ವಾಯು ಮಾಲಿನ್ಯವು ಭಾರತದ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ವಾಯು ಮಾಲಿನ್ಯಕ್ಕೆ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯೂ ಕಾರಣವಾಗಿದೆ. ಇದರ ಜೊತೆಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದು ಹಾಗೂ ಕಾರ್ಖಾನೆಗಳ ಹೊಗೆಯು ಸಹ ಕಾರಣವಾಗಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಂತೂ ವಾಯು ಮಾಲಿನ್ಯ ಪ್ರಮಾಣವು ವಿಪರೀತವಾಗಿ ಹದಗೆಟ್ಟಿದೆ. ಈ ಕಾರಣಕ್ಕಾಗಿ ಅಲ್ಲಿನ ಸರ್ಕಾರವು ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ, ಸಮ ಬೆಸ ಯೋಜನೆಯನ್ನು ಜಾರಿಗೊಳಿಸಿದೆ.
ಇದರ ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳು ಬಿಡುಗಡೆಗೊಳಿಸುವ ಹೊಗೆಯು ಸಹ ವಾಯು ಮಾಲಿನ್ಯಕ್ಕೆ ಕಾರಣವಾಗಿದೆ. ಹಳೆಯ ವಾಹನಗಳಿಂದ ಉಂಟಾಗುತ್ತಿರುವ ವಾಯು ಮಾಲಿನ್ಯವು ಹೆಚ್ಚು ಕಳವಳಕ್ಕೆ ಕಾರಣವಾಗಿದೆ.
ಈ ಕಾರಣಕ್ಕಾಗಿ ಹತ್ತು ವರ್ಷಕ್ಕೂ ಹಳೆಯ ವಾಹನಗಳನ್ನು ಸ್ಕ್ರಾಪ್ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶವು ಸಹ ಕೇಂದ್ರ ಸರ್ಕಾರದ ಮುಂದಿದೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಉತ್ತೇಜಿಸಲಾಗುತ್ತಿದೆ.
ದೇಶಿಯ ಮಾರುಕಟ್ಟೆಯಲ್ಲಿರುವ ಬಹುತೇಕ ವಾಹನ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್ ಕಂಪನಿಗಳು ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಜನರೂ ಸಹ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ.
ಐದು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಬಳಕೆಯಲ್ಲಿರುವ ವಾಹನಗಳ ವಾಯು ಮಾಲಿನ್ಯ ಪ್ರಮಾಣವನ್ನು ಪರೀಕ್ಷಿಸುವುದರ ಮೂಲಕ ಅವುಗಳ ಜೀವಿತಾವಧಿಯನ್ನು ಪರೀಕ್ಷಿಸಲಾಗುತ್ತಿದೆ. ಇದಕ್ಕಾಗಿ ದೇಶದಲ್ಲಿರುವ ಆಟೋಮೊಬೈಲ್ ಡೀಲರ್ಗಳು ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
ಸಾರಿಗೆ ಇಲಾಖೆಯು ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಹೊಂದಿಲ್ಲದ ದೇಶಾದ್ಯಂತವಿರುವ 14 ಪ್ರಮುಖ ಆಟೋಮೊಬೈಲ್ ಡೀಲರ್ಗಳ ಟ್ರೇಡ್ ಸರ್ಟಿಫಿಕೇಟ್ಗಳನ್ನು ಅಮಾನತುಗೊಳಿಸಿದೆ. ಇದರಿಂದಾಗಿ ಈ ಡೀಲರ್ಗಳು ಮುಂದಿನ ಎರಡು ತಿಂಗಳವರೆಗೆ ಯಾವುದೇ ವಾಹನಗಳನ್ನು ಮಾರಾಟ ಹಾಗೂ ರಫ್ತು ಮಾಡುವಂತಿಲ್ಲ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಈ ಬಗ್ಗೆ ಮಾತನಾಡಿರುವ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಡೀಲರ್ಶಿಪ್ ತೆರೆಯುವಾಗ ವಿಧಿಸಲಾಗುವ ಮುಖ್ಯ ಷರತ್ತೆಂದರೆ ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಕಡ್ಡಾಯವಾಗಿ ಹೊಂದುವುದು. ಇವುಗಳನ್ನು ಹೊಂದಿಲ್ಲದಿದ್ದರೆ, ಡೀಲರ್ಗಳು ಯಾವುದೇ ವಾಹನಗಳನ್ನು ಮಾರಾಟ ಮಾಡುವಂತಿಲ್ಲವೆಂದು ತಿಳಿಸಿದರು.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ
ವಾಹನಗಳನ್ನು ಮಾರಾಟ ಮಾಡುವ ಪ್ರತಿ ಡೀಲರ್ ತಮ್ಮ ಬಳಿ ಬರುವ ವಾಹನವು ಎಷ್ಟು ಪ್ರಮಾಣದಲ್ಲಿ ಮಾಲಿನ್ಯವಾಗಿದೆ ಎಂಬುದನ್ನು ಪರೀಕ್ಷಿಸಬೇಕು. ಇದರ ಬಗ್ಗೆ ಮಾಹಿತಿಯನ್ನು ಈಗಾಗಲೇ ಸಂಬಂಧಪಟ್ಟ ಡೀಲರ್ಗಳಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.
MOST READ: ಕಾರು ಖರೀದಿಸಿದ ಮಾಲೀಕನ ಮೇಲೆ ಕೇಸ್ ಜಡಿದ ಎಂಜಿ ಮೋಟಾರ್..!
ಈ ಡೀಲರ್ಗಳು ವಾಯು ಮಾಲಿನ್ಯ ತಪಾಸಣಾ ಕೇಂದ್ರಗಳನ್ನು ಹೊಂದಿರುವುದು ಕಂಡು ಬಂದರೆ, ಮತ್ತೆ ಅವರಿಗೆ ವಾಹನಗಳನ್ನು ಮಾರಾಟ ಮಾಡುವ ಅವಕಾಶವನ್ನು ನೀಡಲಾಗುವುದು ಎಂದು ಆ ಅಧಿಕಾರಿ ಹೇಳಿದರು.