Just In
- 5 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 7 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 8 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 9 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನ ಡೀಲರ್ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ
ವಾಯು ಮಾಲಿನ್ಯವು ಭಾರತದ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ವಾಯು ಮಾಲಿನ್ಯಕ್ಕೆ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯೂ ಕಾರಣವಾಗಿದೆ. ಇದರ ಜೊತೆಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದು ಹಾಗೂ ಕಾರ್ಖಾನೆಗಳ ಹೊಗೆಯು ಸಹ ಕಾರಣವಾಗಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಂತೂ ವಾಯು ಮಾಲಿನ್ಯ ಪ್ರಮಾಣವು ವಿಪರೀತವಾಗಿ ಹದಗೆಟ್ಟಿದೆ. ಈ ಕಾರಣಕ್ಕಾಗಿ ಅಲ್ಲಿನ ಸರ್ಕಾರವು ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ, ಸಮ ಬೆಸ ಯೋಜನೆಯನ್ನು ಜಾರಿಗೊಳಿಸಿದೆ.
ಇದರ ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳು ಬಿಡುಗಡೆಗೊಳಿಸುವ ಹೊಗೆಯು ಸಹ ವಾಯು ಮಾಲಿನ್ಯಕ್ಕೆ ಕಾರಣವಾಗಿದೆ. ಹಳೆಯ ವಾಹನಗಳಿಂದ ಉಂಟಾಗುತ್ತಿರುವ ವಾಯು ಮಾಲಿನ್ಯವು ಹೆಚ್ಚು ಕಳವಳಕ್ಕೆ ಕಾರಣವಾಗಿದೆ.
ಈ ಕಾರಣಕ್ಕಾಗಿ ಹತ್ತು ವರ್ಷಕ್ಕೂ ಹಳೆಯ ವಾಹನಗಳನ್ನು ಸ್ಕ್ರಾಪ್ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶವು ಸಹ ಕೇಂದ್ರ ಸರ್ಕಾರದ ಮುಂದಿದೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಉತ್ತೇಜಿಸಲಾಗುತ್ತಿದೆ.
ದೇಶಿಯ ಮಾರುಕಟ್ಟೆಯಲ್ಲಿರುವ ಬಹುತೇಕ ವಾಹನ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್ ಕಂಪನಿಗಳು ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಜನರೂ ಸಹ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ.
ಐದು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಬಳಕೆಯಲ್ಲಿರುವ ವಾಹನಗಳ ವಾಯು ಮಾಲಿನ್ಯ ಪ್ರಮಾಣವನ್ನು ಪರೀಕ್ಷಿಸುವುದರ ಮೂಲಕ ಅವುಗಳ ಜೀವಿತಾವಧಿಯನ್ನು ಪರೀಕ್ಷಿಸಲಾಗುತ್ತಿದೆ. ಇದಕ್ಕಾಗಿ ದೇಶದಲ್ಲಿರುವ ಆಟೋಮೊಬೈಲ್ ಡೀಲರ್ಗಳು ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
ಸಾರಿಗೆ ಇಲಾಖೆಯು ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಹೊಂದಿಲ್ಲದ ದೇಶಾದ್ಯಂತವಿರುವ 14 ಪ್ರಮುಖ ಆಟೋಮೊಬೈಲ್ ಡೀಲರ್ಗಳ ಟ್ರೇಡ್ ಸರ್ಟಿಫಿಕೇಟ್ಗಳನ್ನು ಅಮಾನತುಗೊಳಿಸಿದೆ. ಇದರಿಂದಾಗಿ ಈ ಡೀಲರ್ಗಳು ಮುಂದಿನ ಎರಡು ತಿಂಗಳವರೆಗೆ ಯಾವುದೇ ವಾಹನಗಳನ್ನು ಮಾರಾಟ ಹಾಗೂ ರಫ್ತು ಮಾಡುವಂತಿಲ್ಲ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಈ ಬಗ್ಗೆ ಮಾತನಾಡಿರುವ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಡೀಲರ್ಶಿಪ್ ತೆರೆಯುವಾಗ ವಿಧಿಸಲಾಗುವ ಮುಖ್ಯ ಷರತ್ತೆಂದರೆ ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಕಡ್ಡಾಯವಾಗಿ ಹೊಂದುವುದು. ಇವುಗಳನ್ನು ಹೊಂದಿಲ್ಲದಿದ್ದರೆ, ಡೀಲರ್ಗಳು ಯಾವುದೇ ವಾಹನಗಳನ್ನು ಮಾರಾಟ ಮಾಡುವಂತಿಲ್ಲವೆಂದು ತಿಳಿಸಿದರು.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ
ವಾಹನಗಳನ್ನು ಮಾರಾಟ ಮಾಡುವ ಪ್ರತಿ ಡೀಲರ್ ತಮ್ಮ ಬಳಿ ಬರುವ ವಾಹನವು ಎಷ್ಟು ಪ್ರಮಾಣದಲ್ಲಿ ಮಾಲಿನ್ಯವಾಗಿದೆ ಎಂಬುದನ್ನು ಪರೀಕ್ಷಿಸಬೇಕು. ಇದರ ಬಗ್ಗೆ ಮಾಹಿತಿಯನ್ನು ಈಗಾಗಲೇ ಸಂಬಂಧಪಟ್ಟ ಡೀಲರ್ಗಳಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.
MOST READ: ಕಾರು ಖರೀದಿಸಿದ ಮಾಲೀಕನ ಮೇಲೆ ಕೇಸ್ ಜಡಿದ ಎಂಜಿ ಮೋಟಾರ್..!
ಈ ಡೀಲರ್ಗಳು ವಾಯು ಮಾಲಿನ್ಯ ತಪಾಸಣಾ ಕೇಂದ್ರಗಳನ್ನು ಹೊಂದಿರುವುದು ಕಂಡು ಬಂದರೆ, ಮತ್ತೆ ಅವರಿಗೆ ವಾಹನಗಳನ್ನು ಮಾರಾಟ ಮಾಡುವ ಅವಕಾಶವನ್ನು ನೀಡಲಾಗುವುದು ಎಂದು ಆ ಅಧಿಕಾರಿ ಹೇಳಿದರು.