Just In
- 17 min ago ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- 2 hrs ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 2 hrs ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 2 hrs ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
Don't Miss!
- Movies 16 ವರ್ಷಗಳ ಬಳಿಕ ಸೂಪರ್ ಹಿಟ್ ಜೋಡಿ ದರ್ಶನ; 'ಮಹಾನಟಿ'ಗಾಗಿ ರಮೇಶ್ ಅರವಿಂದ್-ಪ್ರೇಮಾ!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು
ಭಾರತದಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ಬಾರದೇ ವೇಗವಾಗಿ ಹರಡುತ್ತಿದೆ. ಕೆಲವು ದಿನಗಳ ಹಿಂದೆ ಪ್ರಪಂಚದ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದ್ದ ಭಾರತವು ಈಗ ಮೂರನೇ ಸ್ಥಾನಕ್ಕೇರಿದೆ.
ಈ ಕಾರಣಕ್ಕೆ ಲಾಕ್ಡೌನ್ ಅನಿವಾರ್ಯವಾಗಿದ್ದು, ಸರ್ಕಾರಗಳು ಲಾಕ್ಡೌನ್ ಅವಧಿಯಲ್ಲಿ ವಿನಾಕಾರಣ ಮನೆಯಿಂದ ಹೊರಬರದಂತೆ ಜನರಿಗೆ ಮನವಿ ಮಾಡಿವೆ. ಆದರೂ ಜನರು ಲಾಕ್ ಡೌನ್ ಗೂ ತಮಗೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಪೊಲೀಸರು ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೊರಬರುವ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.
ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದಲ್ಲಿ ಮಂಗಳವಾರ ಲಾಕ್ಡೌನ್ ಉಲ್ಲಂಘಿಸಿದ 2 ಸಾವಿರ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, 7 ಜನರನ್ನುಬಂಧಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸರು ತಿಳಿಸಿದ್ದಾರೆ.
MOST READ:ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು
ಗೌತಮ್ ಬುದ್ಧ ನಗರದಲ್ಲಿ 24 ಗಂಟೆಗಳ ಅವಧಿಯಲ್ಲಿ 3,614 ಕರೋನಾ ಪಾಸಿಟಿವ್ ಪ್ರಕರಣಗಳು ಬಂದಿದ್ದು, 33 ಸೋಂಕಿತ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗೌತಮ್ ಬುದ್ಧ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್ಡೌನ್ ಉಲ್ಲಂಘನೆಯ ನೂರಾರು ಪ್ರಕರಣಗಳು ದಾಖಲಾಗುತ್ತಿವೆ.
ಕೋವಿಡ್ -19 ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಯಲು ಜಾರಿಗೊಳಿಸಲಾಗಿರುವ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ 690 ವಾಹನ ಮಾಲೀಕರನ್ನು ಕಳೆದ ವಾರ ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದಲ್ಲಿ ಬಂಧಿಸಲಾಗಿತ್ತು.
MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ
ಮಾರ್ಚ್ 23ರಿಂದ ಜಾರಿಗೆ ಬಂದ ಮೊದಲ ಹಂತದ ಲಾಕ್ಡೌನ್ ನಂತರ ಉತ್ತರ ಪ್ರದೇಶದ ಗೌತಮ್ ಬೌದ್ಧ ನಗರದಲ್ಲಿ ಇದುವರೆಗೂ 8,300 ಕ್ಕೂ ಹೆಚ್ಚು ಜನರನ್ನು ಲಾಕ್ ಡೌನ್ ಉಲ್ಲಂಘಿಸಿದ ಕಾರಣಕ್ಕೆ ಬಂಧಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ವಾಹನಗಳಿಗೂ ದಂಡ ವಿಧಿಸಲಾಗಿದೆ.
ಗೌತಮ್ ಬುದ್ಧ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಒಂದೇ ಸ್ಥಳದಲ್ಲಿ ಹೆಚ್ಚಿನ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ನೋಯ್ಡಾ-ದೆಹಲಿ ಗಡಿಯನ್ನು ಬಂದ್ ಮಾಡಲಾಗಿದ್ದು, ಅಗತ್ಯ ಹಾಗೂ ತುರ್ತು ಸೇವೆಯ ವಾಹನಗಳಿಗೆ ಮಾತ್ರ ಗಡಿ ದಾಟಲು ಅವಕಾಶ ನೀಡಲಾಗಿದೆ.
MOSTREAD: ಕೆಟ್ಟು ನಿಂತ ವಾಹನಗಳನ್ನು ತಳ್ಳುವ ಜನಪ್ರಿಯ ವಿಧಾನವಿದು
ಕಟ್ಟುನಿಟ್ಟಿನ ಸೂಚನೆಗಳ ಹೊರತಾಗಿಯೂ, ಜನರು ಗಡಿ ದಾಟಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಜನರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದೇ ವೇಳೆ ಮಹಾರಾಷ್ಟ್ರ ಪೊಲೀಸರು ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ 29,000ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರ ಪೊಲೀಸರು ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ 1.6 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರ ಜೊತೆಗೆ ನಿಯಮ ಉಲ್ಲಂಘಿಸಿದ ವಾಹನಗಳಿಗೆ ರೂ.11 ಕೋಟಿ ದಂಡ ವಿಧಿಸಲಾಗಿದೆ.