Just In
- 6 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 7 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 8 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 8 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರ್ನಾಟಕದಲ್ಲಿ 22 ಗ್ರೀನ್ ಎಕ್ಸ್ ಪ್ರೆಸ್ ಹೈವೇ ನಿರ್ಮಿಸಲಿರುವ ಕೇಂದ್ರ ಸರ್ಕಾರ
ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ಕರ್ನಾಟಕದ 22 ಗ್ರೀನ್ ಎಕ್ಸ್ಪ್ರೆಸ್ ಹೆದ್ದಾರಿಗಳಿಗಾಗಿ ರೂ.1.5 ಲಕ್ಷ ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಿದೆ.
ಇದರಲ್ಲಿ ಪುಣೆ-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯ ಜೋಡಣೆಯು ಸೇರಿದೆ. ಮುಂದಿನ ಕೆಲವು ವರ್ಷಗಳಲ್ಲಿ ಪೂರ್ಣಗೊಳ್ಳಲಿರುವ ಈ ಹೆದ್ದಾರಿ ಯೋಜನೆಗೆ ರೂ.50,000 ಕೋಟಿ ವೆಚ್ಚವಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿರವರು ಮಾತನಾಡಿದರು.
ಕರ್ನಾಟಕದ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿಯಾಗಿ ರೂ.1.5 ಲಕ್ಷ ಕೋಟಿ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ವಾರ್ಷಿಕ ಮೊತ್ತವು ರೂ.2,150 ಕೋಟಿಗಳಾಗಿದೆ. ಇದನ್ನು ನಾವು ರೂ.3,990 ಕೋಟಿಗೆ ಏರಿಸಿದ್ದೇವೆ ಎಂದು ಹೇಳಿದರು.
ಐದು ದಿನಗಳ ಅಂತರರಾಷ್ಟ್ರೀಯ ನಿರ್ಮಾಣ ಸಲಕರಣೆ ಹಾಗೂ ನಿರ್ಮಾಣ ತಂತ್ರಜ್ಞಾನ ವ್ಯಾಪಾರ ಮೇಳವಾದ 10 ನೇ ಆವೃತ್ತಿಯ ಎಕ್ಸಾನ್ 2019ರ ಉದ್ಘಾಟನಾ ಅಧಿವೇಶನದಲ್ಲಿ ಅವರು ಮಾತನಾಡುತ್ತಿದ್ದರು.
ಕರ್ನಾಟಕ ಸರ್ಕಾರ, ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಹೆಚ್ಎಐ) ಸಹಯೋಗದೊಂದಿಗೆ ಭಾರತೀಯ ಕೈಗಾರಿಕಾ ಒಕ್ಕೂಟವು ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ನಾವು 22 ಗ್ರೀನ್ ಎಕ್ಸ್ ಪ್ರೆಸ್ ಹೈವೇಗಳನ್ನು ನಿರ್ಮಿಸುತ್ತಿದ್ದೇವೆ. ಇದರಲ್ಲಿ ಪುಣೆ - ಬೆಂಗಳೂರು ನಡುವಿನ 600 ಕಿ.ಮೀ ಹೊಸ ಗ್ರೀನ್ ಎಕ್ಸ್ ಪ್ರೆಸ್ ಹೈವೇಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ರೂ.50,000 ಕೋಟಿ ವೆಚ್ಚವಾಗಲಿದೆ.
ಗಡ್ಕರಿರವರ ಹೆದ್ದಾರಿ ಸಚಿವಾಲಯ ಹಾಗೂ ಕರ್ನಾಟಕ ಸರ್ಕಾರವು 2,300 ಕಿ.ಮೀನ ಹೊಸ ರಸ್ತೆಗಳಿಗೆ ಅನುಮೋದನೆ ನೀಡಿದ್ದು, ಇದರ ಯೋಜನಾ ವರದಿ ಸಿದ್ಧವಾಗಿದೆ. ಈ ಯೋಜನೆಗೆ ಬಿಡ್ಡಿಂಗ್ ಅನ್ನು ಶೀಘ್ರದಲ್ಲೇ ಶುರು ಮಾಡಲಾಗುವುದು.
ಕರ್ನಾಟಕದ ಮುಖ್ಯಮಂತ್ರಿಗಳು ಭೂಸ್ವಾಧೀನಕ್ಕೆ ಎದುರಾಗುವ ಅಡ್ಡಿ ಆತಂಕಗಳನ್ನು ನಿವಾರಿಸುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ಗಡ್ಕರಿರವರು ತಿಳಿಸಿದರು. ಬೆಂಗಳೂರಿನಲ್ಲಿ ನಿರ್ಮಿಸಲಾಗುವ ಮತ್ತೊಂದು ರಿಂಗ್ ರಸ್ತೆಯ ಯೋಜನೆಯ ಬಗ್ಗೆಯೂ ಸಹ ಸಭೆಯಲ್ಲಿ ಚರ್ಚಿಸಲಾಗಿದೆ.
ಇದರಲ್ಲಿ ಭೂಸ್ವಾಧೀನಕ್ಕಾಗಿ 80%ನಷ್ಟು ಹಣವನ್ನು ರಾಜ್ಯಗಳು ಭರಿಸಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರವು ಒಪ್ಪಿಕೊಂಡಿದೆ ಎಂದು ಅವರು ಹೇಳಿದರು. ಸಚಿವಾಲಯವು ರಿಂಗ್ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರವು ಸ್ಟೀಲ್ ಹಾಗೂ ಸಿಮೆಂಟ್ ಮೇಲಿನ ತೆರಿಗೆಗೆ ವಿನಾಯಿತಿ ನೀಡಲಿದೆ ಎಂಬ ನಿರೀಕ್ಷೆಯಲ್ಲಿದೆ.
ರಿಂಗ್ ರಸ್ತೆಗೆ ಸಂಬಂಧಪಟ್ಟ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ಇದು ಕರ್ನಾಟಕದ ಮುಖ್ಯಮಂತ್ರಿಯವರು ಜನತೆಗೆ ನೀಡುತ್ತಿರುವ ಉತ್ತಮ ಕೊಡುಗೆಯಾಗಿದೆ ಎಂದು ಗಡ್ಕರಿ ಹೇಳಿದರು. ಈ ಹೆದ್ದಾರಿ ಯೋಜನೆಗಳು ಕರ್ನಾಟಕದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿವೆ ಎಂದು ಅವರು ಅಭಿಪ್ರಾಯಪಟ್ಟರು.