Just In
- 1 hr ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 1 hr ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 1 hr ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 1 hr ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲಿಯೇ ರಸ್ತೆಗಿಳಿಯಲಿವೆ 500 ಹೊಸ ಬಸ್ಸುಗಳು
ಈಗ ಪ್ರಯಾಣಿಕರು ಬಸ್ಗಳಿಗಾಗಿ ಬಹಳ ಸಮಯ ಕಾಯಬೇಕಾದ ವಾತಾವರಣವಿದೆ. ಪ್ರಯಾಣಿಕರ ಕಾಯುವ ಸಮಯವನ್ನು ಕಡಿಮೆ ಮಾಡಲು ಹೆಚ್ಚಿನ ಬಸ್ಗಳ ಅವಶ್ಯಕತೆಯಿದೆ. ಈಗ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸುವ ಕಾರ್ಯವನ್ನು ಚುರುಕುಗೊಳಿಸಲಾಗಿದೆ.
ಶೀಘ್ರದಲ್ಲಿಯೇ 500 ಹೊಸ ಬಸ್ಸುಗಳು ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ರಸ್ತೆಗಿಳಿಯಲಿವೆ. ಕರೋನಾ ವೈರಸ್ ಎರಡನೇ ಅಲೆಯ ಆರ್ಭಟದ ಹಿನ್ನೆಲೆಯಲ್ಲಿಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿರುವುದರಿಂದ ಮಹಾರಾಷ್ಟ್ರ ಸರ್ಕಾರವು ಲಾಕ್ಡೌನ್'ನಲ್ಲಿ ಸಡಿಲಿಕೆ ನೀಡಿದೆ.
ಮಹಾರಾಷ್ಟ್ರದಲ್ಲಿ ಕಳೆದ ಸೋಮವಾರದಿಂದ ಖಾಸಗಿ ಕಚೇರಿ ಸೇರಿದಂತೆ ಹಲವು ಸಂಘ ಸಂಸ್ಥೆಗಳನ್ನು ತೆರೆಯಲಾಗಿದೆ. ಇದರಿಂದ ಪ್ರತಿದಿನ ಸುಮಾರು 2 ಲಕ್ಷ ಪ್ರಯಾಣಿಕರು ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.
ಬಸ್ಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಪ್ರಯಾಣಿಕರು ಬಸ್ಗಳಿಗಾಗಿ ಹೆಚ್ಚು ಸಮಯ ಕಾಯಬೇಕಾದ ವಾತಾವರಣವಿದೆ. ಈಗ ಖರೀದಿಸಲಾಗುವ 500 ಹೊಸ ಬಸ್ಗಳಲ್ಲಿ 400 ಬಸ್ಗಳು ಎಸಿ ಮಿನಿ ಬಸ್ಗಳಾಗಿವೆ.
400 ಎಸಿ ಮಿನಿ ಬಸ್ಗಳನ್ನು ಎರಡು ಹಂತಗಳಲ್ಲಿ ತಲಾ 200 ಬಸ್ಗಳಂತೆ ಪರಿಚಯಿಸಲಾಗುವುದು. 100 ಎಲೆಕ್ಟ್ರಿಕ್ ಬಸ್ಸುಗಳನ್ನು ಸಹ ಖರೀದಿಸಲಾಗುವುದು. ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ 200 ಎಸಿ ಮಿನಿ ಬಸ್ಗಳನ್ನು ರಸ್ತೆಗಿಳಿಸ ಬೇಕಾಗಿತ್ತು.
ಆದರೆ ಕರೋನಾ ವೈರಸ್ ಎರಡನೇ ಅಲೆಯಿಂದಾಗಿ ವಿಳಂಬವಾಗಿತ್ತು. ಈಗ ಬಸ್ಗಳನ್ನು ಪರಿಚಯಿಸುವ ಕೆಲಸ ಭರದಿಂದ ಸಾಗಿದೆ. ಹೊಸ ಬಸ್ಗಳ ಆಗಮನದ ನಂತರ ಪ್ರಯಾಣಿಕರು ಬಸ್ಗಳಿಗೆ ಕಾಯುವ ಅವಧಿ ಕಡಿಮೆಯಾಗುವ ನಿರೀಕ್ಷೆಗಳಿವೆ.
ಭಾರತದಲ್ಲಿ ಕರೋನಾ ವೈರಸ್ನ ಎರಡನೇ ಅಲೆಯ ಪ್ರಭಾವ ನಿಧಾನವಾಗಿ ಕಡಿಮೆಯಾಗುತ್ತಿರುವುದರಿಂದ ಆಯಾ ರಾಜ್ಯ ಸರ್ಕಾರಗಳು ಲಾಕ್ಡೌನ್'ನಿಂದ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡುತ್ತಿವೆ. ಇದರಿಂದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗತೊಡಗಿದೆ.
ಉತ್ತರ ರಾಜ್ಯಗಳಲ್ಲಿ ಪರಿಸ್ಥಿತಿಯು ಸಹಜ ಸ್ಥಿತಿಯತ್ತ ಮರಳುತ್ತಿದೆ. ದಕ್ಷಿಣ ರಾಜ್ಯಗಳಲ್ಲಿಯೂ ಪರಿಸ್ಥಿತಿಯು ನಿಧಾನವಾಗಿ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಲಾಕ್ಡೌನ್ ಅವಧಿಯಲ್ಲಿ ವಶಪಡಿಸಿಕೊಂಡಿದ್ದ ವಾಹನಗಳನ್ನು ಪೊಲೀಸರು ಅವುಗಳ ಮಾಲೀಕರಿಗೆ ಹಿಂತಿರುಗಿಸುತ್ತಿದ್ದಾರೆ.
ಅಗತ್ಯ ಕೆಲಸವಿದ್ದರೆ ಮಾತ್ರ ಮನೆಯಿಂದ ಹೊರ ಹೋಗಿ. ತಪ್ಪದೆ ಫೇಸ್ ಮಾಸ್ಕ್ ಧರಿಸಿ. ಹೆಚ್ಚುವರಿ ರಕ್ಷಣೆಗಾಗಿ ಎರಡು ಫೇಸ್ ಮಾಸ್ಕ್ ಧರಿಸುವುದು ಉತ್ತಮ.ಇದರಿಂದ ಕರೋನಾ ವೈರಸ್ ಸೋಂಕು ಹರಡುವುದರಿಂದ ಪಾರಾಗಬಹುದು.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.