Just In
- 6 min ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- 1 hr ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 2 hrs ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಿದ ಸರ್ಕಾರ
ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು 55 ಗಂಟೆಗಳ ಲಾಕ್ಡೌನ್ ಜಾರಿಗೊಳಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಜಾರಿಗೆ ಬಂದಿರುವ ಈ ಲಾಕ್ಡೌನ್ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಮುಂದುವರಿಯಲಿದೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿರವರು ಹೊರಡಿಸಿರುವ ಆದೇಶದಲ್ಲಿ ಕೋವಿಡ್ -19, ಮಲೇರಿಯಾ, ಎನ್ಸೆಫಾಲಿಟಿಸ್, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಈ ಆದೇಶದ ಪ್ರಕಾರ ಹೊಸ ಲಾಕ್ಡೌನ್ ಅನ್ನು ಮೊದಲಿನಂತೆ ಜಾರಿಗೆ ತರಲಾಗುವುದು. ವಾಹನಗಳ ಸಂಚಾರವನ್ನು ನಿರ್ಬಂಧಿಸುವುದರ ಜೊತೆಗೆ, ಜನರು ಅನಗತ್ಯವಾಗಿ ಮನೆಗಳಿಂದ ಹೊರಬರದಂತೆ ತಡೆಯಲಾಗುವುದು.
MOSTREAD: ಕರೋನಾ ವೈರಸ್ ಎಫೆಕ್ಟ್: ಕಾರಿಗೂ ಬಂತು ಪೋರ್ಟಬಲ್ ಟಾಯ್ಲೆಟ್
ಅಗತ್ಯ ಸೇವೆ, ತುರ್ತು ಸೇವೆ, ಹಾಗೂ ಡೋರ್ ಡೆಲಿವರಿ ಸೇವೆಗಳಲ್ಲಿ ತೊಡಗಿರುವ ಜನರ ಚಲನವಲನಗಳ ಯಾವುದೇ ರೀತಿಯ ನಿರ್ಬಂಧವಿರುವುದಿಲ್ಲ. ಸರಕು ವಾಹನಗಳ ಸಂಚಾರಕ್ಕೂ ನಿಷೇಧವಿರುವುದಿಲ್ಲ.
ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳು ಸಂಚಾರಕ್ಕೆ ಮುಕ್ತವಾಗಿರಲಿದ್ದು, ಈ ಹೆದ್ದಾರಿಗಳಲ್ಲಿ ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸಲಿವೆ ಎಂದು ಆದೇಶದಲ್ಲಿ ಹೇಳಲಾಗಿದೆ. ನೋಯ್ಡಾ ಹಾಗೂ ದೆಹಲಿ ಗಡಿಯಲ್ಲಿನ ಭದ್ರತೆಯನ್ನು ಹೆಚ್ಚಿಸಲಾಗುವುದು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಅಗತ್ಯ ಸೇವೆಗಳನ್ನು ನೀಡದ ವಾಹನಗಳು ಹೊರಬಂದಲ್ಲಿ ಹಾಗೂ ಇ-ಪಾಸ್ ಇಲ್ಲದೇ ಸಂಚರಿಸುವ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇವುಗಳ ಜೊತೆಗೆ ಪ್ರಯಾಣ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದ್ದು, ವಾಹನಗಳ ಒಳಗೆ ನಿಗದಿಪಡಿಸಿದಷ್ಟೇ ಸಂಖ್ಯೆಯ ಜನರು ಪ್ರಯಾಣಿಸಬೇಕಾಗುತ್ತದೆ.
ಅಗತ್ಯ ಸೇವೆಗಳನ್ನು ನೀಡದ ವಾಹನಗಳು ವಿನಾ ಕಾರಣ ಸಂಚರಿಸುತ್ತಿರುವುದು ಕಂಡು ಬಂದಲ್ಲಿ ಕೋವಿಡ್ -19 ನಿಯಮಗಳ ಉಲ್ಲಂಘನೆಯನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಉತ್ತರಪ್ರದೇಶದ ಗಡಿ ದಾಟಲು ಅಲ್ಲಿನ ಅಧಿಕಾರಿಗಳು ನೀಡುವ ಇ-ಪಾಸ್ ಗಳ ಅಗತ್ಯವಿದೆ.
MOSTREAD: ಕೆಟ್ಟು ನಿಂತ ವಾಹನಗಳನ್ನು ತಳ್ಳುವ ಜನಪ್ರಿಯ ವಿಧಾನವಿದು
ಲಾಕ್ಡೌನ್ ಉಲ್ಲಂಘನೆ ಪ್ರಕರಣಗಳು ಗೌತಮ್ ಬುದ್ಧ ನಗರ ಹಾಗೂ ಘಜಿಯಾಬಾದ್ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿವೆ. ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದಲ್ಲಿ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ 690 ವಾಹನಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಮಾರ್ಚ್ 23ರಂದು ಜಾರಿಗೆ ಬಂದಿದ್ದ ಮೊದಲ ಹಂತದ ಲಾಕ್ಡೌನ್ ವೇಳೆ ನಿಯಮ ಉಲ್ಲಂಘಿಸಿದ ಗೌತಮ್ ಬೌದ್ಧ ನಗರದ 8,300 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಒಂದು ಲಕ್ಷಕ್ಕೂ ಹೆಚ್ಚು ವಾಹನಗಳಿಗೆ ದಂಡ ವಿಧಿಸಿ, 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆಯಲಾಗಿತ್ತು.