Just In
- 1 hr ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 1 hr ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 1 hr ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 1 hr ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷ
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಸತತವಾಗಿ ಏರಿಕೆಯಾಗುತ್ತಿದ್ದು, ಹೊಸ ದಾಖಲೆಯನ್ನು ಬರೆದಿವೆ. ಬೆಲೆ ಏರಿಕೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಬೆಲೆ ಏರಿಕೆಯನ್ನು ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಈಗ ಗೋವಾದ ಆಮ್ ಆದ್ಮಿ ಪಕ್ಷವು (ಎಎಪಿ) ಕೇಂದ್ರ ಸರ್ಕಾರದ ಬೆಲೆ ಏರಿಕೆ ನಿರ್ಧಾರವನ್ನು ವಿರೋಧಿಸಿ ಪೆಟ್ರೋಲ್ ಬಂಕ್'ನಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದೆ. ಪೆಟ್ರೋಲ್, ಡೀಸೆಲ್ ಖರೀದಿಸಲು ಬಂದ ವಾಹನ ಸವಾರರಿಗೆ ಕೇಕ್ ಹಾಗೂ ಚಾಕೊಲೇಟ್'ನಂತಹ ಸಿಹಿತಿಂಡಿಗಳನ್ನು ನೀಡುವ ಮೂಲಕ ಆಮ್ ಆದ್ಮಿ ಪಾರ್ಟಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ.
ಗೋವಾದಲ್ಲಿ ನಡೆದ ಈ ಘಟನೆ ದೇಶದ ಜನರ ಗಮನ ಸೆಳೆಯುತ್ತಿದೆ. ಅಂದ ಹಾಗೆ ಆಮ್ ಆದ್ಮಿ ಪಕ್ಷವು ಕೇಕ್ ಹಾಗೂ ಚಾಕೊಲೇಟ್ಗಳನ್ನು ವಿತರಿಸಿ ಈ ರೀತಿಯಾಗಿ ವಿಶಿಷ್ಟ ಪ್ರತಿಭಟನೆ ನಡೆಸಿರುವುದು ಗೋವಾದ ಪಣಜಿಯಲ್ಲಿ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ಭಟನೆ ನಡೆಸುತ್ತಿವೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯ ಫೋಟೋಗಳನ್ಣಿಟ್ಟು ಕೊಂಡು ಕೇಂದ್ರ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 105.25 ಗಳಾದರೆ, ಡೀಸೆಲ್ ಬೆಲೆ ರೂ. 95.26 ಗಳಾಗಿದೆ.
ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗೆ ಅನುಗುಣವಾಗಿ ದೇಶದಲ್ಲಿ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡು ಬರುತ್ತದೆ. ಇಲ್ಲವೇ ಕಡಿಮೆಯಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುವ ಹೆಚ್ಚಿನ ತೆರಿಗೆಗಳು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ವ್ಯಾಟ್ ಹಾಗೂ ಇನ್ನಿತರ ತೆರಿಗೆಗಳಿಂದಾಗಿ ಭಾರತದಲ್ಲಿ ಪೆಟ್ರೋಲ್ ಬೆಲೆ ರೂ. 100 ರ ಗಡಿ ದಾಟಿದೆ.
ಅತಿಯಾದ ತೆರಿಗೆಗಳಿಂದಾಗಿ ಭಾರತದಲ್ಲಿ ವಾಹನ ಸವಾರರು ಪ್ರತಿ ಲೀಟರ್ ಪೆಟ್ರೋಲ್ ಖರೀದಿಗಾಗಿ 60% ಹಾಗೂ ಪ್ರತಿ ಲೀಟರ್ ಡೀಸೆಲ್ ಖರೀದಿಗಾಗಿ 54% ನಷ್ಟು ಹಣವನ್ನು ತೆರಿಗೆ ರೂಪದಲ್ಲಿ ಪಾವತಿಸುತ್ತಿದ್ದಾರೆ.
ಈ ಕಾರಣದಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿದ್ದರೂ ಭಾರತದಲ್ಲಿ ಮಾತ್ರ ಗಗನಕ್ಕೇರಿದೆ. ಇದನ್ನು ಖಂಡಿಸಿ ಆಮ್ ಆದ್ಮಿಪಕ್ಷವು ಪೆಟ್ರೋಲ್ ಬಂಕ್'ನಲ್ಲಿ ಕೇಕ್ ಹಾಗೂ ಚಾಕೊಲೇಟುಗಳನ್ನು ನೀಡುವ ಮೂಲಕ ಪ್ರತಿಭಟನೆ ನಡೆಸಿದೆ.