Just In
- 25 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷ
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಸತತವಾಗಿ ಏರಿಕೆಯಾಗುತ್ತಿದ್ದು, ಹೊಸ ದಾಖಲೆಯನ್ನು ಬರೆದಿವೆ. ಬೆಲೆ ಏರಿಕೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಬೆಲೆ ಏರಿಕೆಯನ್ನು ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಈಗ ಗೋವಾದ ಆಮ್ ಆದ್ಮಿ ಪಕ್ಷವು (ಎಎಪಿ) ಕೇಂದ್ರ ಸರ್ಕಾರದ ಬೆಲೆ ಏರಿಕೆ ನಿರ್ಧಾರವನ್ನು ವಿರೋಧಿಸಿ ಪೆಟ್ರೋಲ್ ಬಂಕ್'ನಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದೆ. ಪೆಟ್ರೋಲ್, ಡೀಸೆಲ್ ಖರೀದಿಸಲು ಬಂದ ವಾಹನ ಸವಾರರಿಗೆ ಕೇಕ್ ಹಾಗೂ ಚಾಕೊಲೇಟ್'ನಂತಹ ಸಿಹಿತಿಂಡಿಗಳನ್ನು ನೀಡುವ ಮೂಲಕ ಆಮ್ ಆದ್ಮಿ ಪಾರ್ಟಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ.
ಗೋವಾದಲ್ಲಿ ನಡೆದ ಈ ಘಟನೆ ದೇಶದ ಜನರ ಗಮನ ಸೆಳೆಯುತ್ತಿದೆ. ಅಂದ ಹಾಗೆ ಆಮ್ ಆದ್ಮಿ ಪಕ್ಷವು ಕೇಕ್ ಹಾಗೂ ಚಾಕೊಲೇಟ್ಗಳನ್ನು ವಿತರಿಸಿ ಈ ರೀತಿಯಾಗಿ ವಿಶಿಷ್ಟ ಪ್ರತಿಭಟನೆ ನಡೆಸಿರುವುದು ಗೋವಾದ ಪಣಜಿಯಲ್ಲಿ. ರಾಜಕೀಯ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ಭಟನೆ ನಡೆಸುತ್ತಿವೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯ ಫೋಟೋಗಳನ್ಣಿಟ್ಟು ಕೊಂಡು ಕೇಂದ್ರ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 105.25 ಗಳಾದರೆ, ಡೀಸೆಲ್ ಬೆಲೆ ರೂ. 95.26 ಗಳಾಗಿದೆ.
ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗೆ ಅನುಗುಣವಾಗಿ ದೇಶದಲ್ಲಿ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡು ಬರುತ್ತದೆ. ಇಲ್ಲವೇ ಕಡಿಮೆಯಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುವ ಹೆಚ್ಚಿನ ತೆರಿಗೆಗಳು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ವ್ಯಾಟ್ ಹಾಗೂ ಇನ್ನಿತರ ತೆರಿಗೆಗಳಿಂದಾಗಿ ಭಾರತದಲ್ಲಿ ಪೆಟ್ರೋಲ್ ಬೆಲೆ ರೂ. 100 ರ ಗಡಿ ದಾಟಿದೆ.
ಅತಿಯಾದ ತೆರಿಗೆಗಳಿಂದಾಗಿ ಭಾರತದಲ್ಲಿ ವಾಹನ ಸವಾರರು ಪ್ರತಿ ಲೀಟರ್ ಪೆಟ್ರೋಲ್ ಖರೀದಿಗಾಗಿ 60% ಹಾಗೂ ಪ್ರತಿ ಲೀಟರ್ ಡೀಸೆಲ್ ಖರೀದಿಗಾಗಿ 54% ನಷ್ಟು ಹಣವನ್ನು ತೆರಿಗೆ ರೂಪದಲ್ಲಿ ಪಾವತಿಸುತ್ತಿದ್ದಾರೆ.
ಈ ಕಾರಣದಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿದ್ದರೂ ಭಾರತದಲ್ಲಿ ಮಾತ್ರ ಗಗನಕ್ಕೇರಿದೆ. ಇದನ್ನು ಖಂಡಿಸಿ ಆಮ್ ಆದ್ಮಿಪಕ್ಷವು ಪೆಟ್ರೋಲ್ ಬಂಕ್'ನಲ್ಲಿ ಕೇಕ್ ಹಾಗೂ ಚಾಕೊಲೇಟುಗಳನ್ನು ನೀಡುವ ಮೂಲಕ ಪ್ರತಿಭಟನೆ ನಡೆಸಿದೆ.