Just In
- 6 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 7 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 9 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 9 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಸ್ಆರ್ಟಿಸಿ ಬಸ್ಗೆ ಐ20 ಕಾರು ಡಿಕ್ಕಿ- ಭೀಕರ ಅಪಘಾತದಲ್ಲಿ ಮೂವರು ದುರ್ಮರಣ
ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ ತಾಲೂಕಿನಲ್ಲಿ ಹಾಯ್ದುಹೋಗುವ ರಾಷ್ಟ್ರೀಯ ಹೆದ್ದಾರಿ 75ರ ಮಡೇರಹಳ್ಳಿ ಗ್ರಾಮದ ಬಳಿ ನಿನ್ನೆ ತಡರಾತ್ರಿ ಈ ದುರಂತ ನಡೆದಿದ್ದು, ಅತಿವೇಗದಲ್ಲಿದ್ದ ಕಾರು ನಿಯಂತ್ರಣ ತಪ್ಪಿದ ಪರಿಣಾಮವೇ ಈ ಘಟನೆ ನಡೆದಿದೆ.
ಬೆಂಗಳೂರು ಕಡೆಯಿಂದ ಕೋಲಾರಕ್ಕೆ ಬರುತ್ತಿದ್ದ ಹ್ಯುಂಡೈ ಐ20 ಕಾರ್ ನಿಯಂತ್ರಣ ತಪ್ಪಿದ ಪರಿಣಾಮ ಮೊದಲು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿ ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಕಾರ್ನಲ್ಲಿದ್ದ ಕೋಲಾರ ಮೂಲದ ಶ್ರೀಹರಿ(23), ರೋಹನ್(22), ಸುಭಾಷ್(21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್ತಿಕ್(24) ಹಾಗೂ ಬಿಶ್ವಾಸ್(25) ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ ಗಾಯಾಳುಗಳನ್ನು ಕೋಲಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಪಘಾತದಲ್ಲಿ ಹ್ಯುಂಡೈ ಐ20 ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅೃದಷ್ಟವಶಾತ್ ಬಸ್ನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲವೆಂದು ತಿಳಿದುಬಂದಿದೆ.
ಇನ್ನು ಮೃತರೆಲ್ಲರೂ ಕೋಲಾರ ನಗರದ ಜ್ಯುವೆಲ್ಲರಿ ಶಾಪ್ ಮಾಲೀಕರ ಮಕ್ಕಳಾಗಿದ್ದು, ಕಳೆದ ರಾತ್ರಿ ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದರು ಎನ್ನಲಾಗಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಬರ್ತ್ ಡೇ ಪಾರ್ಟಿ ವೇಳೆ ಮಧ್ಯಸೇವನೆ ಮಾಡಿದ್ದರ ಹಿನ್ನೆಲೆ ಕಾರು ನಿಯಂತ್ರಣ ತಪ್ಪಿರಬಹುದೆಂದು ಶಂಕಿಸಲಾಗಿದೆ.
ಚಿತ್ರ ಕೃಪೆ-ಪಬ್ಲಿಕ್ ಟಿವಿ