Just In
- 43 min ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 3 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 3 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತಕ್ಕೀಡಾಯ್ತು ನಟ ಜಗ್ಗೇಶ್ ಪುತ್ರ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರು
ಕನ್ನಡ ಚಿತ್ರರಂಗದ ಹಿರಿಯ ನಟ ನವರಸ ನಾಯಕ ಜಗ್ಗೇಶ್ ರವರ ಕಿರಿಯ ಪುತ್ರ ಯತಿರಾಜ್ ಚಲಿಸುತ್ತಿದ್ದ ಕಾರು ರಸ್ತೆ ಅಪಘಾತಕ್ಕೀಡಾಗಿದೆ. ಯತಿರಾಜ್ರವರ ಕಾರು ಬೆಂಗಳೂರು - ಚಿಕ್ಕಬಳ್ಳಾಪುರ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ.
ಯತಿರಾಜ್ರವರು ಕಾರಿನಲ್ಲಿ ಚಲಿಸುತ್ತಿದ್ದಾಗ ನಾಯಿಯೊಂದು ಅಡ್ಡ ಬಂದಿದೆ. ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತಿರಾಜ್ರವರು ಸ್ಟೀಯರಿಂಗ್ ವ್ಹೀಲ್ ತಿರುಗಿಸಿದ ಪರಿಣಾಮ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗವು ನಜ್ಜು ಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಲ್ಲಿ ಯತಿರಾಜ್ರವರಿಗೆ ಯಾವುದೇ ಗಾಯಗಳಾಗಿಲ್ಲ.
ಈ ಘಟನೆ ಬಗ್ಗೆ ಜಗ್ಗೇಶ್'ರವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಕರೋನಾ ಶುರುವಾದಾಗಿನಿಂದ ಮನೆಯಲ್ಲಿಯೇ ಇದ್ದ ಯತಿರಾಜ್, ಹೊರ ಹೋಗಿ ಬರುವೆ ಎಂದು ತಮ್ಮ ತಾಯಿಗೆ ತಿಳಿಸಿ ಹೊರ ಹೋಗಿದ್ದರು. ಅವರ ನೆಚ್ಚಿನ ಬೆಂಗಳೂರು - ಚಿಕ್ಕ ಬಳ್ಳಾಪುರ ರಸ್ತೆಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ.
ಕಾರಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋದಾಗ ಈ ಘಟನೆ ಸಂಭವಿಸಿದೆ. ರಾಯರ ದಯೆ ಹಾಗೂ ಜನರ ಶುಭ ಹಾರೈಕೆಯಿಂದ ಯತಿರಾಜ್ರವರಿಗೆ ಸಣ್ಣ ಗಾಯವೂ ಆಗಿಲ್ಲವೆಂದು ಜಗ್ಗೇಶ್'ರವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಯತಿರಾಜ್ ತಮ್ಮ ಬಿಳಿ ಬಣ್ಣದ ಬಿಎಂಡಬ್ಲು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಅಪಘಾತವಾದ ಸಂದರ್ಭದಲ್ಲಿ ಯತಿರಾಜ್ ಒಬ್ಬರೇ ಈ ಕಾರಿನಲ್ಲಿದ್ದರು ಎಂದು ಹೇಳಲಾಗಿದೆ.
ನವರಸ ನಾಯಕ ಜಗ್ಗೇಶ್'ರವರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಹಲವು ಸಂಗತಿಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿ ಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಅಪಘಾತಕ್ಕೀಡಾಗಿ ಮೃತಪಟ್ಟ ಸಂಚಾರಿ ವಿಜಯ್'ರವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಜಗ್ಗೇಶ್'ರವರು ಅವರನ್ನು ಕಾಣಲು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಜಗ್ಗೇಶ್'ರವರ ಎರಡನೇ ಪುತ್ರ ಯತಿರಾಜ್ರವರು ಸಹ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರು ತಮ್ಮ ತಂದೆ ಜಗ್ಗೇಶ್'ರವರೊಂದಿಗೂ ಕೆಲವು ಚಿತ್ರಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಗಮನಿಸಿ: ಈ ಲೇಖನದಲ್ಲಿ ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.