Just In
- 14 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 15 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 16 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 17 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಮ್ಮೆ ಸಂಕಷ್ಟಕ್ಕೆ ಸ್ಪಂದಿಸಿ ಹೀರೋ ಆದ ಖಳನಾಯಕ
ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರು ಅವರ ಊರುಗಳನ್ನು ತಲುಪಲು ನಟ ಸೋನು ಸೂದ್ ನೆರವಾಗಿದ್ದರು. ಈಗ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಆಂಧ್ರಪ್ರದೇಶದ ಬಡ ಕುಟುಂಬವೊಂದಕ್ಕೆ ಟ್ರ್ಯಾಕ್ಟರ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದು ವೈರಲ್ ಆಗಿತ್ತು. ಆ ವೀಡಿಯೊದಲ್ಲಿ ಜಮೀನು ಉಳುಮೆ ಮಾಡಲು ಎತ್ತುಗಳು ಇಲ್ಲದ ಕಾರಣಕ್ಕೆ ಇಬ್ಬರು ಸಹೋದರಿಯರು ನೇಗಿಲನ್ನು ಇಟ್ಟುಕೊಂಡು ಉಳುಮೆ ಮಾಡುತ್ತಿದ್ದರು. ಈ ವೀಡಿಯೊವನ್ನು ಟ್ವಿಟರ್ ನಲ್ಲಿ ನೋಡಿದ ಸೋನು ಸೂದ್ ಆ ಕುಟುಂಬಕ್ಕೆ ಅಂದು ಸಂಜೆ ಟ್ರಾಕ್ಟರ್ ತಲುಪಿಸುವುದಾಗಿ ಮಾಹಿತಿ ನೀಡಿದರು.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ನಾಗೇಶ್ವರ ರಾವ್ ರವರದ್ದು ಬಡ ಕುಟುಂಬವಾಗಿದ್ದು ಸಣ್ಣ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಅವರ ಹೆಣ್ಣು ಮಕ್ಕಳು ಸಹ ಅವರಿಗೆ ಕೃಷಿಯಲ್ಲಿ ನೆರವಾಗುತ್ತಿದ್ದಾರೆ. ಅವರು ತಮ್ಮ ಹೊಲವನ್ನು ನೇಗಿಲ ಮೂಲಕ ಉಳುಮೆ ಮಾಡುತ್ತಿದ್ದ ವೀಡಿಯೊ ಸಹ ವೈರಲ್ ಆಗಿತ್ತು.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಈ ವೀಡಿಯೊ ನೋಡಿದ ತಕ್ಷಣ ಟ್ರ್ಯಾಕ್ಟರ್ ನೀಡುವುದಾಗಿ ಸೋನು ಸೂದ್ ಭರವಸೆ ನೀಡಿದ್ದಾರೆ. ಭರವಸೆ ನೀಡಿ ಸುಮ್ಮನಾಗಿಲ್ಲ, ಬದಲಿಗೆ ಹೇಳಿದಂತೆ ಟ್ರ್ಯಾಕ್ಟರ್ ಅನ್ನು ತಲುಪಿಸಿದ್ದಾರೆ. ಅದೇ ದಿನ ಸಂಜೆ ನಾಗೇಶ್ವರ ರಾವ್ ಅವರ ಕುಟುಂಬಕ್ಕೆ ಸೋನಾಲಿಕಾ ಟ್ರಾಕ್ಟರ್ ತಲುಪಿಸಿದ್ದಾರೆ.
ಈ ಟ್ರ್ಯಾಕ್ಟರ್ ನಿಂದಾಗಿ ನಾಗೇಶ್ವರ ರಾವ್ ಅವರ ಕೃಷಿ ಕೆಲಸ ಸುಲಭವಾಗಲಿದೆ. ಲಾಕ್ ಡೌನ್ ಕಾರಣದಿಂದಾಗಿ ದೇಶದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ಧಾನ್ಯಗಳ ಬಗ್ಗೆ ಭ್ರಮನಿರಸನಗೊಂಡಿದ್ದಾರೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಲಾಕ್ ಡೌನ್ ಅವಧಿಯಲ್ಲಿ ಸೋನು ಸೂದ್ ಅವರು ಸಾಧ್ಯವಾದಷ್ಟು ಜನರಿಗೆ ನೆರವಾಗುತ್ತಿದ್ದಾರೆ. ಈ ಹಿಂದೆ ಅವರು ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ನೆರವಾಗಿದ್ದರು.
ಈ ಬಡ ಕುಟುಂಬಕ್ಕೆ ಸೋನು ಸೂದ್ ಅವರು ಟ್ರಾಕ್ಟರ್ ನೀಡಿರುವ ವಿಷಯ ಬೆಳಕಿಗೆ ಬಂದ ಕೂಡಲೇ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರು ಈ ಕುಟುಂಬದ ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತು ಅವರ ಕನಸುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿ ಟ್ವೀಟ್ ಮಾಡಿದ್ದಾರೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಈ ಬಗ್ಗೆ ಸೋನು ಸೂದ್ ರವರು ಸಹ ಟ್ವೀಟ್ ಮಾಡಿದ್ದು ಚಂದ್ರಬಾಬು ನಾಯ್ಡುರವರ ಮಾತುಗಳು ಸ್ಪೂರ್ತಿ ನೀಡುತ್ತವೆ ಎಂದು ಹೇಳಿದ್ದಾರೆ. ಸೋನು ಸೂದ್ ರವರ ಈ ಕಾರ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಲಾಗುತ್ತಿದೆ. ಸೋನು ಸೂದ್ ರವರು ಇತ್ತೀಚೆಗಷ್ಟೇ ವಿದೇಶದಲ್ಲಿ ಸಿಕ್ಕಿಬಿದ್ದಿರುವ ಭಾರತೀಯ ವಿದ್ಯಾರ್ಥಿಗಳನ್ನು ಮರಳಿ ಕರೆತರಲು ನೆರವಾಗುವುದಾಗಿ ಹೇಳಿದ್ದರು.
ಇನ್ನೂ ಅನೇಕ ಜನ ಭಾರತೀಯರು ವಿಶ್ವದ ಹಲವು ದೇಶಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ ಹಲವಾರು ಜನರನ್ನು ಕರೆತಂದಿದೆ. ಸೋನು ಸೂದ್ ಮತ್ತಷ್ಟು ಜನರನ್ನು ಕರೆತರಲು ಮುಂದಾಗಿದ್ದು, ಮತ್ತೊಮ್ಮೆ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಸೋನು ಸೂದ್ ರವರು ಕನ್ನಡಲ್ಲಿ ವಿಷ್ಣುವರ್ಧನ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.