Just In
- 29 min ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 52 min ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 53 min ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 1 hr ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- Movies ಬಯಸಿದ್ದು ಬಾಲಿವುಡ್ ಸಿನಿಮಾ, ಗೆದ್ದಿದ್ದು ತೆಲುಗು ಸಿನಿಮಾ; ಈ ನಟಿಯ ಭವಿಷ್ಯವೇನು?
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಲ್ಲಿ ಕನ್ನಡದ ಖ್ಯಾತ ಸೀರಿಯಲ್ ನಟಿ ರಚನಾ ಮತ್ತು ಸಹನಟ ಜೀವನ್ ಸಾವು
ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ನೆಲಮಂಗಲ ಸಮೀಪದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಹಿಯ ನಟ, ನಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ನೆಲಮಂಗಲ ಸಮೀಪದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಹಿಯ ನಟ, ನಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆಯಲ್ಲಿ ಖ್ಯಾತ ಕಿರುತೆರೆ ನಟಿ ರಚನಾ(23) ಹಾಗೂ ಸಹನಟ ಜೀವನ್(25) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸ್ನೇಹಿತರ ಜತೆ ರಚನಾ ಮತ್ತು ಜೀವನ್ ಸಫಾರಿ ಕಾರ್ನಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂಬ ಮಾಹಿತಿ ಬಂದಿದೆ.
ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ನಟ ಕಾರ್ತಿಕ್ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆ ಮುಗಿಸಿ ಕುಕ್ಕೆ ಸುಬ್ರಮಣ್ಯ ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಮಾಗಡಿ ತಾಲೂಕು ಸೋಲೂರು ಬಳಿ ರಚನಾ ಹಾಗೂ ಜೀವನ್ ಅವರಿದ್ದ ಸಫಾರಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಿಂತಿದ್ದ ಕ್ಯಾಂಟರ್ಗೆ ಕಾರು ಡಿಕ್ಕಿಯಾದ ಪರಿಣಾಮ ಘಟನೆಯ ತೀವ್ರತೆ ಹೆಚ್ಚಿಗೆ ಎನ್ನಬಹುದು.
Recommended Video
ಮೃತ ಕಿರುತೆರೆ ನಟಿ ರಚನಾ ತ್ರಿವೇಣಿ ಸಂಗಮ, ಮಧುಬಾಲ, ಮಹಾನದಿ ಧಾರವಾಹಿಯಲ್ಲಿ ನಟಿಸಿದ್ದು, ಮಹಾನದಿ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿ ಹೆಚ್ಚು ಖ್ಯಾತಿಗಳಿಸಿದ್ದರು.
ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನೆಡೆದಿದ್ದು, ಸಫಾರಿ ಕಾರಿನ ಹಿಂಬದಿಯಲ್ಲಿ ಕುಳಿತಿದ್ದ ಸಹ ನಟರಾದ ರಂಜಿತ್, ಉತ್ತಮ್, ಹೊನ್ನೇಶ್, ಕಾರ್ತಿಕ್ ಮಾತು ಎರಿಕ್ ಅವರಿಗೆ ಗಾಯಗಳಾಗಿದ್ದು, ಎಲ್ಲರೂ ಸಹ ನೆಲಮಂಗಲದ ಹರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ಇದೆ.
ಮಧ್ಯರಾತ್ರಿಯಾದ ಕಾರಣ, ನಿದ್ದೆ ಮಂಪರಿನಲ್ಲಿ ಅತಿ ವೇಗವಾಗಿ ಚಲಿಸಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಗುದ್ದುವುದನ್ನು ತಪ್ಪಿಸಲು ಎಡಭಾಗಕ್ಕೆ ಕಾರನ್ನು ಚಲಾಯಿಸಿದರ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಗಾಯಾಳುಗಳು ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ.